<p><strong>ಬಾಗಲಕೋಟೆ</strong>: ರಾಮ ಮಂದಿರ ನಿರ್ಮಾಣ ಮಾಡಿರುವುದು ಒಳ್ಳೆಯದು. ಆದರೆ, ಎಲ್ಲರನ್ನೂ ಸಾಮಾಜಿಕ, ಆರ್ಥಿಕ ಸಮಾನತೆಯಿಂದ ಕಾಣುವ ರಾಮ ರಾಜ್ಯ ನಿರ್ಮಾಣ ಯಾವಾಗ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.</p><p>ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿರುದ್ಯೋಗ ರಹಿತ, ಬೆಲೆ ಏರಿಕೆ ನಿಯಂತ್ರಿಸುವ, ಆರ್ಥಿಕ ಸಬಲತೆಯ ಆಡಳಿತದ ಜನರ ನಿರೀಕ್ಷೆ ಹುಸಿಯಾಗಿದೆ ಎಂದು ಟೀಕಿಸಿದರು.</p><p>ಜನರಿಗೆ ಬಿಜೆಪಿ ಉಚಿತ ಯೋಜನೆ ಘೋಷಿಸಿದರೆ ಜನ ಕಲ್ಯಾಣಕ್ಕಾಗಿ, ಕಾಂಗ್ರೆಸ್ ಕೊಟ್ಟರೆ ಆರ್ಥಿಕ ದಿವಾಳಿಯಾಗುತ್ತದೆ ಎಂಬ ದ್ವಂದ್ವ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು.</p><p>ಅಯುಷ್ಮಾನ್, ನರೇಗಾ ಯೋಜನೆಗಳಲ್ಲಿ ರಾಜ್ಯದ ಪಾಲು ಶೇ 50ರಷ್ಟಿದ್ದರೂ, ಕೇಂದ್ರದ್ದೇ ಎನ್ನುವಂತೆ ಪ್ರಚಾರ ಪಡೆಯುತ್ತಿದ್ದಾರೆ ಎಂದು ಟೀಕಿಸಿದರು.</p><p><strong>ದಾಖಲೆ ಬಿಡುಗಡೆ ಮಾಡಲಿ:</strong> ರಾಜ್ಯದ ಹಿತಾಸಕ್ತಿ, ಜನರಿಗೆ ಸತ್ಯ ತಿಳಿಸುವುದಕ್ಕಾಗಿ ಕೋವಿಡ್ ಸಂದರ್ಭದಲ್ಲಿ ನಡೆದ ₹ 40 ಸಾವಿರ ಕೋಟಿ ಮೊತ್ತ ಹಗರಣದ ದಾಖಲೆಗಳನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.</p><p>ಕಾಂಗ್ರೆಸ್ ಆರೋಪ ಮಾಡಿದಾಗ ಸುಳ್ಳು ಎಂದು ಹೇಳುತಿದ್ದ ಬಿಜೆಪಿ ನಾಯಕರು ಎಲ್ಲಿದ್ದಾರೆ? ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಜನರಿಗೆ ಉತ್ತರಿಸಬೇಕು ಎಂದು ಒತ್ತಾಯಿಸಿದರು.</p><p>ತಮ್ಮ ಮೇಲೆ ಕ್ರಮ ಕೈಗೊಂಡರೆ ದಾಖಲೆ ಬಿಡುಗಡೆ ಮಾಡುವುದಾಗಿ ಯತ್ನಾಳ ಹೇಳಿದ್ದಾರೆ. ಬಹಿರಂಗವಾಗಿ ದಾಖಲೆ ಬಿಡುಗಡೆ ಮಾಡಲಾಗದಿದ್ದರೆ, ಈ ಬಗ್ಗೆ ತನಿಖೆ ನಡೆಸುತ್ತಿರುವ ಆಯೋಗದ ಮುಂದೆ ದಾಖಲೆ ನೀಡಬೇಕು ಎಂದರು.</p><p>ಕೋವಿಡ್ ಸಂದರ್ಭದಲ್ಲಿ ನಡೆದ ಖರೀದಿ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಹಾಗೆಯೇ ಜಲಜೀವನ್ ಮಷಿನ್ನಲ್ಲಿ ನಡೆದಿರುವ ಅವ್ಯವಹಾರದ ತನಿಖೆಯೂ ನಡೆದಿದೆ. ನಾಲ್ಕು ತಿಂಗಳಲ್ಲಿ ವರದಿ ಬರುವ ನಿರೀಕ್ಷೆ ಇದೆ ಎಂದರು.</p><p>ದೇಶ, ರಾಜ್ಯದಲ್ಲಿ ಆಡಳಿತ ಯಾವುದೇ ಧರ್ಮಗ್ರಂಥದ ಆಧಾರದ ಮೇಲೆ ನಡೆಯುತ್ತಿಲ್ಲ. ಬಸವ, ಬುದ್ಧನ ತತ್ವ ಹಾಗೂ ಅಂಬೇಡ್ಕರ್ ಸಂವಿಧಾನದ ಮೇಲೆ ನಡೆಯುತ್ತಿದೆ. ಸಮಾನ ಅವಕಾಶ ನೀಡದ ಧರ್ಮ ನಂಬುವ ಪ್ರಶ್ನೆಯೇ ಇಲ್ಲ ಎಂದರು.</p><p>ಸಚಿವ ಆರ್.ಬಿ. ತಿಮ್ಮಾಪುರ, ಶಾಸಕರಾದ ಎಚ್.ವೈ. ಮೇಟಿ, ಜೆ.ಟಿ. ಪಾಟೀಲ, ಮಾಜಿ ಸಚಿವ ಅಜಯಕುಮಾರ ಸರನಾಯಕ, ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ರಾಮ ಮಂದಿರ ನಿರ್ಮಾಣ ಮಾಡಿರುವುದು ಒಳ್ಳೆಯದು. ಆದರೆ, ಎಲ್ಲರನ್ನೂ ಸಾಮಾಜಿಕ, ಆರ್ಥಿಕ ಸಮಾನತೆಯಿಂದ ಕಾಣುವ ರಾಮ ರಾಜ್ಯ ನಿರ್ಮಾಣ ಯಾವಾಗ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.</p><p>ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿರುದ್ಯೋಗ ರಹಿತ, ಬೆಲೆ ಏರಿಕೆ ನಿಯಂತ್ರಿಸುವ, ಆರ್ಥಿಕ ಸಬಲತೆಯ ಆಡಳಿತದ ಜನರ ನಿರೀಕ್ಷೆ ಹುಸಿಯಾಗಿದೆ ಎಂದು ಟೀಕಿಸಿದರು.</p><p>ಜನರಿಗೆ ಬಿಜೆಪಿ ಉಚಿತ ಯೋಜನೆ ಘೋಷಿಸಿದರೆ ಜನ ಕಲ್ಯಾಣಕ್ಕಾಗಿ, ಕಾಂಗ್ರೆಸ್ ಕೊಟ್ಟರೆ ಆರ್ಥಿಕ ದಿವಾಳಿಯಾಗುತ್ತದೆ ಎಂಬ ದ್ವಂದ್ವ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು.</p><p>ಅಯುಷ್ಮಾನ್, ನರೇಗಾ ಯೋಜನೆಗಳಲ್ಲಿ ರಾಜ್ಯದ ಪಾಲು ಶೇ 50ರಷ್ಟಿದ್ದರೂ, ಕೇಂದ್ರದ್ದೇ ಎನ್ನುವಂತೆ ಪ್ರಚಾರ ಪಡೆಯುತ್ತಿದ್ದಾರೆ ಎಂದು ಟೀಕಿಸಿದರು.</p><p><strong>ದಾಖಲೆ ಬಿಡುಗಡೆ ಮಾಡಲಿ:</strong> ರಾಜ್ಯದ ಹಿತಾಸಕ್ತಿ, ಜನರಿಗೆ ಸತ್ಯ ತಿಳಿಸುವುದಕ್ಕಾಗಿ ಕೋವಿಡ್ ಸಂದರ್ಭದಲ್ಲಿ ನಡೆದ ₹ 40 ಸಾವಿರ ಕೋಟಿ ಮೊತ್ತ ಹಗರಣದ ದಾಖಲೆಗಳನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.</p><p>ಕಾಂಗ್ರೆಸ್ ಆರೋಪ ಮಾಡಿದಾಗ ಸುಳ್ಳು ಎಂದು ಹೇಳುತಿದ್ದ ಬಿಜೆಪಿ ನಾಯಕರು ಎಲ್ಲಿದ್ದಾರೆ? ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಜನರಿಗೆ ಉತ್ತರಿಸಬೇಕು ಎಂದು ಒತ್ತಾಯಿಸಿದರು.</p><p>ತಮ್ಮ ಮೇಲೆ ಕ್ರಮ ಕೈಗೊಂಡರೆ ದಾಖಲೆ ಬಿಡುಗಡೆ ಮಾಡುವುದಾಗಿ ಯತ್ನಾಳ ಹೇಳಿದ್ದಾರೆ. ಬಹಿರಂಗವಾಗಿ ದಾಖಲೆ ಬಿಡುಗಡೆ ಮಾಡಲಾಗದಿದ್ದರೆ, ಈ ಬಗ್ಗೆ ತನಿಖೆ ನಡೆಸುತ್ತಿರುವ ಆಯೋಗದ ಮುಂದೆ ದಾಖಲೆ ನೀಡಬೇಕು ಎಂದರು.</p><p>ಕೋವಿಡ್ ಸಂದರ್ಭದಲ್ಲಿ ನಡೆದ ಖರೀದಿ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಹಾಗೆಯೇ ಜಲಜೀವನ್ ಮಷಿನ್ನಲ್ಲಿ ನಡೆದಿರುವ ಅವ್ಯವಹಾರದ ತನಿಖೆಯೂ ನಡೆದಿದೆ. ನಾಲ್ಕು ತಿಂಗಳಲ್ಲಿ ವರದಿ ಬರುವ ನಿರೀಕ್ಷೆ ಇದೆ ಎಂದರು.</p><p>ದೇಶ, ರಾಜ್ಯದಲ್ಲಿ ಆಡಳಿತ ಯಾವುದೇ ಧರ್ಮಗ್ರಂಥದ ಆಧಾರದ ಮೇಲೆ ನಡೆಯುತ್ತಿಲ್ಲ. ಬಸವ, ಬುದ್ಧನ ತತ್ವ ಹಾಗೂ ಅಂಬೇಡ್ಕರ್ ಸಂವಿಧಾನದ ಮೇಲೆ ನಡೆಯುತ್ತಿದೆ. ಸಮಾನ ಅವಕಾಶ ನೀಡದ ಧರ್ಮ ನಂಬುವ ಪ್ರಶ್ನೆಯೇ ಇಲ್ಲ ಎಂದರು.</p><p>ಸಚಿವ ಆರ್.ಬಿ. ತಿಮ್ಮಾಪುರ, ಶಾಸಕರಾದ ಎಚ್.ವೈ. ಮೇಟಿ, ಜೆ.ಟಿ. ಪಾಟೀಲ, ಮಾಜಿ ಸಚಿವ ಅಜಯಕುಮಾರ ಸರನಾಯಕ, ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>