<p><strong>ಬೆಂಗಳೂರು: </strong>'ಕಾಂಗ್ರೆಸ್ ತೊರೆದು ಬೇರೆ ಪಕ್ಷ ಸೇರಿದವರಿಗೆ ಮರಳಿ ಆಹ್ವಾನ ನೀಡಲಾಗುವುದು. ಯಾವುದೇ ಷರತ್ತು ಇಲ್ಲದೆ ಕಾಂಗ್ರೆಸ್ ಗೆ ಬಂದರೆ, ಸಂತೋಷದಿಂದ ಅವರನ್ನು ಬರಮಾಡಿಕೊಳ್ಳಲಾಗುವುದು' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.</p>.<p>ನಗರದಲ್ಲಿ ಭಾನುವಾರ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ರಾಮಲಿಂಗಾರೆಡ್ಡಿ, ಧ್ರುವ ನಾರಾಯಣ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,</p>.<p>'ಕಾಂಗ್ರೆಸ್ ಪಾಲಿಗೆ ಈ ವರ್ಷ ಸಂಘಟನೆಯ, ಹೋರಾಟದ ವರ್ಷವಾಗಿದೆ. ಕಾಂಗ್ರೆಸ್ ಶಾಸಕರಿಲ್ಲದ 100 ವಿಧಾನ ಸಭಾ ಕ್ಷೇತ್ರಗಳಿಗೆ ಪ್ರವಾಸ ಹಮ್ಮಿಕೊಂಡು ಪಕ್ಷ ಸಂಘಟಿಸಲಾಗುವುದು' ಎಂದರು.</p>.<p>'ಕಾಂಗ್ರೆಸ್ ಕಚೇರಿ, ಪಕ್ಷದ ದೇವಸ್ಥಾನ ಇದ್ದಂತೆ. ಎಲ್ಲ ಸ್ಥಳೀಯ ನಾಯಕರು ಕಾಂಗ್ರೆಸ್ ಕಚೇರಿ ಒಳಗಡೆ ಅಥವಾ ಸಾರ್ವಜನಿಕ ಸ್ಥಳಗಳಲ್ಲಿಯೇ ಸಭೆ ನಡೆಸಬೇಕು. ನಾಯಕರ ಮನೆಗಳಲ್ಲಿ ಸಭೆ ನಡೆಸಬಾರದು' ಎಂದರು.<br />'ವ್ಯಕ್ತಿ ಪೂಜೆ ಮಾಡುವುದು, ಜೈಕಾರ ಹಾಕುವುದು ಬೇಡ. ಪಕ್ಷ ಪೂಜೆ ಇರಲಿ. ವ್ಯಕ್ತಿಯ ಹಿಂದೆ ಎಷ್ಟು ಜನ ಇದ್ದಾರೆ ಎನ್ನುವುದಕ್ಕಿಂತ, ಆ ವ್ಯಕ್ತಿ ಎಷ್ಟು ಜನರನ್ನು ಬೆಳೆಸುತ್ತಾನೆ ಎಂಬುದು ಮುಖ್ಯ' ಎಂದರು.</p>.<p>'ಡಿ.ಕೆ. ಶಿವಕುಮಾರ್ ಮುಂದಿನ ಮುಖ್ಯಮಂತ್ರಿ ಎಂದು ಕಾರ್ಯಕರ್ತರು ಘೋಷಣೆ ಕೂಗುತ್ತಿದ್ದರು. ನಾನು ಮುಖ್ಯಮಂತ್ರಿಯಾಗುವುದು ಮುಖ್ಯವಲ್ಲ. ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ಮುಖ್ಯ' ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>'ಕಾಂಗ್ರೆಸ್ ತೊರೆದು ಬೇರೆ ಪಕ್ಷ ಸೇರಿದವರಿಗೆ ಮರಳಿ ಆಹ್ವಾನ ನೀಡಲಾಗುವುದು. ಯಾವುದೇ ಷರತ್ತು ಇಲ್ಲದೆ ಕಾಂಗ್ರೆಸ್ ಗೆ ಬಂದರೆ, ಸಂತೋಷದಿಂದ ಅವರನ್ನು ಬರಮಾಡಿಕೊಳ್ಳಲಾಗುವುದು' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.</p>.<p>ನಗರದಲ್ಲಿ ಭಾನುವಾರ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ರಾಮಲಿಂಗಾರೆಡ್ಡಿ, ಧ್ರುವ ನಾರಾಯಣ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,</p>.<p>'ಕಾಂಗ್ರೆಸ್ ಪಾಲಿಗೆ ಈ ವರ್ಷ ಸಂಘಟನೆಯ, ಹೋರಾಟದ ವರ್ಷವಾಗಿದೆ. ಕಾಂಗ್ರೆಸ್ ಶಾಸಕರಿಲ್ಲದ 100 ವಿಧಾನ ಸಭಾ ಕ್ಷೇತ್ರಗಳಿಗೆ ಪ್ರವಾಸ ಹಮ್ಮಿಕೊಂಡು ಪಕ್ಷ ಸಂಘಟಿಸಲಾಗುವುದು' ಎಂದರು.</p>.<p>'ಕಾಂಗ್ರೆಸ್ ಕಚೇರಿ, ಪಕ್ಷದ ದೇವಸ್ಥಾನ ಇದ್ದಂತೆ. ಎಲ್ಲ ಸ್ಥಳೀಯ ನಾಯಕರು ಕಾಂಗ್ರೆಸ್ ಕಚೇರಿ ಒಳಗಡೆ ಅಥವಾ ಸಾರ್ವಜನಿಕ ಸ್ಥಳಗಳಲ್ಲಿಯೇ ಸಭೆ ನಡೆಸಬೇಕು. ನಾಯಕರ ಮನೆಗಳಲ್ಲಿ ಸಭೆ ನಡೆಸಬಾರದು' ಎಂದರು.<br />'ವ್ಯಕ್ತಿ ಪೂಜೆ ಮಾಡುವುದು, ಜೈಕಾರ ಹಾಕುವುದು ಬೇಡ. ಪಕ್ಷ ಪೂಜೆ ಇರಲಿ. ವ್ಯಕ್ತಿಯ ಹಿಂದೆ ಎಷ್ಟು ಜನ ಇದ್ದಾರೆ ಎನ್ನುವುದಕ್ಕಿಂತ, ಆ ವ್ಯಕ್ತಿ ಎಷ್ಟು ಜನರನ್ನು ಬೆಳೆಸುತ್ತಾನೆ ಎಂಬುದು ಮುಖ್ಯ' ಎಂದರು.</p>.<p>'ಡಿ.ಕೆ. ಶಿವಕುಮಾರ್ ಮುಂದಿನ ಮುಖ್ಯಮಂತ್ರಿ ಎಂದು ಕಾರ್ಯಕರ್ತರು ಘೋಷಣೆ ಕೂಗುತ್ತಿದ್ದರು. ನಾನು ಮುಖ್ಯಮಂತ್ರಿಯಾಗುವುದು ಮುಖ್ಯವಲ್ಲ. ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ಮುಖ್ಯ' ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>