‘2013–18ರ ಅವಧಿಯಲ್ಲಿ ನಡೆದ ಅರ್ಕಾವತಿ ಹಗರಣದ ಬಗ್ಗೆ ತನಿಖೆ ನಡೆಸಿ ಎಂದು ಹಲವು ಸಲ ನಾವು ಒತ್ತಾಯ ಮಾಡಿದ್ದೆವು. ಈ ಬಗ್ಗೆ ತನಿಖೆ ನಡೆಸಬೇಕಿತ್ತು. ಆದರೆ, ಆ ಕೆಲಸ ಆಗಲಿಲ್ಲ. ಕಾಂಗ್ರೆಸ್ ಸರ್ಕಾರದ ಅವಧಿಯ ಸೌರಶಕ್ತಿ ಹಗರಣದ ಬಗ್ಗೆಯೂ ತನಿಖೆ ನಡೆಸುವಂತೆ ಕೇಳಿಕೊಂಡಿದ್ದೆವು. ನಾವು ಹೇಳಿದ್ದನ್ನು ಕೇಳಲಿಲ್ಲ. ಇವುಗಳ ತನಿಖೆ ನಡೆಸದೆ ಸದನವನ್ನು ಮುಂದೂಡಿದರು’ ಎಂದು ಅವರು ಬೇಸರ ವ್ಯಕ್ತಪಡಿಸಿದರು.