<p><strong>ನವದೆಹಲಿ:</strong> ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ವಿರೋಧಿ ಬಣದಲ್ಲಿ ಗುರುತಿಸಿಕೊಂಡಿರುವ ಪಕ್ಷದ ನಾಯಕರ ನಿಯೋಗವು ಸೋಮವಾರ ಇಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರನ್ನು ಭೇಟಿ ಮಾಡಿ ವಕ್ಫ್ ಆಸ್ತಿಗಳ ರಾಷ್ಟ್ರೀಕರಣಕ್ಕೆ ಒತ್ತಾಯಿಸಿತು.</p>.<p>ನಿಯೋಗದಲ್ಲಿ ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ, ಅರವಿಂದ ಲಿಂಬಾವಳಿ, ಕುಮಾರ್ ಬಂಗಾರಪ್ಪ, ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವು ನಾಯಕರು ಇದ್ದರು.</p>.<p>‘ಕರ್ನಾಟಕ ಸರ್ಕಾರವು ಸಾವಿರಾರು ರೈತರ ಜಮೀನುಗಳನ್ನು ವಕ್ಫ್ ಆಸ್ತಿ ಎಂದು ವರ್ಗೀಕರಿಸಲು ಮುಂದಾಗಿದೆ. ಈ ಸಂಬಂಧ ರೈತರಿಗೆ ನೋಟಿಸ್ಗಳನ್ನು ನೀಡಿದೆ. ಇದರಿಂದಾಗಿ, ರೈತರು ಆತಂಕಕ್ಕೆ ಒಳಗಾಗಿದ್ದಾರೆ. ವಕ್ಫ್ ಮೇಲೆ ನಿಷೇಧ ಹೇರಬೇಕು ಮತ್ತು ವಕ್ಫ್ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸಬೇಕು’ ಎಂದು ನಿಯೋಗ ಒತ್ತಾಯಿಸಿತು.</p>.<p>ಮೊದಲ ಹಂತದ ವಕ್ಫ್ ಹೋರಾಟ ನಡೆಸಿದ್ದ ಈ ನಾಯಕರು ವಕ್ಫ್ (ತಿದ್ದುಪಡಿ) ಮಸೂದೆಯ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರನ್ನು ಇತ್ತೀಚೆಗೆ ಭೇಟಿ ಮಾಡಿ ದಾಖಲೆಗಳನ್ನು ಸಲ್ಲಿಸಿದ್ದರು. ಎರಡನೇ ಹಂತದ ಹೋರಾಟ ನಡೆಸಲು ಭಿನ್ನಮತೀಯ ನಾಯಕ ಬಸನಗೌಡ ಪಾಟೀಲ ಯತ್ನಾಳ ಅವರು ವರಿಷ್ಠರ ಒಪ್ಪಿಗೆ ಪಡೆದಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ವಿರೋಧಿ ಬಣದಲ್ಲಿ ಗುರುತಿಸಿಕೊಂಡಿರುವ ಪಕ್ಷದ ನಾಯಕರ ನಿಯೋಗವು ಸೋಮವಾರ ಇಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರನ್ನು ಭೇಟಿ ಮಾಡಿ ವಕ್ಫ್ ಆಸ್ತಿಗಳ ರಾಷ್ಟ್ರೀಕರಣಕ್ಕೆ ಒತ್ತಾಯಿಸಿತು.</p>.<p>ನಿಯೋಗದಲ್ಲಿ ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ, ಅರವಿಂದ ಲಿಂಬಾವಳಿ, ಕುಮಾರ್ ಬಂಗಾರಪ್ಪ, ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವು ನಾಯಕರು ಇದ್ದರು.</p>.<p>‘ಕರ್ನಾಟಕ ಸರ್ಕಾರವು ಸಾವಿರಾರು ರೈತರ ಜಮೀನುಗಳನ್ನು ವಕ್ಫ್ ಆಸ್ತಿ ಎಂದು ವರ್ಗೀಕರಿಸಲು ಮುಂದಾಗಿದೆ. ಈ ಸಂಬಂಧ ರೈತರಿಗೆ ನೋಟಿಸ್ಗಳನ್ನು ನೀಡಿದೆ. ಇದರಿಂದಾಗಿ, ರೈತರು ಆತಂಕಕ್ಕೆ ಒಳಗಾಗಿದ್ದಾರೆ. ವಕ್ಫ್ ಮೇಲೆ ನಿಷೇಧ ಹೇರಬೇಕು ಮತ್ತು ವಕ್ಫ್ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸಬೇಕು’ ಎಂದು ನಿಯೋಗ ಒತ್ತಾಯಿಸಿತು.</p>.<p>ಮೊದಲ ಹಂತದ ವಕ್ಫ್ ಹೋರಾಟ ನಡೆಸಿದ್ದ ಈ ನಾಯಕರು ವಕ್ಫ್ (ತಿದ್ದುಪಡಿ) ಮಸೂದೆಯ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರನ್ನು ಇತ್ತೀಚೆಗೆ ಭೇಟಿ ಮಾಡಿ ದಾಖಲೆಗಳನ್ನು ಸಲ್ಲಿಸಿದ್ದರು. ಎರಡನೇ ಹಂತದ ಹೋರಾಟ ನಡೆಸಲು ಭಿನ್ನಮತೀಯ ನಾಯಕ ಬಸನಗೌಡ ಪಾಟೀಲ ಯತ್ನಾಳ ಅವರು ವರಿಷ್ಠರ ಒಪ್ಪಿಗೆ ಪಡೆದಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>