ಚಾಲಕನ ದೂರಿನಲ್ಲೇನಿದೆ?
ಸಿದ್ದಾರ್ಥ ಅವರ ಸೂಚನೆಯಂತೆ ಸೋಮವಾರ ಮಧ್ಯಾಹ್ನ 12.30ರಲ್ಲಿ ಸಕಲೇಶಪುರಕ್ಕೆ ಕಾರಿನಲ್ಲಿ ಹೊರಟೆವು. ಸಕಲೇಶಪುರ ಸಮೀಪಿಸುತ್ತಿದ್ದಂತೆ ಮಂಗಳೂರಿಗೆ ತೆರಳಲು ಸೂಚಿಸಿದರು. ಮಂಗಳೂರು ಸರ್ಕಲ್ ಬಿಟ್ಟು ಮುಂದೆ ಹೋದ ನಂತರ ದೊಡ್ಡ ಸೇತುವೆ ಸಿಕ್ಕಿತು. ಅದರ ಬಳಿಗೆ ಬಂದಾಗ ಕಾರಿನಿಂದ ಇಳಿದ ಅವರು, ಸೇತುವೆಯ ಕೊನೆಗೆ ಹೋಗಿ ನಿಲ್ಲುವಂತೆಯೂ, ತಾವು ನಡೆದುಕೊಂಡು ಬರುವುದಾಗಿ ತಿಳಿಸಿದರು. ನಂತರ ನಡೆದುಕೊಂಡು ಬಂದ ಅವರು, ಕಾರಿನ ಒಳಗೇ ಇರುವಂತೆ ನನಗೆ ತಿಳಿಸಿ, ಮರಳಿ ಹಿಂದಕ್ಕೆ ಹೋದರು. ನಂತರ ರಾತ್ರಿ 8 ಗಂಟೆ ಆದರೂ ಅವರು ಕಾಣಲಿಲ್ಲ. ಅವರ ಮೊಬೈಲ್ಗೆ ಕರೆ ಮಾಡಿದೆ. ಮೊಬೈಲ್ ಸ್ವಿಚ್ ಆಫ್ ಆಗಿದ್ದರಿಂದ, ಪುತ್ರ ಅಮಾರ್ತ್ಯ ಹೆಗ್ಡೆ ಅವರಿಗೆ ತಿಳಿಸಿದೆ. ನಂತರ ಅಮಾರ್ತ್ಯ ಸಲಹೆ ಮೇರೆಗೆ ಪೊಲೀಸರಿಗೆ ದೂರು ನೀಡಿದ್ದೇನೆ ಎಂದು ಚಾಲಕ ಪೊಲೀಸರಿಗೆ ತಿಳಿಸಿದ್ದಾನೆ.