<p><strong>ಬೆಂಗಳೂರು</strong>: ಬೆಳಗಾವಿಯಲ್ಲಿ ನಿನ್ನೆ ಕಾಂಗ್ರೆಸ್ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಪೊಲೀಸ್ ಮೇಲೆ ತೋರಿದ ಪ್ರತಾಪವನ್ನು ಮುಂದಿಟ್ಟುಕೊಂಡು ರಾಜ್ಯ ಬಿಜೆಪಿ ಅವರ ಮೇಲೆ ವಾಗ್ದಾಳಿ ಮುಂದುವರೆಸಿದೆ.</p><p>ಎಎಸ್ಪಿ ಮೇಲೆ ಹಲ್ಲೆ ಮಾಡಲು ಮುಂದಾದ ನಿಮ್ಮ ಮೇಲೆ ರೌಡಿ ಶೀಟರ್ ಏಕೆ ತೆರೆಯಬಾರದು? ಎಂದು ಸಿದ್ದರಾಮಯ್ಯ ಅವರನ್ನು ನೇರವಾಗಿ ಕೆಣಕಿದೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಹಂಚಿಕೊಂಡಿದೆ.</p><p>ಮುಖ್ಯಮಂತ್ರಿ ಕುರ್ಚಿಯ ವ್ಯಾಲಿಡಿಟಿ ಅಂತ್ಯವಾಗುವ ಸಮಯ ಸಮೀಪಿಸುತ್ತಿದ್ದಂತೆಯೇ ಮುಖ್ಯಮಂತ್ರಿ ಅವರಿಗೆ ಹತಾಶೆ ಬಹುವಾಗಿ ಕಾಡುತ್ತಿದೆ. ಸಾರ್ವಜನಿಕ ಜೀವನದಲ್ಲಿದ್ದೇನೆ ಎಂಬ ಪರಿಜ್ಞಾನವೂ ಇಲ್ಲವೆಂಬಂತೆ ಸಿದ್ದರಾಮಯ್ಯ ವರ್ತಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದೆ.</p><p>ಮನೆಮಂದಿಯ ಮೇಲೆ ರೇಗಾಡುವ ಹಾಗೆ ಸರ್ಕಾರಿ ಅಧಿಕಾರಿಗಳ ಮೇಲೆ ರೇಗಾಡುತ್ತಿದ್ದಾರೆ, ಪೊಲೀಸ್ ಅಧಿಕಾರಿಯ ಮೇಲೆ ಕೈ ಎತ್ತುತ್ತಿದ್ದಾರೆ, ಮಹಿಳೆಯರೊಂದಿಗೆ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಟೀಕಿಸಿದೆ.</p><p>ದರ್ಪದಿಂದ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆದುಕೊಳ್ಳುತ್ತಿರುವುದು ಮುಖ್ಯಮಂತ್ರಿ ಕುರ್ಚಿಗೆ ಮಾಡುತ್ತಿರುವ ಅವಮಾನವಾಗಿದೆ. ಸಿಎಂ ಅವರೇ, ನಿಮ್ಮ ಗೂಂಡಾಗಿರಿಗೆ ಕೊನೆಯೆಂದು? ನಿಮ್ಮ ಮೇಲೆ ರೌಡಿ ಶೀಟರ್ ಏಕೆ ತೆರೆಯಬಾರದು? ಎಂದು ಪ್ರಶ್ನಿಸಿದೆ.</p>.ಬೆಳಗಾವಿ: ವೇದಿಕೆಯಲ್ಲೇ ASP ನಾರಾಯಣ ಭರಮನಿಗೆ ಹೊಡೆಯಲು ಮುಂದಾದ CM ಸಿದ್ದರಾಮಯ್ಯ!.ಮೋದಿಯನ್ನು ಪ್ರಶ್ನಿಸುವುದು ತಪ್ಪೇ: ಸಿದ್ದರಾಮಯ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬೆಳಗಾವಿಯಲ್ಲಿ ನಿನ್ನೆ ಕಾಂಗ್ರೆಸ್ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಪೊಲೀಸ್ ಮೇಲೆ ತೋರಿದ ಪ್ರತಾಪವನ್ನು ಮುಂದಿಟ್ಟುಕೊಂಡು ರಾಜ್ಯ ಬಿಜೆಪಿ ಅವರ ಮೇಲೆ ವಾಗ್ದಾಳಿ ಮುಂದುವರೆಸಿದೆ.</p><p>ಎಎಸ್ಪಿ ಮೇಲೆ ಹಲ್ಲೆ ಮಾಡಲು ಮುಂದಾದ ನಿಮ್ಮ ಮೇಲೆ ರೌಡಿ ಶೀಟರ್ ಏಕೆ ತೆರೆಯಬಾರದು? ಎಂದು ಸಿದ್ದರಾಮಯ್ಯ ಅವರನ್ನು ನೇರವಾಗಿ ಕೆಣಕಿದೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಹಂಚಿಕೊಂಡಿದೆ.</p><p>ಮುಖ್ಯಮಂತ್ರಿ ಕುರ್ಚಿಯ ವ್ಯಾಲಿಡಿಟಿ ಅಂತ್ಯವಾಗುವ ಸಮಯ ಸಮೀಪಿಸುತ್ತಿದ್ದಂತೆಯೇ ಮುಖ್ಯಮಂತ್ರಿ ಅವರಿಗೆ ಹತಾಶೆ ಬಹುವಾಗಿ ಕಾಡುತ್ತಿದೆ. ಸಾರ್ವಜನಿಕ ಜೀವನದಲ್ಲಿದ್ದೇನೆ ಎಂಬ ಪರಿಜ್ಞಾನವೂ ಇಲ್ಲವೆಂಬಂತೆ ಸಿದ್ದರಾಮಯ್ಯ ವರ್ತಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದೆ.</p><p>ಮನೆಮಂದಿಯ ಮೇಲೆ ರೇಗಾಡುವ ಹಾಗೆ ಸರ್ಕಾರಿ ಅಧಿಕಾರಿಗಳ ಮೇಲೆ ರೇಗಾಡುತ್ತಿದ್ದಾರೆ, ಪೊಲೀಸ್ ಅಧಿಕಾರಿಯ ಮೇಲೆ ಕೈ ಎತ್ತುತ್ತಿದ್ದಾರೆ, ಮಹಿಳೆಯರೊಂದಿಗೆ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಟೀಕಿಸಿದೆ.</p><p>ದರ್ಪದಿಂದ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆದುಕೊಳ್ಳುತ್ತಿರುವುದು ಮುಖ್ಯಮಂತ್ರಿ ಕುರ್ಚಿಗೆ ಮಾಡುತ್ತಿರುವ ಅವಮಾನವಾಗಿದೆ. ಸಿಎಂ ಅವರೇ, ನಿಮ್ಮ ಗೂಂಡಾಗಿರಿಗೆ ಕೊನೆಯೆಂದು? ನಿಮ್ಮ ಮೇಲೆ ರೌಡಿ ಶೀಟರ್ ಏಕೆ ತೆರೆಯಬಾರದು? ಎಂದು ಪ್ರಶ್ನಿಸಿದೆ.</p>.ಬೆಳಗಾವಿ: ವೇದಿಕೆಯಲ್ಲೇ ASP ನಾರಾಯಣ ಭರಮನಿಗೆ ಹೊಡೆಯಲು ಮುಂದಾದ CM ಸಿದ್ದರಾಮಯ್ಯ!.ಮೋದಿಯನ್ನು ಪ್ರಶ್ನಿಸುವುದು ತಪ್ಪೇ: ಸಿದ್ದರಾಮಯ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>