ಬಾಡೂಟ; ಚರ್ಚೆಗೆ ಗ್ರಾಸ: ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಿಲಾನ್ಯಾಸ ಸಮಾರಂಭಗಳಿಗೆ ಜಿ.ಟಿ.ದೇವೇಗೌಡ, ಬಿಜೆಪಿ ಸಂಸದ ಪ್ರತಾಪಸಿಂಹ ಭಾನುವಾರ ಒಂದೇ ಕಾರಿನಲ್ಲಿ ಸಂಚರಿಸಿದರು. ಅಲ್ಲದೇ; ತಾಲ್ಲೂಕು ಪಂಚಾಯಿತಿ ಸದಸ್ಯರೊಬ್ಬರ ಮನೆಯಲ್ಲಿ ಒಟ್ಟಿಗೆ ಬಾಡೂಟ ಸವಿದಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವೊದಗಿಸಿದೆ.