<p><strong>ಬೆಂಗಳೂರು:</strong> ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡರು ಇನ್ನೂ ಜೆಡಿಎಸ್ನಲ್ಲೇ ಇದ್ದರೂ, ‘ಬಿಜೆಪಿಗೆ ಸ್ವಾಗತ’ ಎಂದು ಕೋರುವ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ಓಡಾಡುತ್ತಿವೆ.</p>.<p>ಇಂತಹ ಸಂದೇಶಗಳನ್ನು ಹರಿಯಬಿಟ್ಟಿರುವವರು ಬಿಜೆಪಿ ಕಾರ್ಯಕರ್ತರು. ಸಚಿವರು ಅರೆ ಮನಸ್ಸಿನಲ್ಲಿದ್ದರೆ ಅವರ ಮನಸ್ಸಿನಲ್ಲಿ ಏನಿದೆ ಎಂಬುದನ್ನು ತಿಳಿಯುವುದೇ ಇಂತಹ ಪ್ರಚಾರದ ಉದ್ದೇಶ ಎಂದು ಹೇಳಲಾಗುತ್ತಿದೆ.</p>.<p>‘ಜೆಡಿಎಸ್ನ ಎಲ್ಲ ಶಾಸಕರೂ ಒಗ್ಗಟ್ಟಿನಿಂದ ಇದ್ದಾರೆ’ ಎಂದು ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳುತ್ತಿದ್ದಂತೆಯೇ ಮೂವರು ಶಾಸಕರು ರಾಜೀನಾಮೆ ಕೊಟ್ಟು ಮುಂಬೈ ಸೇರಿದ್ದಾರೆ. ಇದನ್ನು ಅರಗಿಸಿಕೊಳ್ಳಲು ಪಕ್ಷ ಕಷ್ಟಪಡುತ್ತಿದ್ದು, ಸರ್ಕಾರಕ್ಕೂ ಅಪಾಯ ಎದುರಾಗಿದೆ. ಈ ಹಂತದಲ್ಲೇ ಜಿ.ಟಿ.ದೇವೇಗೌಡರನ್ನು ಕೆಣಕುವ ರೀತಿಯಲ್ಲಿ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿಯತೊಡಗಿವೆ.</p>.<p>ಉನ್ನತ ಶಿಕ್ಷಣ ಸಚಿವರು ಸೋಮವಾರ ವಿಧಾನಸಭಾ ಅಧಿವೇಶನದಲ್ಲಿ ಬಿಜೆಪಿ ಸದಸ್ಯರ ಸಾಲಿಗೆ ಹೋಗಿ ಶುಭಾಶಯ ವಿನಿಮಯ ಮಾಡಿಕೊಂಡಿದ್ದು ವಿಶೇಷವಾಗಿ ಕಾಣಿಸಿತ್ತು.ಇದು ಇಂತಹ ಸಂದೇಶಗಳ ಒಳಮರ್ಮವೇ ಆಗಿರಬಹುದೇ ಎಂದು ಚಿಂತಿಸುವಂತೆಯೂ ಮಾಡಿತು.</p>.<p>‘ರಾಜ್ಯದಲ್ಲಿ ನಡೆಯುತ್ತಿರುವ ಶಾಸಕರ ರಾಜೀನಾಮೆ ಪರ್ವಕ್ಕೆ ಬಿಜೆಪಿಯ ರಾಷ್ಟ್ರೀಯ ನಾಯಕರಾದ ನರೇಂದ್ರ ಮೋದಿ, ಅಮಿತ್ ಶಾ<br />ಕಾರಣ ಅಲ್ಲ’ ಎಂದುಜಿ.ಟಿ.ದೇವೇಗೌಡರು ಹೇಳಿದಾಗಲೇ ಅವರು ಬಿಜೆಪಿ ಬಗ್ಗೆ ಮೃದು ಧೋರಣೆ ತಳೆದಿದ್ದಾರೆ ಎಂದು ಹೇಳಲಾಗಿತ್ತು. ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಅವರು ಬಳಿಕ ಸಮಜಾಯಿಸಿ ನೀಡಿದ್ದರೂ, ಅವರು ಆಗಾಗ ಬಿಜೆಪಿ ಬಗ್ಗೆ ಮೃದು ಧೋರಣೆ ತಳೆಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.