<p><strong>ನವದೆಹಲಿ</strong>: ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ, ಜಲ ಜೀವನ್ ಮಿಷನ್ ಕಾಮಗಾರಿ, ವಿದ್ಯುತ್ ಮಾರ್ಗ ನಿರ್ಮಾಣ ಹಾಗೂ 4 ಜಿ ಮೊಬೈಲ್ ಟವರ್ಗಳ ಅಳವಡಿಸುವ ಕರ್ನಾಟಕದ 17 ಪ್ರಸ್ತಾವಗಳಿಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಸ್ಥಾಯಿ ಸಮಿತಿ ಒಪ್ಪಿಗೆ ನೀಡಿದೆ. </p>.<p>ಕೇಂದ್ರ ಅರಣ್ಯ ಸಚಿವ ಭೂಪೇಂದರ್ ಯಾದವ್ ಅಧ್ಯಕ್ಷತೆಯಲ್ಲಿ ನಡೆದ ಸ್ಥಾಯಿ ಸಮಿತಿಯ 88ನೇ ಸಭೆಯಲ್ಲಿ ಕರ್ನಾಟಕ ಅರಣ್ಯ ಇಲಾಖೆಯ ಪ್ರಸ್ತಾವಗಳಿಗೆ ಷರತ್ತುಬದ್ಧ ಒಪ್ಪಿಗೆ ನೀಡಲಾಯಿತು. ರಾಜ್ಯದ ಇಷ್ಟೊಂದು ಪ್ರಸ್ತಾವಗಳಿಗೆ ಈಚಿನ ವರ್ಷಗಳಲ್ಲಿ ಅನುಮೋದನೆ ಸಿಕ್ಕಿದ್ದು ಇದೇ ಮೊದಲು. </p>.<p>ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ₹4,100 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಮೈಸೂರು-ಕುಶಾಲನಗರ ಚತುಷ್ಪಥ/ಆರು ಪಥದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ರಂಗನತಿಟ್ಟು ಪಕ್ಷಿಧಾಮದ ಪರಿಸರ ಸೂಕ್ಷ್ಮ ಪ್ರದೇಶದ 10 ಎಕರೆ ಜಾಗವನ್ನು ಬಳಸಿಕೊಳ್ಳಲು ಸ್ಥಾಯಿ ಸಮಿತಿ ಷರತ್ತುಬದ್ಧ ಅನುಮತಿ ಕೊಟ್ಟಿದೆ. </p>.<p>ಈಗಿರುವ ಹೆದ್ದಾರಿಯನ್ನು ಮೇಲ್ದರ್ಜೆಗೆ ಏರಿಸಲಾಗುತ್ತದೆ. ಇದು ಮೈಸೂರು ಮತ್ತು ಕೊಡಗು ಪ್ರದೇಶವನ್ನು ಸಂಪರ್ಕಿಸುವ ಪ್ರಮುಖ ರಸ್ತೆ. ರಸ್ತೆ ಸುರಕ್ಷತೆ ಹೆಚ್ಚಿಸಲು, ದಟ್ಟಣೆ ಕಡಿಮೆ ಮಾಡಲು ಹೆದ್ದಾರಿ ಸುಧಾರಣೆ ಅಗತ್ಯ. ರಂಗನತಿಟ್ಟು ಪಕ್ಷಿಧಾಮದ ಪರಿಸರ-ಸೂಕ್ಷ್ಮ ವಲಯದ ಅರಣ್ಯೇತರ ಭೂಮಿಯನ್ನಷ್ಟೇ ಬಳಸಿಕೊಳ್ಳಲಾಗುತ್ತದೆ ಎಂದು ಕರ್ನಾಟಕ ಅರಣ್ಯ ಇಲಾಖೆಯ ಪಿಸಿಸಿಎಫ್ (ವನ್ಯಜೀವಿ) ಅವರು ಸಭೆಯ ಗಮನಕ್ಕೆ ತಂದರು. 13 ಷರತ್ತುಗಳನ್ನು ವಿಧಿಸಿದ ಸ್ಥಾಯಿ ಸಮಿತಿಯು ಕಾಮಗಾರಿಗೆ ಹಸಿರು ನಿಶಾನೆ ತೋರಿತು. </p>.<p>ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಯಲ್ಲಿ 400 ಕೆ.ವಿ. ವಿದ್ಯುತ್ ಮಾರ್ಗವನ್ನು ಮೇಲ್ದರ್ಜೆಗೆ ಏರಿಸಲು 11 ಎಕರೆ ಕಾಡು ಬಳಸುವ ಪ್ರಸ್ತಾವಕ್ಕೂ ಸ್ಥಾಯಿ ಸಮಿತಿ ಒಪ್ಪಿಗೆ ನೀಡಿತು. </p>.<p><strong>ಯಾವೆಲ್ಲ ಕಾಮಗಾರಿಗಳಿಗೆ ಅನುಮತಿ: </strong></p>.<p>*ಜಲಜೀವನ್ ಮಿಷನ್ ಯೋಜನೆಗೆ ಮಲೆ ಮಹದೇಶ್ವರ ವನ್ಯಜೀವಿ ಧಾಮದ ವ್ಯಾಪ್ತಿಯ ಹನೂರು ಉಪವಿಭಾಗದಲ್ಲಿ 0.08 ಹೆಕ್ಟೇರ್, ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ 0.23 ಹೆಕ್ಟೇರ್, ಬಿಆರ್ಟಿಯ 0.48 ಹೆಕ್ಟೇರ್ ಹಾಗೂ 0.10 ಹೆಕ್ಟೇರ್ ಬಳಕೆಗೆ ಒಪ್ಪಿಗೆ. </p>.<p>*ಶರಾವತಿ ಹಾಗೂ ಕಾಳಿ ವನ್ಯಜೀವಿ ಧಾಮದ ವ್ಯಾಪ್ತಿಗಳಲ್ಲಿ 10 ಕಡೆಗಳಲ್ಲಿ 4 ಜಿ ಮೊಬೈಲ್ ಟವರ್ ಅಳವಡಿಕೆಗೆ ಅನುಮತಿ. </p>.<p>*ಮಲೆ ಮಹದೇಶ್ವರ ವನ್ಯಜೀವಿ ಧಾಮದ ಹನೂರು ಉಪವಿಭಾಗದಲ್ಲಿ ಭೂಗತ ಕೇಬಲ್ ಬಳಸಿ 11 ಕೆ.ವಿ. ಎಚ್ಟಿ/ಎಲ್ಟಿ ಮಾರ್ಗ ನಿರ್ಮಾಣಕ್ಕೆ ಅನುಮೋದನೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ, ಜಲ ಜೀವನ್ ಮಿಷನ್ ಕಾಮಗಾರಿ, ವಿದ್ಯುತ್ ಮಾರ್ಗ ನಿರ್ಮಾಣ ಹಾಗೂ 4 ಜಿ ಮೊಬೈಲ್ ಟವರ್ಗಳ ಅಳವಡಿಸುವ ಕರ್ನಾಟಕದ 17 ಪ್ರಸ್ತಾವಗಳಿಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಸ್ಥಾಯಿ ಸಮಿತಿ ಒಪ್ಪಿಗೆ ನೀಡಿದೆ. </p>.<p>ಕೇಂದ್ರ ಅರಣ್ಯ ಸಚಿವ ಭೂಪೇಂದರ್ ಯಾದವ್ ಅಧ್ಯಕ್ಷತೆಯಲ್ಲಿ ನಡೆದ ಸ್ಥಾಯಿ ಸಮಿತಿಯ 88ನೇ ಸಭೆಯಲ್ಲಿ ಕರ್ನಾಟಕ ಅರಣ್ಯ ಇಲಾಖೆಯ ಪ್ರಸ್ತಾವಗಳಿಗೆ ಷರತ್ತುಬದ್ಧ ಒಪ್ಪಿಗೆ ನೀಡಲಾಯಿತು. ರಾಜ್ಯದ ಇಷ್ಟೊಂದು ಪ್ರಸ್ತಾವಗಳಿಗೆ ಈಚಿನ ವರ್ಷಗಳಲ್ಲಿ ಅನುಮೋದನೆ ಸಿಕ್ಕಿದ್ದು ಇದೇ ಮೊದಲು. </p>.<p>ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ₹4,100 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಮೈಸೂರು-ಕುಶಾಲನಗರ ಚತುಷ್ಪಥ/ಆರು ಪಥದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ರಂಗನತಿಟ್ಟು ಪಕ್ಷಿಧಾಮದ ಪರಿಸರ ಸೂಕ್ಷ್ಮ ಪ್ರದೇಶದ 10 ಎಕರೆ ಜಾಗವನ್ನು ಬಳಸಿಕೊಳ್ಳಲು ಸ್ಥಾಯಿ ಸಮಿತಿ ಷರತ್ತುಬದ್ಧ ಅನುಮತಿ ಕೊಟ್ಟಿದೆ. </p>.