‘ರಾಜ್ಯದಲ್ಲಿ ಪುಂಡಾಟಿಕೆ ಮಾಡಿದ ಪ್ರಮುಖರನ್ನು ಬಂಧಿಸಲಾಗಿದೆ. ನಿಯಂತ್ರಣ ಮಾಡುತ್ತಿದ್ದೇವೆ. ನಮ್ಮ ಗೃಹ ಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕರು ಮಹಾರಾಷ್ಟ್ರ ಸರ್ಕಾರದೊಂದಿಗೆ ಮಾತನಾಡಿ ಅಲ್ಲಿರುವ ಕನ್ನಡಿಗರ ಆಸ್ತಿ, ಸರ್ಕಾರಿ ವಾಹನಗಳ ರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಮಾಡಿದ್ದಾರೆ. ಪುಂಡಾಟಿಕೆ ವಿರುದ್ಧ ನಿರ್ಣಾಯಕ ಕ್ರಮ ಖಚಿತ. ಅಂತಹ ಚಟುವಟಿಕೆಗಳನ್ನು ಮುಂದುವರಿಸಲು ಬಿಡುವುದಿಲ್ಲ’ ಎಂದು ಎಚ್ಚರಿಕೆ ನೀಡಿದರು.