<p><strong>ಮೈಸೂರು:</strong> ಅರಣ್ಯದಲ್ಲಿ ಜನರ ಓಡಾಟ ಹೆಚ್ಚಿದೆ, ರೆಸಾರ್ಟ್ಗಳಾಗಿವೆ. ಸಫಾರಿ ಜಾಸ್ತಿ ಆಗುತ್ತಿದೆ. ಕಾಡೊಳಗೆ ನೀರು, ಮೇವು ಇಲ್ಲದಿರುವುದು, ಚಿರತೆಗಳ ಹಾವಳಿ ಮೊದಲಾದ ಕಾರಣದಿಂದ ಕಾಡುಪ್ರಾಣಿಗಳು ಹೊರಗೆ ಬರುತ್ತಿವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲಿ ತಿಳಿಸಿದರು.</p>.<p>ಸುದ್ದಿಗಾರರ ಜೊತೆಗೆ ಮಾತನಾಡಿದ ವರು, ಸರಗೂರು ತಾಲ್ಲೂಕಿನಲ್ಲಿ ಹುಲಿ ದಾಳಿಯಿಂದ ಇಬ್ಬರು ರೈತರು ಮೃತರಾಗಿರುವ ಕುರಿತ ಪ್ರಶ್ನೆಗೆ ‘ನಿಜ ಹೇಳ್ಲಾ?’ ಎಂದು ಹೀಗೆ ಪ್ರತಿಕ್ರಿಯೆ ನೀಡಿದರು. </p>.<p>‘ವನ್ಯಜೀವಿ ಮಾನವ ಸಂಘರ್ಷ ತಡೆ ಸಂಬಂಧ ಸಚಿವರಾದ ಈಶ್ವರ ಖಂಡ್ರೆ, ಡಾ.ಎಚ್.ಸಿ. ಮಹದೇವಪ್ಪ, ಕೆ.ವೆಂಕಟೇಶ್ ಚಾಮರಾಜನಗರದಲ್ಲಿ ಸಭೆ ನಡೆಸಿದ್ದಾರೆ. ಶೀಘ್ರದಲ್ಲೇ ನಾನೂ ಸಭೆ ನಡೆಸಲಿದ್ದೇನೆ’ ಎಂದು ಅವರು ಹೇಳಿದರು.</p>.<p>‘ಅಕ್ರಮ ರೆಸಾರ್ಟ್ಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ರೆಸಾರ್ಟ್ಗಳು ಜಾಸ್ತಿ ಆಗಿದ್ದರಿಂದಲೇ ಕಾಡುಪ್ರಾಣಿಗಳು ನಾಡಿಗೆ ಬರುತ್ತಿವೆ ಎಂಬುದೂ ಒಂದು ಕಾರಣವಷ್ಟೇ ಹೊರತು, ಅದೇ ಮುಖ್ಯ ಕಾರಣವಲ್ಲ. ಸಫಾರಿ ಟ್ರಿಪ್ ಕಡಿಮೆ ಮಾಡುವಂತೆಯೂ ಸೂಚಿಸಿದ್ದೇನೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಅರಣ್ಯದಲ್ಲಿ ಜನರ ಓಡಾಟ ಹೆಚ್ಚಿದೆ, ರೆಸಾರ್ಟ್ಗಳಾಗಿವೆ. ಸಫಾರಿ ಜಾಸ್ತಿ ಆಗುತ್ತಿದೆ. ಕಾಡೊಳಗೆ ನೀರು, ಮೇವು ಇಲ್ಲದಿರುವುದು, ಚಿರತೆಗಳ ಹಾವಳಿ ಮೊದಲಾದ ಕಾರಣದಿಂದ ಕಾಡುಪ್ರಾಣಿಗಳು ಹೊರಗೆ ಬರುತ್ತಿವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲಿ ತಿಳಿಸಿದರು.</p>.<p>ಸುದ್ದಿಗಾರರ ಜೊತೆಗೆ ಮಾತನಾಡಿದ ವರು, ಸರಗೂರು ತಾಲ್ಲೂಕಿನಲ್ಲಿ ಹುಲಿ ದಾಳಿಯಿಂದ ಇಬ್ಬರು ರೈತರು ಮೃತರಾಗಿರುವ ಕುರಿತ ಪ್ರಶ್ನೆಗೆ ‘ನಿಜ ಹೇಳ್ಲಾ?’ ಎಂದು ಹೀಗೆ ಪ್ರತಿಕ್ರಿಯೆ ನೀಡಿದರು. </p>.<p>‘ವನ್ಯಜೀವಿ ಮಾನವ ಸಂಘರ್ಷ ತಡೆ ಸಂಬಂಧ ಸಚಿವರಾದ ಈಶ್ವರ ಖಂಡ್ರೆ, ಡಾ.ಎಚ್.ಸಿ. ಮಹದೇವಪ್ಪ, ಕೆ.ವೆಂಕಟೇಶ್ ಚಾಮರಾಜನಗರದಲ್ಲಿ ಸಭೆ ನಡೆಸಿದ್ದಾರೆ. ಶೀಘ್ರದಲ್ಲೇ ನಾನೂ ಸಭೆ ನಡೆಸಲಿದ್ದೇನೆ’ ಎಂದು ಅವರು ಹೇಳಿದರು.</p>.<p>‘ಅಕ್ರಮ ರೆಸಾರ್ಟ್ಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ರೆಸಾರ್ಟ್ಗಳು ಜಾಸ್ತಿ ಆಗಿದ್ದರಿಂದಲೇ ಕಾಡುಪ್ರಾಣಿಗಳು ನಾಡಿಗೆ ಬರುತ್ತಿವೆ ಎಂಬುದೂ ಒಂದು ಕಾರಣವಷ್ಟೇ ಹೊರತು, ಅದೇ ಮುಖ್ಯ ಕಾರಣವಲ್ಲ. ಸಫಾರಿ ಟ್ರಿಪ್ ಕಡಿಮೆ ಮಾಡುವಂತೆಯೂ ಸೂಚಿಸಿದ್ದೇನೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>