<p>ಈಗಿರುವ ಹೆದ್ದಾರಿಯನ್ನು ಮೇಲ್ದರ್ಜೆಗೆ ಏರಿಸಲಾಗುತ್ತದೆ. ಇದು ಮೈಸೂರು ಮತ್ತು ಕೊಡಗು ಪ್ರದೇಶವನ್ನು ಸಂಪರ್ಕಿಸುವ ಪ್ರಮುಖ ರಸ್ತೆ. ರಸ್ತೆ ಸುರಕ್ಷತೆ ಹೆಚ್ಚಿಸಲು, ದಟ್ಟಣೆ ಕಡಿಮೆ ಮಾಡಲು ಹೆದ್ದಾರಿ ಸುಧಾರಣೆ ಅಗತ್ಯ. ರಂಗನತಿಟ್ಟು ಪಕ್ಷಿಧಾಮದ ಪರಿಸರ-ಸೂಕ್ಷ್ಮ ವಲಯದ ಅರಣ್ಯೇತರ ಭೂಮಿಯನ್ನಷ್ಟೇ ಬಳಸಿಕೊಳ್ಳಲಾಗುತ್ತದೆ ಎಂದು ಕರ್ನಾಟಕ ಅರಣ್ಯ ಇಲಾಖೆಯ ಪಿಸಿಸಿಎಫ್ (ವನ್ಯಜೀವಿ) ಅವರು ಸಭೆಯ ಗಮನಕ್ಕೆ ತಂದರು. 13 ಷರತ್ತುಗಳನ್ನು ವಿಧಿಸಿದ ಸ್ಥಾಯಿ ಸಮಿತಿಯು ಕಾಮಗಾರಿಗೆ ಹಸಿರು ನಿಶಾನೆ ತೋರಿತು. </p>.<p>ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಯಲ್ಲಿ 400 ಕೆ.ವಿ. ವಿದ್ಯುತ್ ಮಾರ್ಗವನ್ನು ಮೇಲ್ದರ್ಜೆಗೆ ಏರಿಸಲು 11 ಎಕರೆ ಕಾಡು ಬಳಸುವ ಪ್ರಸ್ತಾವಕ್ಕೂ ಸ್ಥಾಯಿ ಸಮಿತಿ ಒಪ್ಪಿಗೆ ನೀಡಿತು. </p>.<p><strong>ಯಾವೆಲ್ಲ ಕಾಮಗಾರಿಗಳಿಗೆ ಅನುಮತಿ: </strong></p>.<p>*ಜಲಜೀವನ್ ಮಿಷನ್ ಯೋಜನೆಗೆ ಮಲೆ ಮಹದೇಶ್ವರ ವನ್ಯಜೀವಿ ಧಾಮದ ವ್ಯಾಪ್ತಿಯ ಹನೂರು ಉಪವಿಭಾಗದಲ್ಲಿ 0.08 ಹೆಕ್ಟೇರ್, ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ 0.23 ಹೆಕ್ಟೇರ್, ಬಿಆರ್ಟಿಯ 0.48 ಹೆಕ್ಟೇರ್ ಹಾಗೂ 0.10 ಹೆಕ್ಟೇರ್ ಬಳಕೆಗೆ ಒಪ್ಪಿಗೆ. </p>.<p>*ಶರಾವತಿ ಹಾಗೂ ಕಾಳಿ ವನ್ಯಜೀವಿ ಧಾಮದ ವ್ಯಾಪ್ತಿಗಳಲ್ಲಿ 10 ಕಡೆಗಳಲ್ಲಿ 4 ಜಿ ಮೊಬೈಲ್ ಟವರ್ ಅಳವಡಿಕೆಗೆ ಅನುಮತಿ. </p>.<p>*ಮಲೆ ಮಹದೇಶ್ವರ ವನ್ಯಜೀವಿ ಧಾಮದ ಹನೂರು ಉಪವಿಭಾಗದಲ್ಲಿ ಭೂಗತ ಕೇಬಲ್ ಬಳಸಿ 11 ಕೆ.ವಿ. ಎಚ್ಟಿ/ಎಲ್ಟಿ ಮಾರ್ಗ ನಿರ್ಮಾಣಕ್ಕೆ ಅನುಮೋದನೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>