<p><strong>ಬೆಂಗಳೂರು</strong>: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರಿನ ಜನರ ಬಗ್ಗೆ ಉದ್ಧಟತನದ ಮಾತುಗಳನ್ನು ಆಡಿದ್ದು, ಅವರು ಬೆಂಗಳೂರಿಗರ ಕ್ಷಮೆ ಕೇಳಬೇಕು ಎಂದು ವಿಧಾನಪರಿಷತ್ ವಿರೋಧಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದರು.</p>.<p>ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೆಂಗಳೂರಿನ ಜನರಿಗೆ ಕೃತಜ್ಞತೆ ಇಲ್ಲ; ವಿಪಕ್ಷಗಳು ಎಷ್ಟೇ ಬೈದರೂ, ಪತ್ರಕರ್ತರು ಎಷ್ಟೇ ಬೈದರೂ ನೀರಿನ ದರ ಏರಿಸದೆ ಬಿಡುವುದಿಲ್ಲ’ ಎಂದು ಹೇಳಿದ್ದಾರೆ. ಇದರಿಂದ ಇವರಿಗೆ ಬೆಂಗಳೂರಿನ ಜನರ ಬಗ್ಗೆ ವಿಪರೀತ ಸಿಟ್ಟು ಇದೆ ಎಂಬುದು ಗೊತ್ತಾಗುತ್ತದೆ’ ಎಂದರು. </p>.<p>‘ಬೆಂಗಳೂರಿನ ನಾಗರಿಕರು ಹೆಚ್ಚು ತೆರಿಗೆ ಪಾವತಿಸುತ್ತಾರೆ. ಆದರೆ, ಸವಲತ್ತುಗಳನ್ನು ಕೇಳಬಾರದೆ? ಇಲ್ಲಿನ ಜನರ ಬಗ್ಗೆ ಉಗ್ರವಾಗಿ ಮಾತನಾಡುವ ನಿಮ್ಮ ಅವಶ್ಯಕತೆ ಬೆಂಗಳೂರಿನ ಜನತೆಗೆ ಇದೆಯೆ’ ಎಂದು ಅವರು ಪ್ರಶ್ನಿಸಿದರು.</p>.<p>‘ಅಧಿಕೃತ ತೆರಿಗೆಗಳ ಜತೆಗೆ ಅನಧಿಕೃತವಾಗಿ ‘ಚದರಡಿ ಟ್ಯಾಕ್ಸ್’ ಕೂಡ ಹಾಕಿದ್ದೀರಲ್ಲವೆ? ಅವರಿಗೆ ಉತ್ತಮ ರಸ್ತೆ, ಸಮರ್ಪಕ ಚರಂಡಿ ಸೌಲಭ್ಯ ಸೇರಿ ಎಲ್ಲ ಸವಲತ್ತು ಕೊಟ್ಟು ಜನರನ್ನು ಸಮಾಧಾನಪಡಿಸಬೇಕಿತ್ತು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರಿನ ಜನರ ಬಗ್ಗೆ ಉದ್ಧಟತನದ ಮಾತುಗಳನ್ನು ಆಡಿದ್ದು, ಅವರು ಬೆಂಗಳೂರಿಗರ ಕ್ಷಮೆ ಕೇಳಬೇಕು ಎಂದು ವಿಧಾನಪರಿಷತ್ ವಿರೋಧಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದರು.</p>.<p>ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೆಂಗಳೂರಿನ ಜನರಿಗೆ ಕೃತಜ್ಞತೆ ಇಲ್ಲ; ವಿಪಕ್ಷಗಳು ಎಷ್ಟೇ ಬೈದರೂ, ಪತ್ರಕರ್ತರು ಎಷ್ಟೇ ಬೈದರೂ ನೀರಿನ ದರ ಏರಿಸದೆ ಬಿಡುವುದಿಲ್ಲ’ ಎಂದು ಹೇಳಿದ್ದಾರೆ. ಇದರಿಂದ ಇವರಿಗೆ ಬೆಂಗಳೂರಿನ ಜನರ ಬಗ್ಗೆ ವಿಪರೀತ ಸಿಟ್ಟು ಇದೆ ಎಂಬುದು ಗೊತ್ತಾಗುತ್ತದೆ’ ಎಂದರು. </p>.<p>‘ಬೆಂಗಳೂರಿನ ನಾಗರಿಕರು ಹೆಚ್ಚು ತೆರಿಗೆ ಪಾವತಿಸುತ್ತಾರೆ. ಆದರೆ, ಸವಲತ್ತುಗಳನ್ನು ಕೇಳಬಾರದೆ? ಇಲ್ಲಿನ ಜನರ ಬಗ್ಗೆ ಉಗ್ರವಾಗಿ ಮಾತನಾಡುವ ನಿಮ್ಮ ಅವಶ್ಯಕತೆ ಬೆಂಗಳೂರಿನ ಜನತೆಗೆ ಇದೆಯೆ’ ಎಂದು ಅವರು ಪ್ರಶ್ನಿಸಿದರು.</p>.<p>‘ಅಧಿಕೃತ ತೆರಿಗೆಗಳ ಜತೆಗೆ ಅನಧಿಕೃತವಾಗಿ ‘ಚದರಡಿ ಟ್ಯಾಕ್ಸ್’ ಕೂಡ ಹಾಕಿದ್ದೀರಲ್ಲವೆ? ಅವರಿಗೆ ಉತ್ತಮ ರಸ್ತೆ, ಸಮರ್ಪಕ ಚರಂಡಿ ಸೌಲಭ್ಯ ಸೇರಿ ಎಲ್ಲ ಸವಲತ್ತು ಕೊಟ್ಟು ಜನರನ್ನು ಸಮಾಧಾನಪಡಿಸಬೇಕಿತ್ತು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>