<p><strong>ಯಲಹಂಕ:</strong> ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿ.ಆರ್.ಪಿ.ಎಫ್) ಸಿಬ್ಬಂದಿ ಕ್ವಾರ್ಟಸ್ಗಳಿಗೆ ಬೆಂಗಳೂರು ಜಲಮಂಡಳಿಯಿಂದ ನೀರು ಪೂರೈಕೆಯಾಗುತ್ತಿಲ್ಲ ಎಂದು ಆರೋಪಿಸಿ, ಸಿಪಾಯಿಗಳ ಕುಟುಂಬ ಸದಸ್ಯರು ಪ್ರತಿಭಟನೆ ನಡೆಸಿದರು.</p>.<p>ಶುಕ್ರವಾರ ವರಮಹಾಲಕ್ಷ್ಮಿ ಹಬ್ಬವಿದ್ದು, ನೀರಿನ ಕೊರತೆ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ನೂರಾರು ಮಹಿಳೆಯರು, ಯಲಹಂಕ-ದೊಡ್ಡಬಳ್ಳಾಪುರ ಮುಖ್ಯರಸ್ತೆಯ ಸಿ.ಆರ್.ಪಿ.ಎಫ್ ಕೇಂದ್ರದ ಗೇಟ್ನ ಮುಂಭಾಗದಲ್ಲಿ ಗುರುವಾರ ಸಂಜೆ ರಸ್ತೆತಡೆ ನಡೆಸಿ ಪ್ರತಿಭಟಿಸಿದರು.</p>.<p>ಮುಖ್ಯರಸ್ತೆ ಪಕ್ಕದಲ್ಲಿ ಎರಡು ಗಂಟೆ ಪ್ರತಿಭಟಿಸಿದ್ದು, ವಾಹನಸಂಚಾರ ವ್ಯತ್ಯಯವಾಗಿತ್ತು. ಪೊಲೀಸರು ಪ್ರತಿಭಟನಕಾರರ ಮನವೊಲಿಸಿ, ಸಂಚಾರಕ್ಕೆ ಅನುವುಮಾಡಿಕೊಟ್ಟರು.</p>.<p>'ಕ್ವಾರ್ಟಸ್ನಲ್ಲಿ ಎರಡು ಸಾವಿರಕ್ಕೂ ಹೆಚ್ಚು ಮನೆಗಳಿವೆ. 20 ದಿನಗಳಿಂದ ಸರಿಯಾಗಿ ನೀರು ಪೂರೈಕೆ ಆಗಿಲ್ಗ. ಅಧಿಕಾರಿಗಳ ಮನೆಗಳಿಗೆ ಸಮರ್ಪಕವಾಗಿ ನೀರು ಪೂರೈಕೆಯಾಗುತ್ತಿದೆ. ಟ್ಯಾಂಕರ್ ಮೂಲಕ ಕೆಲವೊಮ್ಮೆ ನೀರು ಸರಬರಾಜು ಮಾಡುತ್ತಿದ್ದು, ಬಿಂದಿಗೆಗಳಲ್ಲಿ ಒಯ್ಯುವಸ್ಥಿತಿ ನಿರ್ಮಾಣವಾಗಿದೆ' ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಬೆಂಗಳೂರು ಜಲಮಂಡಳಿ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಗುರುವಾರ ರಾತ್ರಿಯಿಂದಲೇ ನೀರು ಪೂರೈಸುವ ಭರವಸೆ ನೀಡಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ:</strong> ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿ.ಆರ್.ಪಿ.ಎಫ್) ಸಿಬ್ಬಂದಿ ಕ್ವಾರ್ಟಸ್ಗಳಿಗೆ ಬೆಂಗಳೂರು ಜಲಮಂಡಳಿಯಿಂದ ನೀರು ಪೂರೈಕೆಯಾಗುತ್ತಿಲ್ಲ ಎಂದು ಆರೋಪಿಸಿ, ಸಿಪಾಯಿಗಳ ಕುಟುಂಬ ಸದಸ್ಯರು ಪ್ರತಿಭಟನೆ ನಡೆಸಿದರು.</p>.<p>ಶುಕ್ರವಾರ ವರಮಹಾಲಕ್ಷ್ಮಿ ಹಬ್ಬವಿದ್ದು, ನೀರಿನ ಕೊರತೆ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ನೂರಾರು ಮಹಿಳೆಯರು, ಯಲಹಂಕ-ದೊಡ್ಡಬಳ್ಳಾಪುರ ಮುಖ್ಯರಸ್ತೆಯ ಸಿ.ಆರ್.ಪಿ.ಎಫ್ ಕೇಂದ್ರದ ಗೇಟ್ನ ಮುಂಭಾಗದಲ್ಲಿ ಗುರುವಾರ ಸಂಜೆ ರಸ್ತೆತಡೆ ನಡೆಸಿ ಪ್ರತಿಭಟಿಸಿದರು.</p>.<p>ಮುಖ್ಯರಸ್ತೆ ಪಕ್ಕದಲ್ಲಿ ಎರಡು ಗಂಟೆ ಪ್ರತಿಭಟಿಸಿದ್ದು, ವಾಹನಸಂಚಾರ ವ್ಯತ್ಯಯವಾಗಿತ್ತು. ಪೊಲೀಸರು ಪ್ರತಿಭಟನಕಾರರ ಮನವೊಲಿಸಿ, ಸಂಚಾರಕ್ಕೆ ಅನುವುಮಾಡಿಕೊಟ್ಟರು.</p>.<p>'ಕ್ವಾರ್ಟಸ್ನಲ್ಲಿ ಎರಡು ಸಾವಿರಕ್ಕೂ ಹೆಚ್ಚು ಮನೆಗಳಿವೆ. 20 ದಿನಗಳಿಂದ ಸರಿಯಾಗಿ ನೀರು ಪೂರೈಕೆ ಆಗಿಲ್ಗ. ಅಧಿಕಾರಿಗಳ ಮನೆಗಳಿಗೆ ಸಮರ್ಪಕವಾಗಿ ನೀರು ಪೂರೈಕೆಯಾಗುತ್ತಿದೆ. ಟ್ಯಾಂಕರ್ ಮೂಲಕ ಕೆಲವೊಮ್ಮೆ ನೀರು ಸರಬರಾಜು ಮಾಡುತ್ತಿದ್ದು, ಬಿಂದಿಗೆಗಳಲ್ಲಿ ಒಯ್ಯುವಸ್ಥಿತಿ ನಿರ್ಮಾಣವಾಗಿದೆ' ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಬೆಂಗಳೂರು ಜಲಮಂಡಳಿ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಗುರುವಾರ ರಾತ್ರಿಯಿಂದಲೇ ನೀರು ಪೂರೈಸುವ ಭರವಸೆ ನೀಡಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>