<p><strong>ನವದೆಹಲಿ:</strong> ‘ಕೆಲವರ ರಾಜಿ ಹಾಗೂ ಹೊಂದಾಣಿಕೆ ರಾಜಕಾರಣದಿಂದಲೂ ಸಹ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡಿತು’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. </p>.<p>ಶುಕ್ರವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ನಮ್ಮ ಕಡೆಯಿಂದ ತಪ್ಪಾಗಿದೆ. ಕೆಲವರ ರಾಜಿ ರಾಜಕಾರಣದಿಂದ ಪಕ್ಷಕ್ಕೆ ತೊಂದರೆ ಆಯಿತು. ತಪ್ಪು ಮಾಡಿದವರ ಜತೆಗೆ ರಾಜಿ ಮಾಡಿಕೊಳ್ಳದೆ ಬೀದಿಗೆ ನಿಲ್ಲಿಸಿ ರಾಜಕಾರಣ ಮಾಡಿದ್ದರೆ ಈ ಸ್ಥಿತಿ ಬರುತ್ತಿರಲಿಲ್ಲ’ ಎಂದು ವ್ಯಾಖ್ಯಾನಿಸಿದರು. </p>.<p>‘ತಪ್ಪು ಮಾಡಿದವರನ್ನು ನಾವು ಬೀದಿಗೆ ನಿಲ್ಲಿಸಬೇಕಿತ್ತು. ಆಗ ಪಕ್ಷಕ್ಕೆ ಈ ಸ್ಥಿತಿ ಬರುತ್ತಿರಲಿಲ್ಲ. ಪಕ್ಷ ಅಧಿಕಾರ ಕಳೆದುಕೊಳ್ಳುತ್ತಿರಲಿಲ್ಲ. ನಾವು ತಪ್ಪಿತಸ್ಥರ ಸಾಲಿನಲ್ಲಿ ನಿಲ್ಲುತ್ತಿರಲಿಲ್ಲ’ ಎಂದು ಅವರು ಹೇಳಿದರು. </p>.<p>‘2013–18ರ ಅವಧಿಯಲ್ಲಿ ನಡೆದ ಅರ್ಕಾವತಿ ಹಗರಣದ ಬಗ್ಗೆ ತನಿಖೆ ನಡೆಸಿ ಎಂದು ಹಲವು ಸಲ ನಾವು ಒತ್ತಾಯ ಮಾಡಿದ್ದೆವು. ಈ ಬಗ್ಗೆ ತನಿಖೆ ನಡೆಸಬೇಕಿತ್ತು. ಆದರೆ, ಆ ಕೆಲಸ ಆಗಲಿಲ್ಲ. ಕಾಂಗ್ರೆಸ್ ಸರ್ಕಾರದ ಅವಧಿಯ ಸೌರಶಕ್ತಿ ಹಗರಣದ ಬಗ್ಗೆಯೂ ತನಿಖೆ ನಡೆಸುವಂತೆ ಕೇಳಿಕೊಂಡಿದ್ದೆವು. ನಾವು ಹೇಳಿದ್ದನ್ನು ಕೇಳಲಿಲ್ಲ. ಇವುಗಳ ತನಿಖೆ ನಡೆಸದೆ ಸದನವನ್ನು ಮುಂದೂಡಿದರು’ ಎಂದು ಅವರು ಬೇಸರ ವ್ಯಕ್ತಪಡಿಸಿದರು. </p>.<p>‘ಸಿದ್ದರಾಮಯ್ಯ ಸರ್ಕಾರದ ಅವಧಿಯ ಅರ್ಕಾವತಿ ಹಗರಣದಿಂದ ಬೊಕ್ಕಸಕ್ಕೆ ₹8 ಸಾವಿರ ಕೋಟಿ ನಷ್ಟ ಉಂಟಾಗಿದೆ. ತಪ್ಪಿತಸ್ಥರನ್ನು ಜೈಲಿಗೆ ಅಟ್ಟುತ್ತೇವೆ’ ಎಂದು ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಲವು ಸಲ ಹೇಳಿದ್ದರು. ‘ಸಿದ್ದರಾಮಯ್ಯ ವಿರುದ್ಧ 57 ಪ್ರಕರಣಗಳು ದಾಖಲಾಗಿದ್ದು, ಅವುಗಳನ್ನು ಲೋಕಾಯುಕ್ತಕ್ಕೆ ಒಪ್ಪಿಸುತ್ತೇವೆ’ ಎಂದೂ ಹೇಳಿದ್ದರು.</p>.<p>ಸಿ.ಟಿ.ರವಿ ಪರಮಾಪ್ತರಾಗಿದ್ದ ಎಚ್.ಡಿ.ತಮ್ಮಯ್ಯ ಅವರು ವಿಧಾನಸಭಾ ಚುನಾವಣೆಗೆ ಆರು ತಿಂಗಳು ಇದ್ದಾಗ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದರು. ಅವರನ್ನು ಕಾಂಗ್ರೆಸ್ ಕಣಕ್ಕೆ ಇಳಿಸಿತ್ತು. ತಮ್ಮಯ್ಯ ವಿರುದ್ಧ ರವಿ ಸೋತಿದ್ದರು. ತಮ್ಮ ಸೋಲಿಗೆ ಪಕ್ಷದಲ್ಲಿರುವ ಕೆಲವರ ಷಡ್ಯಂತ್ರವೂ ಕಾರಣ ಎಂದು ರವಿ ಅವರು ಆಪ್ತರಲ್ಲಿ ಹೇಳಿಕೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಕೆಲವರ ರಾಜಿ ಹಾಗೂ ಹೊಂದಾಣಿಕೆ ರಾಜಕಾರಣದಿಂದಲೂ ಸಹ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡಿತು’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. </p>.