ಬೆಂಗಳೂರು: ‘ಪ್ರಜ್ವಲ್ ಪೆನ್ಡ್ರೈವ್ ವಿಚಾರದಲ್ಲಿ ಹೋರಾಟ ಮಾಡದಂತೆ ಎಚ್.ಡಿ.ಕುಮಾರಸ್ವಾಮಿ ಅವರನ್ನು ಕಟ್ಟಿ ಹಾಕಿರುವವರು ಯಾರು? ಅವರನ್ನು ಯಾರು ಹಿಡಿದು ನಿಲ್ಲಿಸಿದ್ದಾರೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದರು.
ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಪೆನ್ಡ್ರೈವ್ ವಿಚಾರದಲ್ಲಿ ನಾನು ಹೇಳುವುದನ್ನೆಲ್ಲಾ ಹೇಳಿದ್ದೇನೆ. ಇನ್ನು ಏನಿದ್ದರೂ ವಿಧಾನಮಂಡಲ ಅಧಿವೇಶನದಲ್ಲಿ ಚರ್ಚೆ ಮಾಡೋಣ’ ಎಂದು ಹೇಳಿದರು.
ಕುಮಾರಸ್ವಾಮಿ ರಾಜಭವನಕ್ಕೆ ಭೇಟಿ ನೀಡಿ ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡುವಂತೆ ಮನವಿ ಮಾಡಿದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ‘ಈಗ ಆಂಧ್ರಪ್ರದೇಶ ಚುನಾವಣಾ ಪ್ರಚಾರಕ್ಕೆ ಹೊರಟಿದ್ದೇನೆ. ಬಂದ ಮೇಲೆ ಈ ಕುರಿತು ಮಾತನಾಡುತ್ತೇನೆ’ ಎಂದರು.