ನಾಯಕತ್ವ ಬದಲಾವಣೆ ಬಗ್ಗೆ ಸೂಚನೆ ನೀಡಿದ್ದರೂ, ವರಿಷ್ಠರು ಈವರೆಗೆ ಯಾವುದೇ ಸುಳಿವು ಬಿಟ್ಟುಕೊಟ್ಟಿರಲಿಲ್ಲ. ಸ್ವತಃ ಯಡಿಯೂರಪ್ಪ ಸಹ ಆ ಗೋಪ್ಯತೆ ಕಾಪಾಡಿಕೊಂಡೇ ಬಂದಿದ್ದರು. ಪ್ರಧಾನಿ ಮೋದಿ, ಕೇಂದ್ರದ ಗೃಹ ಸಚಿವ ಅಮಿತ್ ಶಾ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಹೊರತುಪಡಿಸಿ ಬೇರೆ ಯಾರಿಗೂ ನಾಯಕತ್ವ ಯಾರಿಗೆ ದೊರೆಯಲಿದೆ ಎಂಬುದು ಗೊತ್ತಿರಲಿಕ್ಕೆ ಸಾಧ್ಯವಿಲ್ಲ ಎಂಬ ಮಾತು ಬಿಜೆಪಿ ಪಾಳಯದಲ್ಲಿ ಕೇಳಿಬರುತ್ತಿದೆ.