ಕೆಆರ್ಎಸ್ನಿಂದ 1,17,996 ಕ್ಯುಸೆಕ್ ನೀರು ಹೊರಬಿಡುತ್ತಿದ್ದು, ಶ್ರೀರಂಗಪಟ್ಟಣದಲ್ಲಿ ಪ್ರವಾಹ ಜೋರಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಐತಿಹಾಸಿಕ ವೆಲ್ಲೆಸ್ಲಿ ಸೇತುವೆಗೆ ತೆರಳುವ ಮಾರ್ಗ ಸೇರಿದಂತೆ, ಸೋಪಾನಕಟ್ಟೆ, ಜಿ.ಬಿ.ಗೇಟ್ ಬಳಿ ಬ್ಯಾರಿಕೇಡ್ಗಳನ್ನು ಹಾಕಿ ನದಿಯ ಬಳಿ ನಾಗರಿಕರು ತೆರಳದಂತೆ ಪ್ರವೇಶ ನಿರ್ಬಂಧಿಸಲಾಗಿದೆ. ಅಂತೆಯೇ, ಇಲ್ಲಿನ ಪಶ್ಚಿಮ ವಾಹಿನಿಗೆ ತೆರಳುವ ರಸ್ತೆಯು ಸಂಪೂರ್ಣವಾಗಿ ನೀರಿನಿಂದ ಮುಳುಗಿದ್ದು, ರಸ್ತೆಯನ್ನು ಬಂದ್ ಮಾಡಲಾಗಿದೆ.