<p><strong>ಬೆಂಗಳೂರು:</strong> ‘ನೋಂದಣಿಯೇ ಆಗದ ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ (ಆರ್ಎಸ್ಎಸ್) ಹಣ ಎಲ್ಲಿಂದ ಬರುತ್ತಿದೆ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.</p>.<p>ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ಕಾರ್ಯಕ್ರಮ ಆಯೋಜಿಸಲು ಅವರಿಗೆ ಜನರು ಸ್ವಯಂಪ್ರೇರಿತರಾಗಿ ದೇಣಿಗೆ ನೀಡುತ್ತಾರೆಯೇ? ಅಥವಾ ಎಲ್ಲಿಂದ ಹಣ ಬರುತ್ತಿದೆ ಎಂಬುದನ್ನು ಹೇಳಬೇಕಲ್ಲವೇ’ ಎಂದರು.</p>.<p>‘ಆರ್ಎಸ್ಎಸ್ ನೋಂದಣಿ, ಹಣಕಾಸು ವ್ಯವಹಾರ ಪ್ರಶ್ನಿಸಿದ ಕಾರಣಕ್ಕೆ ಬಿಜೆಪಿ ನಾಯಕರು ನನ್ನ ಕುಟುಂಬ ಹಾಗೂ ಸಮುದಾಯದ ಕುರಿತು ವೈಯಕ್ತಿಕವಾಗಿ ಟೀಕಿಸುವ ಮೂಲಕ ಬೌದ್ಧಿಕ ದಿವಾಳಿತನ ಪ್ರದರ್ಶಿಸಿದ್ದಾರೆ’ ಎಂದು ಟೀಕಿಸಿದರು.</p>.<p>‘ಆರ್ಎಸ್ಎಸ್ ಕುರಿತು ಪ್ರಶ್ನಿಸಿದರೆ ನನ್ನ ಆಸ್ತಿ ಕುರಿತು ಮಾತನಾಡುತ್ತಾರೆ. ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶನಾಲಯ ಬಿಜೆಪಿಯವರ ಕೈಯಲ್ಲೇ ಇದೆ. ತನಿಖೆ ಮಾಡಲಿ’ ಎಂದು ತಿರುಗೇಟು ನೀಡಿದರು.</p>.<p>‘ಆರ್ಎಸ್ಎಸ್ ಹೆಸರಿನಲ್ಲಿ ಯಾವುದಾದರೂ ಕಟ್ಟಡ ಇದ್ದರೆ ತೋರಿಸಲಿ’ ಎಂಬ ಬಿಜೆಪಿ ನಾಯಕರ ಪ್ರಶ್ನೆ ಕುರಿತಂತೆ ಪ್ರತಿಕ್ರಿಯಿಸಿದ ಪ್ರಿಯಾಂಕ್, ‘ಆರ್ಎಸ್ಎಸ್ ಹೆಸರಿನಲ್ಲಿ ಯಾವುದೇ ಕಟ್ಟಡ ಇಲ್ಲ ಎಂಬುದನ್ನು ನಾನೇ ಹೇಳಿದ್ದೇನೆ’ ಎಂದರು.</p>.<p>ಭೀಮ್ ಆರ್ಮಿ ಸಂಘಟನೆ ಚಿತ್ತಾಪುರದಲ್ಲಿ ನ. 2 ರಂದು ರ್ಯಾಲಿಗೆ ಅನುಮತಿ ಕೇಳಿರುವ ವಿಚಾರವಾಗಿ ಮಾತನಾಡಿದ ಪ್ರಿಯಾಂಕ್, ‘ಇದೇ 24ರಂದು ನ್ಯಾಯಾಲಯ ಏನು ತೀರ್ಪು ನೀಡಲಿದೆಯೊ ನೋಡಬೇಕು. ಯಾರೇ ಪಥ ಸಂಚಲನ ನಡೆಸಿದರೂ ಅನುಮತಿ ತೆಗೆದುಕೊಂಡು ಮಾಡಬೇಕು’ ಎಂದರು.</p>.<p>ಬೆಂಗಾವಲು ವಾಹನ ಬಳಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ‘ಜನ ನಮ್ಮೊಂದಿಗಿದ್ದಾರೆ. ಯಾವ ಬೆಂಗಾವಲು ವಾಹನವೂ ಬೇಡ. ಮೂರು ದಿನ ಬೆಂಗಾವಲು ವಾಹನವನ್ನೇ ಬಳಸಿಲ್ಲ’ ಎಂದರು.</p>.