</p>.<p>‘ಇನ್ನು ಮುಂಬೈಯಲ್ಲಿ ಆಪರೇಷನ್ ನಡೆಯುವುದಿಲ್ಲ, ಇಲ್ಲೇ ಅದು ನಡೆಯುತ್ತದೆ’ ಎಂದು ಎರಡು ದಿನದ ಹಿಂದೆಯಷ್ಟೇ ಅವರು ನಿಗೂಢ ಎನ್ನುವಂತಹ ಮಾತನ್ನು ಆಡಿದ್ದರು.</p>.<p>‘ಸದ್ಯದ ಸ್ಥಿತಿಯಲ್ಲಿ ಜಿ.ಟಿ.ದೇವೇಗೌಡರು ಪಕ್ಷ ತೊರೆಯಲಾರರು. ಆದರೆ ಈ ಸರ್ಕಾರ ಪತನವಾದರೆ ಬಳಿಕ ಪಕ್ಷ ತ್ಯಜಿಸಿ ಬಿಜೆಪಿಗೆ ಸೇರುವ ಸಾಧ್ಯತೆಯನ್ನು ತಳ್ಳಿ ಹಾಕಲಾಗದು’ ಎಂದು ಅವರನ್ನು ಹತ್ತಿರದಿಂದ ಬಲ್ಲ ಮೂಲಗಳು ಹೇಳಿವೆ.</p>.<p>‘ಮೈತ್ರಿ ಸರ್ಕಾರ ನಿಮಗೆ ಮೋಸ ಮಾಡಿದೆ. ಒಬ್ಬ ಪ್ರಭಾವಿ ಮುಖ್ಯಮಂತ್ರಿಯನ್ನು ಸೋಲಿಸಿದ ನಿಮ್ಮನ್ನು ಪಕ್ಷ ಸರಿಯಾಗಿ ನಡೆಸಿಕೊಂಡಿಲ್ಲ. ಅಲ್ಲದೆ ನಿಮ್ಮ ಮಗ ಹರೀಶ್ ಗೌಡಗೆ ಹುಣಸೂರಿನಲ್ಲಿ ಟಿಕೆಟ್ ನೀಡದೆ ಅಪ್ಪ-ಮಕ್ಕಳು ನಿಮಗೆ ಅನ್ಯಾಯ ಮಾಡಿದರು. ಹೀಗಾಗಿ ನೀವು ಬಿಜೆಪಿಗೆ ಬಂದು ಚಾಮುಂಡೇಶ್ವರಿ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಿ’ ಎಂಬ ಪೋಸ್ಟ್ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡರು ಇನ್ನೂ ಜೆಡಿಎಸ್ನಲ್ಲೇ ಇದ್ದರೂ, ‘ಬಿಜೆಪಿಗೆ ಸ್ವಾಗತ’ ಎಂದು ಕೋರುವ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ಓಡಾಡುತ್ತಿವೆ.</p>.<p>ಇಂತಹ ಸಂದೇಶಗಳನ್ನು ಹರಿಯಬಿಟ್ಟಿರುವವರು ಬಿಜೆಪಿ ಕಾರ್ಯಕರ್ತರು. ಸಚಿವರು ಅರೆ ಮನಸ್ಸಿನಲ್ಲಿದ್ದರೆ ಅವರ ಮನಸ್ಸಿನಲ್ಲಿ ಏನಿದೆ ಎಂಬುದನ್ನು ತಿಳಿಯುವುದೇ ಇಂತಹ ಪ್ರಚಾರದ ಉದ್ದೇಶ ಎಂದು ಹೇಳಲಾಗುತ್ತಿದೆ.</p>.<p>‘ಜೆಡಿಎಸ್ನ ಎಲ್ಲ ಶಾಸಕರೂ ಒಗ್ಗಟ್ಟಿನಿಂದ ಇದ್ದಾರೆ’ ಎಂದು ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳುತ್ತಿದ್ದಂತೆಯೇ ಮೂವರು ಶಾಸಕರು ರಾಜೀನಾಮೆ ಕೊಟ್ಟು ಮುಂಬೈ ಸೇರಿದ್ದಾರೆ. ಇದನ್ನು ಅರಗಿಸಿಕೊಳ್ಳಲು ಪಕ್ಷ ಕಷ್ಟಪಡುತ್ತಿದ್ದು, ಸರ್ಕಾರಕ್ಕೂ ಅಪಾಯ ಎದುರಾಗಿದೆ. ಈ ಹಂತದಲ್ಲೇ ಜಿ.ಟಿ.ದೇವೇಗೌಡರನ್ನು ಕೆಣಕುವ ರೀತಿಯಲ್ಲಿ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿಯತೊಡಗಿವೆ.</p>.<p>ಉನ್ನತ ಶಿಕ್ಷಣ ಸಚಿವರು ಸೋಮವಾರ ವಿಧಾನಸಭಾ ಅಧಿವೇಶನದಲ್ಲಿ ಬಿಜೆಪಿ ಸದಸ್ಯರ ಸಾಲಿಗೆ ಹೋಗಿ ಶುಭಾಶಯ ವಿನಿಮಯ ಮಾಡಿಕೊಂಡಿದ್ದು ವಿಶೇಷವಾಗಿ ಕಾಣಿಸಿತ್ತು.ಇದು ಇಂತಹ ಸಂದೇಶಗಳ ಒಳಮರ್ಮವೇ ಆಗಿರಬಹುದೇ ಎಂದು ಚಿಂತಿಸುವಂತೆಯೂ ಮಾಡಿತು.</p>.<p>‘ರಾಜ್ಯದಲ್ಲಿ ನಡೆಯುತ್ತಿರುವ ಶಾಸಕರ ರಾಜೀನಾಮೆ ಪರ್ವಕ್ಕೆ ಬಿಜೆಪಿಯ ರಾಷ್ಟ್ರೀಯ ನಾಯಕರಾದ ನರೇಂದ್ರ ಮೋದಿ, ಅಮಿತ್ ಶಾ<br />ಕಾರಣ ಅಲ್ಲ’ ಎಂದುಜಿ.ಟಿ.ದೇವೇಗೌಡರು ಹೇಳಿದಾಗಲೇ ಅವರು ಬಿಜೆಪಿ ಬಗ್ಗೆ ಮೃದು ಧೋರಣೆ ತಳೆದಿದ್ದಾರೆ ಎಂದು ಹೇಳಲಾಗಿತ್ತು. ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಅವರು ಬಳಿಕ ಸಮಜಾಯಿಸಿ ನೀಡಿದ್ದರೂ, ಅವರು ಆಗಾಗ ಬಿಜೆಪಿ ಬಗ್ಗೆ ಮೃದು ಧೋರಣೆ ತಳೆಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.</p>.<p>‘ಇನ್ನು ಮುಂಬೈಯಲ್ಲಿ ಆಪರೇಷನ್ ನಡೆಯುವುದಿಲ್ಲ, ಇಲ್ಲೇ ಅದು ನಡೆಯುತ್ತದೆ’ ಎಂದು ಎರಡು ದಿನದ ಹಿಂದೆಯಷ್ಟೇ ಅವರು ನಿಗೂಢ ಎನ್ನುವಂತಹ ಮಾತನ್ನು ಆಡಿದ್ದರು.</p>.<p>‘ಸದ್ಯದ ಸ್ಥಿತಿಯಲ್ಲಿ ಜಿ.ಟಿ.ದೇವೇಗೌಡರು ಪಕ್ಷ ತೊರೆಯಲಾರರು. ಆದರೆ ಈ ಸರ್ಕಾರ ಪತನವಾದರೆ ಬಳಿಕ ಪಕ್ಷ ತ್ಯಜಿಸಿ ಬಿಜೆಪಿಗೆ ಸೇರುವ ಸಾಧ್ಯತೆಯನ್ನು ತಳ್ಳಿ ಹಾಕಲಾಗದು’ ಎಂದು ಅವರನ್ನು ಹತ್ತಿರದಿಂದ ಬಲ್ಲ ಮೂಲಗಳು ಹೇಳಿವೆ.</p>.<p>‘ಮೈತ್ರಿ ಸರ್ಕಾರ ನಿಮಗೆ ಮೋಸ ಮಾಡಿದೆ. ಒಬ್ಬ ಪ್ರಭಾವಿ ಮುಖ್ಯಮಂತ್ರಿಯನ್ನು ಸೋಲಿಸಿದ ನಿಮ್ಮನ್ನು ಪಕ್ಷ ಸರಿಯಾಗಿ ನಡೆಸಿಕೊಂಡಿಲ್ಲ. ಅಲ್ಲದೆ ನಿಮ್ಮ ಮಗ ಹರೀಶ್ ಗೌಡಗೆ ಹುಣಸೂರಿನಲ್ಲಿ ಟಿಕೆಟ್ ನೀಡದೆ ಅಪ್ಪ-ಮಕ್ಕಳು ನಿಮಗೆ ಅನ್ಯಾಯ ಮಾಡಿದರು. ಹೀಗಾಗಿ ನೀವು ಬಿಜೆಪಿಗೆ ಬಂದು ಚಾಮುಂಡೇಶ್ವರಿ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಿ’ ಎಂಬ ಪೋಸ್ಟ್ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>