ಚಳಿಗಾಲ ಆರಂಭವಾಗುತ್ತಿದ್ದಂತೆ ಕುರಿಗಾಹಿಗಳು ವಲಸೆ ಹೋಗುವುದು ವಾಡಿಕೆ. ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಬಳ್ಳಾರಿ ಹಾಗೂ ಆಂಧ್ರಪ್ರದೇಶ ಸೇರಿ ಹಲವೆಡೆಗೆ ಕುರಿ ಹಿಂಡಿನೊಂದಿಗೆ ತೆರಳುತ್ತಾರೆ. ಕುರಿ ಗೊಬ್ಬರ ಹಾಗೂ ಗಂಜಲ ರೈತರ ಭೂಮಿಯ ಫಲವತ್ತತೆ ಹೆಚ್ಚಿಸುತ್ತವೆ. ಇದಕ್ಕೆ ಪ್ರತಿಯಾಗಿ ರೈತರು ಧಾನ್ಯ ಹಾಗೂ ಹಣ ನೀಡುತ್ತಾರೆ.