<p>ಆರ್ಎಸ್ಎಸ್ ಹೆಸರಿನಲ್ಲಿ ಹಲವರು ಬೆದರಿಕೆ ಹಾಕಿದ ಕಾರಣ, ಗುಪ್ತಚರ ವರದಿ ಆಧರಿಸಿ ಗೃಹ ಇಲಾಖೆಯು ಪ್ರಿಯಾಂಕ್ ಅವರಿಗೆ ಭದ್ರತೆ ಹೆಚ್ಚಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ನೋಂದಣಿಯೇ ಆಗದ ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ (ಆರ್ಎಸ್ಎಸ್) ಹಣ ಎಲ್ಲಿಂದ ಬರುತ್ತಿದೆ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.</p>.<p>ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ಕಾರ್ಯಕ್ರಮ ಆಯೋಜಿಸಲು ಅವರಿಗೆ ಜನರು ಸ್ವಯಂಪ್ರೇರಿತರಾಗಿ ದೇಣಿಗೆ ನೀಡುತ್ತಾರೆಯೇ? ಅಥವಾ ಎಲ್ಲಿಂದ ಹಣ ಬರುತ್ತಿದೆ ಎಂಬುದನ್ನು ಹೇಳಬೇಕಲ್ಲವೇ’ ಎಂದರು.</p>.<p>‘ಆರ್ಎಸ್ಎಸ್ ನೋಂದಣಿ, ಹಣಕಾಸು ವ್ಯವಹಾರ ಪ್ರಶ್ನಿಸಿದ ಕಾರಣಕ್ಕೆ ಬಿಜೆಪಿ ನಾಯಕರು ನನ್ನ ಕುಟುಂಬ ಹಾಗೂ ಸಮುದಾಯದ ಕುರಿತು ವೈಯಕ್ತಿಕವಾಗಿ ಟೀಕಿಸುವ ಮೂಲಕ ಬೌದ್ಧಿಕ ದಿವಾಳಿತನ ಪ್ರದರ್ಶಿಸಿದ್ದಾರೆ’ ಎಂದು ಟೀಕಿಸಿದರು.</p>.<p>‘ಆರ್ಎಸ್ಎಸ್ ಕುರಿತು ಪ್ರಶ್ನಿಸಿದರೆ ನನ್ನ ಆಸ್ತಿ ಕುರಿತು ಮಾತನಾಡುತ್ತಾರೆ. ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶನಾಲಯ ಬಿಜೆಪಿಯವರ ಕೈಯಲ್ಲೇ ಇದೆ. ತನಿಖೆ ಮಾಡಲಿ’ ಎಂದು ತಿರುಗೇಟು ನೀಡಿದರು.</p>.<p>‘ಆರ್ಎಸ್ಎಸ್ ಹೆಸರಿನಲ್ಲಿ ಯಾವುದಾದರೂ ಕಟ್ಟಡ ಇದ್ದರೆ ತೋರಿಸಲಿ’ ಎಂಬ ಬಿಜೆಪಿ ನಾಯಕರ ಪ್ರಶ್ನೆ ಕುರಿತಂತೆ ಪ್ರತಿಕ್ರಿಯಿಸಿದ ಪ್ರಿಯಾಂಕ್, ‘ಆರ್ಎಸ್ಎಸ್ ಹೆಸರಿನಲ್ಲಿ ಯಾವುದೇ ಕಟ್ಟಡ ಇಲ್ಲ ಎಂಬುದನ್ನು ನಾನೇ ಹೇಳಿದ್ದೇನೆ’ ಎಂದರು.</p>.<p>ಭೀಮ್ ಆರ್ಮಿ ಸಂಘಟನೆ ಚಿತ್ತಾಪುರದಲ್ಲಿ ನ. 2 ರಂದು ರ್ಯಾಲಿಗೆ ಅನುಮತಿ ಕೇಳಿರುವ ವಿಚಾರವಾಗಿ ಮಾತನಾಡಿದ ಪ್ರಿಯಾಂಕ್, ‘ಇದೇ 24ರಂದು ನ್ಯಾಯಾಲಯ ಏನು ತೀರ್ಪು ನೀಡಲಿದೆಯೊ ನೋಡಬೇಕು. ಯಾರೇ ಪಥ ಸಂಚಲನ ನಡೆಸಿದರೂ ಅನುಮತಿ ತೆಗೆದುಕೊಂಡು ಮಾಡಬೇಕು’ ಎಂದರು.</p>.<p>ಬೆಂಗಾವಲು ವಾಹನ ಬಳಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ‘ಜನ ನಮ್ಮೊಂದಿಗಿದ್ದಾರೆ. ಯಾವ ಬೆಂಗಾವಲು ವಾಹನವೂ ಬೇಡ. ಮೂರು ದಿನ ಬೆಂಗಾವಲು ವಾಹನವನ್ನೇ ಬಳಸಿಲ್ಲ’ ಎಂದರು.</p>.<p>ಆರ್ಎಸ್ಎಸ್ ಹೆಸರಿನಲ್ಲಿ ಹಲವರು ಬೆದರಿಕೆ ಹಾಕಿದ ಕಾರಣ, ಗುಪ್ತಚರ ವರದಿ ಆಧರಿಸಿ ಗೃಹ ಇಲಾಖೆಯು ಪ್ರಿಯಾಂಕ್ ಅವರಿಗೆ ಭದ್ರತೆ ಹೆಚ್ಚಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>