<p><strong>ಬೆಂಗಳೂರು</strong>: ಪರಿಸರ ಕಾಳಜಿಯಿದ್ದ ದಿವಂಗತ ಪ್ರಧಾನಿ ಇಂದಿರಾ ಗಾಂಧಿ ಅವರು ಅರಣ್ಯ ಸಂರಕ್ಷಣೆ, ವನ್ಯಮೃಗಗಳ ಸಂರಕ್ಷಣೆಗೆ ಕಾಯ್ದೆ ರೂಪಿಸಿದ್ದರು. ರಾಜ್ಯ ಸರ್ಕಾರ ಸಸ್ಯ, ಪ್ರಾಣಿಸಂಕುಲದ ಸಂರಕ್ಷಣೆಗೆ ಬದ್ಧವಾಗಿದೆ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು.</p>.<p>ವಿಧಾನಸೌಧದಲ್ಲಿ ಮಂಗಳವಾರ ಭೇಟಿ ಮಾಡಿದ ನಿವೃತ್ತ ಐಎಫ್ಎಸ್ ಅಧಿಕಾರಿ ಸಂಜಯ್ ಕುಮಾರ್ ನೇತೃತ್ವದ ಪಶ್ಚಿಮ ಘಟ್ಟಗಳ ಕುರಿತ ತಜ್ಞರ ಸಮಿತಿಯ ನಿಯೋಗದ ಜತೆ ಅವರು ಮಾತನಾಡಿದರು.</p>.<p>ಕರ್ನಾಟಕ ರಾಜ್ಯ ಸಾಂಸ್ಕೃತಿಕವಾಗಿ ಶ್ರೀಮಂತವಾಗಿದ್ದು, ನಮ್ಮ ಪೂರ್ವಜರು ಅರಣ್ಯ, ಬೆಟ್ಟಗುಡ್ಡ, ನದಿಮೂಲ, ಜಲಾನಯನ ಪ್ರದೇಶವನ್ನು ಸಂರಕ್ಷಿಸಿದ್ದಾರೆ ಎಂದು ಶ್ಲಾಘಿಸಿದರು. </p>.<p>ಪಶ್ಚಿಮಘಟ್ಟದ ವೈವಿಧ್ಯ, ದೇಶದ ನಾನಾ ಭಾಗಗಳ ಹವಾಮಾನ, ಮೀನುಗಾರಿಕೆಯ ಮೇಲೆ ಪಶ್ಚಿಮ ಘಟ್ಟದ ಪ್ರಭಾವ ಕುರಿತು ಸಂಜಯ್ ಕುಮಾರ್ ವಿವರ ನೀಡಿದರು.</p>.<p>ನಿಯೋಗದಲ್ಲಿ ಭಾರತೀಯ ವಿಜ್ಞಾನ ಮಂದಿರದ ಸುಕುಮಾರ್, ಕೇಂದ್ರ ಅರಣ್ಯ, ಜೀವಿಶಾಸ್ತ್ರ, ಹವಾಮಾನ ವೈಪರೀತ್ಯ ಸಚಿವಾಲಯದ ಸದಸ್ಯ ಕಾರ್ಯದರ್ಶಿ ಎಸ್.ಕೆ. ಖನ್ನಾ, ವಿಜ್ಞಾನಿಗಳಾದ ರಿತೇಶ್ ಜೋಶಿ, ಸುರೇಶ್ ಕುಮಾರ್ ಮತ್ತು ಭಾರತೀಯ ಭೂ ಸರ್ವೇಕ್ಷಣಾ ಇಲಾಖೆಯ ನಿರ್ದೇಶಕ ಪ್ರಕಾಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಪರಿಸರ ಕಾಳಜಿಯಿದ್ದ ದಿವಂಗತ ಪ್ರಧಾನಿ ಇಂದಿರಾ ಗಾಂಧಿ ಅವರು ಅರಣ್ಯ ಸಂರಕ್ಷಣೆ, ವನ್ಯಮೃಗಗಳ ಸಂರಕ್ಷಣೆಗೆ ಕಾಯ್ದೆ ರೂಪಿಸಿದ್ದರು. ರಾಜ್ಯ ಸರ್ಕಾರ ಸಸ್ಯ, ಪ್ರಾಣಿಸಂಕುಲದ ಸಂರಕ್ಷಣೆಗೆ ಬದ್ಧವಾಗಿದೆ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು.</p>.<p>ವಿಧಾನಸೌಧದಲ್ಲಿ ಮಂಗಳವಾರ ಭೇಟಿ ಮಾಡಿದ ನಿವೃತ್ತ ಐಎಫ್ಎಸ್ ಅಧಿಕಾರಿ ಸಂಜಯ್ ಕುಮಾರ್ ನೇತೃತ್ವದ ಪಶ್ಚಿಮ ಘಟ್ಟಗಳ ಕುರಿತ ತಜ್ಞರ ಸಮಿತಿಯ ನಿಯೋಗದ ಜತೆ ಅವರು ಮಾತನಾಡಿದರು.</p>.<p>ಕರ್ನಾಟಕ ರಾಜ್ಯ ಸಾಂಸ್ಕೃತಿಕವಾಗಿ ಶ್ರೀಮಂತವಾಗಿದ್ದು, ನಮ್ಮ ಪೂರ್ವಜರು ಅರಣ್ಯ, ಬೆಟ್ಟಗುಡ್ಡ, ನದಿಮೂಲ, ಜಲಾನಯನ ಪ್ರದೇಶವನ್ನು ಸಂರಕ್ಷಿಸಿದ್ದಾರೆ ಎಂದು ಶ್ಲಾಘಿಸಿದರು. </p>.<p>ಪಶ್ಚಿಮಘಟ್ಟದ ವೈವಿಧ್ಯ, ದೇಶದ ನಾನಾ ಭಾಗಗಳ ಹವಾಮಾನ, ಮೀನುಗಾರಿಕೆಯ ಮೇಲೆ ಪಶ್ಚಿಮ ಘಟ್ಟದ ಪ್ರಭಾವ ಕುರಿತು ಸಂಜಯ್ ಕುಮಾರ್ ವಿವರ ನೀಡಿದರು.</p>.<p>ನಿಯೋಗದಲ್ಲಿ ಭಾರತೀಯ ವಿಜ್ಞಾನ ಮಂದಿರದ ಸುಕುಮಾರ್, ಕೇಂದ್ರ ಅರಣ್ಯ, ಜೀವಿಶಾಸ್ತ್ರ, ಹವಾಮಾನ ವೈಪರೀತ್ಯ ಸಚಿವಾಲಯದ ಸದಸ್ಯ ಕಾರ್ಯದರ್ಶಿ ಎಸ್.ಕೆ. ಖನ್ನಾ, ವಿಜ್ಞಾನಿಗಳಾದ ರಿತೇಶ್ ಜೋಶಿ, ಸುರೇಶ್ ಕುಮಾರ್ ಮತ್ತು ಭಾರತೀಯ ಭೂ ಸರ್ವೇಕ್ಷಣಾ ಇಲಾಖೆಯ ನಿರ್ದೇಶಕ ಪ್ರಕಾಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>