ಅಧಿವೇಶನದಲ್ಲಿ ಮಾತನಾಡಿದ ಜೆಡಿಎಸ್ ಸದಸ್ಯ ಜಿಟಿ ದೇವೇಗೌಡ ಅವರು ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಅವರನ್ನು ಅಧಿಕಾರದಿಂದ ಯಾಕೆ ಕೆಳಗೆ ಇಳಿಸಿದ್ದರು ಮತ್ತು ಯಾರು ಇಳಿಸಿದ್ದರು ಎನ್ನುವುದು ಇಲ್ಲಿಯವೆರೆಗೂ ಯಾರಿಗೂ ಗೊತ್ತಿಲ್ಲ. ಆ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದ ಲಕ್ಷ್ಮಣ್ ಸವದಿ ಅವರಿಗೆ ಗೊತ್ತಿದ್ದರೆ ಹೇಳಬೇಕು ಎಂದು ಲಕ್ಷ್ಮಣ್ ಸವದಿಯವರ ಕಾಲೆಳೆದರು.