ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂದೂ ರಾಷ್ಟ್ರ ಮಾಡಿಯೇ ತೀರುತ್ತೇವೆ: ಪ್ರಮೋದ್ ಮುತಾಲಿಕ್

Published 4 ಜನವರಿ 2024, 9:05 IST
Last Updated 4 ಜನವರಿ 2024, 9:05 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಹಿಂದೂ ರಾಷ್ಟ್ರ ಮಾಡಿಯೇ ತೀರುತ್ತೇವೆ.‌ ನಿಮಗೆ (ಕಾಂಗ್ರೆಸ್) ತಾಕತ್ತಿದ್ದರೆ ತಡೀರಿ ನೋಡೋಣ ಎಂದು ಶ್ರೀ ರಾಮ ಸೇನೆ ಸಂಚಾಲಕ ಪ್ರಮೋದ್ ಮುತಾಲಿಕ್ ಸವಾಲೆಸೆದರು.

ಇಲ್ಲಿನ ಹಿಂದೂ ಕಾರ್ಯಕರ್ತ ಶ್ರೀಕಾಂತ ಪೂಜಾರಿ ಅವರ ಮನೆಗೆ ಗುರುವಾರ ಭೇಟಿ ನೀಡಿ ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ನಂತರ, ಸುದ್ದಿಗಾರರ ಜೊತೆ ಮಾತನಾಡಿದರು.

2024ರಲ್ಲಿ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾದ ನಂತರ ಭಾರತ ಹಿಂದೂ ರಾಷ್ಟ್ರ ಆಗುತ್ತದೆ.‌ ಪಾಕಿಸ್ತಾನ ಮುಸ್ಲಿಮರ ದೇಶ ಆಗುವುದಾದರೆ ಭಾರತ ಹಿಂದೂ ರಾಷ್ಟ್ರ ಏಕಾಗಬಾರದು ಎಂದು ನುಡಿದರು.

ಇಲ್ಲಿ ಎಲ್ಲರೂ ವಾಸ ಮಾಡಬಹುದು. ಮುಸ್ಲಿಮರು, ಕ್ರೈಸ್ತರು ಇರಬಹುದು. ನಾವು ಯಾರನ್ನೂ ಹೊರಹಾಕಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT