<p><strong>ಬೆಂಗಳೂರು</strong>: ದ್ವಿಚಕ್ರ ವಾಹನಗಳ ವ್ಹೀಲಿ ಹಾವಳಿಗೆ ಸಂಪೂರ್ಣ ಇತಿಶ್ರೀ ಹಾಡಲು ಕಾನೂನಿಗೆ ಅಗತ್ಯ ತಿದ್ದುಪಡಿ ತರಬೇಕು ಎಂದು ರಾಜಾಜಿನಗರ ಶಾಸಕ ಎಸ್.ಸುರೇಶ್ಕುಮಾರ್ ಅವರು ಗೃಹ ಸಚಿವ ಜಿ.ಪರಮೇಶ್ವರ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.</p>.<p>ರಾಜ್ಯದಲ್ಲಿ ಹೆಚ್ಚುತ್ತಿರುವ ದ್ವಿಚಕ್ರ ವಾಹನಗಳ ವ್ಹೀಲಿ ಹಾವಳಿಯ ಬಗ್ಗೆ ಹೈಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ. ಈ ಕುರಿತು ಅಗತ್ಯ ಕಾನೂನು ರೂಪಿಸಬೇಕು ಎಂದು ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರಿದ್ದ ಏಕಸದಸ್ಯ ನ್ಯಾಯಪೀಠ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಹೈಕೋರ್ಟ್ನ ಈ ಕಳಕಳಿ ಸಮಾಜದ ಎಲ್ಲ ಪ್ರಜ್ಞಾವಂತರ ಭಾವನೆಯನ್ನು ಪ್ರತಿಧ್ವನಿಸಿದೆ ಎಂದು ಅವರು ತಿಳಿಸಿದ್ದಾರೆ.</p>.<p>‘ವ್ಹೀಲಿ ಎಂಬುದು ಒಂದು ಹುಚ್ಚಾಟವಾಗಿದ್ದು, ಇದರಿಂದ ವ್ಹೀಲಿ ಮಾಡುವ ವ್ಯಕ್ತಿಗಳಲ್ಲದೆ, ಅಮಾಯಕ ಸಾರ್ವಜನಿಕರೂ ಬಲಿಯಾಗುತ್ತಿದ್ದಾರೆ. ಕಾನೂನಿನ ಭಯವಿಲ್ಲದೆ, ಅನ್ಯರ ಬಗ್ಗೆ ಕಾಳಜಿ ಇಲ್ಲದೆ ಬಹಳಷ್ಟು ಸಲ ಪುಂಡಪೋಕರಿಗಳು ಮಾಡುತ್ತಿರುವ ಈ ಘನ ಕಾರ್ಯ ಸಮಾಜಕ್ಕೆ ಅಪಾಯಕಾರಿ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ದ್ವಿಚಕ್ರ ವಾಹನಗಳ ವ್ಹೀಲಿ ಹಾವಳಿಗೆ ಸಂಪೂರ್ಣ ಇತಿಶ್ರೀ ಹಾಡಲು ಕಾನೂನಿಗೆ ಅಗತ್ಯ ತಿದ್ದುಪಡಿ ತರಬೇಕು ಎಂದು ರಾಜಾಜಿನಗರ ಶಾಸಕ ಎಸ್.ಸುರೇಶ್ಕುಮಾರ್ ಅವರು ಗೃಹ ಸಚಿವ ಜಿ.ಪರಮೇಶ್ವರ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.</p>.<p>ರಾಜ್ಯದಲ್ಲಿ ಹೆಚ್ಚುತ್ತಿರುವ ದ್ವಿಚಕ್ರ ವಾಹನಗಳ ವ್ಹೀಲಿ ಹಾವಳಿಯ ಬಗ್ಗೆ ಹೈಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ. ಈ ಕುರಿತು ಅಗತ್ಯ ಕಾನೂನು ರೂಪಿಸಬೇಕು ಎಂದು ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರಿದ್ದ ಏಕಸದಸ್ಯ ನ್ಯಾಯಪೀಠ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಹೈಕೋರ್ಟ್ನ ಈ ಕಳಕಳಿ ಸಮಾಜದ ಎಲ್ಲ ಪ್ರಜ್ಞಾವಂತರ ಭಾವನೆಯನ್ನು ಪ್ರತಿಧ್ವನಿಸಿದೆ ಎಂದು ಅವರು ತಿಳಿಸಿದ್ದಾರೆ.</p>.<p>‘ವ್ಹೀಲಿ ಎಂಬುದು ಒಂದು ಹುಚ್ಚಾಟವಾಗಿದ್ದು, ಇದರಿಂದ ವ್ಹೀಲಿ ಮಾಡುವ ವ್ಯಕ್ತಿಗಳಲ್ಲದೆ, ಅಮಾಯಕ ಸಾರ್ವಜನಿಕರೂ ಬಲಿಯಾಗುತ್ತಿದ್ದಾರೆ. ಕಾನೂನಿನ ಭಯವಿಲ್ಲದೆ, ಅನ್ಯರ ಬಗ್ಗೆ ಕಾಳಜಿ ಇಲ್ಲದೆ ಬಹಳಷ್ಟು ಸಲ ಪುಂಡಪೋಕರಿಗಳು ಮಾಡುತ್ತಿರುವ ಈ ಘನ ಕಾರ್ಯ ಸಮಾಜಕ್ಕೆ ಅಪಾಯಕಾರಿ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>