‘ಶಿಕ್ಷಕರ ಪರವಾಗಿ ಹೋರಾಟಕ್ಕೆ ಯಾವಾಗಲೂ ಸಿದ್ಧವಿದ್ದೇನೆ. ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ ಸಮಾವೇಶ ಆಯೋಜಿಸಿ, ಅದಕ್ಕೆ ಬೇಕಾಗುವ ಸಹಕಾರ ನೀಡುತ್ತೇನೆ. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಪ್ರಶ್ನಿಸುವ ಧೈರ್ಯವಿದೆ. ಸಭಾಪತಿಯಾಗಿದ್ದರೆ ಟೀಕೆ–ಟಿಪ್ಪಣಿ ಮಾಡುವಂತಿರಲಿಲ್ಲ. ಆದರೆ, ಈಗ ಹಂಗಿಲ್ಲ. ಸಮ್ಮಿಶ್ರ ಸರ್ಕಾರದ ಬಗ್ಗೆ ಏನು ಬೇಕಾದರೂ ಮಾತನಾಡಬಹುದು’ ಎಂದು ಮಾರ್ಮಿಕವಾಗಿ ಹೇಳಿದರು.