<p>ಶುಕ್ರವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ನಮ್ಮ ಕಡೆಯಿಂದ ತಪ್ಪಾಗಿದೆ. ಕೆಲವರ ರಾಜಿ ರಾಜಕಾರಣದಿಂದ ಪಕ್ಷಕ್ಕೆ ತೊಂದರೆ ಆಯಿತು. ತಪ್ಪು ಮಾಡಿದವರ ಜತೆಗೆ ರಾಜಿ ಮಾಡಿಕೊಳ್ಳದೆ ಬೀದಿಗೆ ನಿಲ್ಲಿಸಿ ರಾಜಕಾರಣ ಮಾಡಿದ್ದರೆ ಈ ಸ್ಥಿತಿ ಬರುತ್ತಿರಲಿಲ್ಲ’ ಎಂದು ವ್ಯಾಖ್ಯಾನಿಸಿದರು. </p>.<p>‘ತಪ್ಪು ಮಾಡಿದವರನ್ನು ನಾವು ಬೀದಿಗೆ ನಿಲ್ಲಿಸಬೇಕಿತ್ತು. ಆಗ ಪಕ್ಷಕ್ಕೆ ಈ ಸ್ಥಿತಿ ಬರುತ್ತಿರಲಿಲ್ಲ. ಪಕ್ಷ ಅಧಿಕಾರ ಕಳೆದುಕೊಳ್ಳುತ್ತಿರಲಿಲ್ಲ. ನಾವು ತಪ್ಪಿತಸ್ಥರ ಸಾಲಿನಲ್ಲಿ ನಿಲ್ಲುತ್ತಿರಲಿಲ್ಲ’ ಎಂದು ಅವರು ಹೇಳಿದರು. </p>.<p>‘2013–18ರ ಅವಧಿಯಲ್ಲಿ ನಡೆದ ಅರ್ಕಾವತಿ ಹಗರಣದ ಬಗ್ಗೆ ತನಿಖೆ ನಡೆಸಿ ಎಂದು ಹಲವು ಸಲ ನಾವು ಒತ್ತಾಯ ಮಾಡಿದ್ದೆವು. ಈ ಬಗ್ಗೆ ತನಿಖೆ ನಡೆಸಬೇಕಿತ್ತು. ಆದರೆ, ಆ ಕೆಲಸ ಆಗಲಿಲ್ಲ. ಕಾಂಗ್ರೆಸ್ ಸರ್ಕಾರದ ಅವಧಿಯ ಸೌರಶಕ್ತಿ ಹಗರಣದ ಬಗ್ಗೆಯೂ ತನಿಖೆ ನಡೆಸುವಂತೆ ಕೇಳಿಕೊಂಡಿದ್ದೆವು. ನಾವು ಹೇಳಿದ್ದನ್ನು ಕೇಳಲಿಲ್ಲ. ಇವುಗಳ ತನಿಖೆ ನಡೆಸದೆ ಸದನವನ್ನು ಮುಂದೂಡಿದರು’ ಎಂದು ಅವರು ಬೇಸರ ವ್ಯಕ್ತಪಡಿಸಿದರು. </p>.<p>‘ಸಿದ್ದರಾಮಯ್ಯ ಸರ್ಕಾರದ ಅವಧಿಯ ಅರ್ಕಾವತಿ ಹಗರಣದಿಂದ ಬೊಕ್ಕಸಕ್ಕೆ ₹8 ಸಾವಿರ ಕೋಟಿ ನಷ್ಟ ಉಂಟಾಗಿದೆ. ತಪ್ಪಿತಸ್ಥರನ್ನು ಜೈಲಿಗೆ ಅಟ್ಟುತ್ತೇವೆ’ ಎಂದು ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಲವು ಸಲ ಹೇಳಿದ್ದರು. ‘ಸಿದ್ದರಾಮಯ್ಯ ವಿರುದ್ಧ 57 ಪ್ರಕರಣಗಳು ದಾಖಲಾಗಿದ್ದು, ಅವುಗಳನ್ನು ಲೋಕಾಯುಕ್ತಕ್ಕೆ ಒಪ್ಪಿಸುತ್ತೇವೆ’ ಎಂದೂ ಹೇಳಿದ್ದರು.</p>.<p>ಸಿ.ಟಿ.ರವಿ ಪರಮಾಪ್ತರಾಗಿದ್ದ ಎಚ್.ಡಿ.ತಮ್ಮಯ್ಯ ಅವರು ವಿಧಾನಸಭಾ ಚುನಾವಣೆಗೆ ಆರು ತಿಂಗಳು ಇದ್ದಾಗ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದರು. ಅವರನ್ನು ಕಾಂಗ್ರೆಸ್ ಕಣಕ್ಕೆ ಇಳಿಸಿತ್ತು. ತಮ್ಮಯ್ಯ ವಿರುದ್ಧ ರವಿ ಸೋತಿದ್ದರು. ತಮ್ಮ ಸೋಲಿಗೆ ಪಕ್ಷದಲ್ಲಿರುವ ಕೆಲವರ ಷಡ್ಯಂತ್ರವೂ ಕಾರಣ ಎಂದು ರವಿ ಅವರು ಆಪ್ತರಲ್ಲಿ ಹೇಳಿಕೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>