ಬೆಂಗಳೂರು: ಮುಜರಾಯಿ ಇಲಾಖೆ ಅಧೀನದಲ್ಲಿರುವ ಆಯ್ದ 81 ಅಧಿಸೂಚಿತ ದೇವಾಲಯಗಳ ₹ 12.30 ಕೋಟಿ ಮೊತ್ತವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ವರ್ಗಾಯಿಸುವ ಸಂಬಂಧ ಮುಜರಾಯಿ ಇಲಾಖೆ ಹೊರಡಿಸಿರುವ ಆದೇಶ ಪ್ರಶ್ನಿಸಿ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ.
ಮಲ್ಲೇಶ್ವರದ ‘ಭಾರತ ಪುನರುತ್ಥಾನ ಟ್ರಸ್ಟ್’ನ ಟ್ರಸ್ಟಿ ಗಿರೀಶ್ ಭಾರದ್ವಾಜ್ ಸಲ್ಲಿಸಿರುವ ಈ ಪಿಐಎಲ್ ಇನ್ನೂ ವಿಚಾರಣೆಗೆ ಬರಬೇಕಿದೆ.
‘ಸರ್ಕಾರ ಕೇವಲ ಹಿಂದೂ ದೇವಾಲಯಗಳನ್ನು ಗುರಿಯಾಗಿಸಿಕೊಂಡು ಈ ಅಧಿಸೂಚನೆ ಹೊರಡಿಸಿದೆ. ಈ ನಡೆ ತಾರತಮ್ಯದಿಂದ ಕೂಡಿದೆ. ಇದು ಕಾನೂನು ಬಾಹಿರ. ಆದ್ದರಿಂದ ಈ ಆದೇಶ ರದ್ದುಪಡಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.