ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯ, ಬಾದಾಮಿ ಚಿಮ್ಮನಕಟ್ಟಿ ಮುನಿಸಿಗೆ ತೇಪೆ ಹಚ್ಚಿದ ಆರ್.ಧ್ರುವನಾರಾಯಣ

ಬಿ.ಬಿ.ಚಿಮ್ಮನಕಟ್ಟಿಗೆ ಬೇರೆ ರೀತಿಯಲ್ಲಿ ಸಹಾಯ
Last Updated 7 ಡಿಸೆಂಬರ್ 2021, 7:53 IST
ಅಕ್ಷರ ಗಾತ್ರ

ಮೈಸೂರು: ಬಿ.ಬಿ.ಚಿಮ್ಮನಕಟ್ಟಿ ಅವರಿಗೆ ಕಾಂಗ್ರೆಸ್ ಪಕ್ಷವು ಬೇರೆ ರೀತಿಯಲ್ಲಿ ಸಹಾಯ ಮಾಡುತ್ತದೆ. ಬಾದಾಮಿ ಕ್ಷೇತ್ರದ ಜನರು ಸಿದ್ದರಾಮಯ್ಯ ಅವರಿಗೆ ಬೆಂಬಲ ನೀಡಿದ್ದಾರೆ. ಮತದಾರರ ಮಾತಿಗೆ ಮನ್ನಣೆ ಕೊಡಬೇಕಿದೆ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ತಿಳಿಸಿದರು.

ಸಿದ್ದರಾಮಯ್ಯ ಒಬ್ಬ ಜನನಾಯಕ. ಅವರು ರಾಜ್ಯದಲ್ಲಿ ಎಲ್ಲಿ ಬೇಕಾದರೂ ಚುನಾವಣೆಗೆ ನಿಲ್ಲಬಹುದು ಎಂದು ಇಲ್ಲಿ ಮಂಗಳವಾರ ಸುದ್ದಿಗಾರರಿಗೆ ಹೇಳಿದರು.

ಕಾಂಗ್ರೆಸ್ ಪರವಾಗಿ ಎದ್ದಿರುವ ಅಲೆಯಿಂದ ಜೆಡಿಎಸ್ ಗೆ ಅಸ್ತಿತ್ವದ ಭಯ ಮೂಡಿದೆ. ಬಿಜೆಪಿ ಈ ಭಯವನ್ನು ಉಪಯೋಗಿಸಿಕೊಂಡು ಮುಂದಿನ ಚುನಾವಣೆಯಲ್ಲಿ ಗೆಲ್ಲಲು ಮೈತ್ರಿಗೆ ಮುಂದಾಗಿದೆ. ವಿಧಾನಸಭೆಯ ಉಪ ಚುನಾವಣೆಯಲ್ಲಿ ತೆರೆಮರೆಯಲ್ಲಿ ನಡೆದಿದ್ದ ಮೈತ್ರಿಯನ್ನು ಈಗ ಬಹಿರಂಗವಾಗಿ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT