ಸಾಮಾಜಿಕ ನ್ಯಾಯದ ಹರಿಕಾರರಾಗಿದ್ದ ಅರಸು ಹಲವು ಸಾಮಾಜಿಕ, ಕ್ರಾಂತಿಕಾರಿ ತೀರ್ಮಾನಗಳನ್ನು ಕೈಗೊಂಡಿದ್ದರು. ಭೂ ಸುಧಾರಣಾ ಕಾಯ್ದೆ, ಜೀತಪದ್ಧತಿ ಮುಕ್ತಿ, ಮಲಹೊರುವ ಪದ್ಧತಿ ನಿಷೇಧಕ್ಕೆ ಶ್ರಮಿಸಿದ್ದರು. ರೈತರ ಸಾಲ ವಿಮೋಚನಾ ಕಾಯ್ದೆ ಜಾರಿಗೆ ತಂದಿದ್ದರು. ‘ಹಾವನೂರು ಆಯೋಗ‘ ರಚಿಸಿ ಹಿಂದುಳಿದ ಜಾತಿಗಳಿಗೆ ಮೀಸಲಾತಿ ಕಲ್ಪಿಸಿದ್ದರು. ಧ್ವನಿಯಿಲ್ಲದ ಜನರ ದನಿಯಾಗಿದ್ದರು. ರಾಜಕೀಯ ವ್ಯವಸ್ಥೆಯಲ್ಲಿಯೂ ಸಾಮಾಜಿಕ ನ್ಯಾಯ ತರಲು ಶ್ರಮಿಸಿದ್ದರು ಎಂದರು.