‘ವೃತ್ತಿ ಶಿಕ್ಷಣ ಇಲಾಖೆಯಲ್ಲಿ 10ಕ್ಕೂ ಹೆಚ್ಚು ವರ್ಷಗಳು ಸೇವೆ ಸಲ್ಲಿಸಿರುವ ಶಿಕ್ಷಕರನ್ನು ನ್ಯಾಯಾಲಯದ ಆದೇಶದ ಮೇರೆಗೆ ಕಾಯಂಗೊಳಿಸಲಾಗಿತ್ತು. ವೃತ್ತಿ ಆಧಾರಿತ ಕೋರ್ಸ್ಗಳಲ್ಲಿ 5 ವರ್ಷಗಳು ಸೇವೆ ಸಲ್ಲಿಸಿದ್ದ ಅರೆಕಾಲಿಕ ನೌಕರರನ್ನು 2011ರಲ್ಲಿ ವಿಶೇಷ ಕಾಯ್ದೆ ಜಾರಿಗೊಳಿಸುವ ಮೂಲಕ ಕಾಯಂಗೊಳಿಸಲಾಯಿತು. ಅವರ ಒಟ್ಟು ಸೇವಾವಧಿ, ಜ್ಯೇಷ್ಠತೆ, ರಜೆ, ಪಿಂಚಣಿಗೆ ಸಂಬಂಧಿಸಿದ ಅಂಶಗಳನ್ನು ಈ ಕಾಯ್ದೆಯಲ್ಲಿ ಪರಿಗಣಿಸಿರಲಿಲ್ಲ. ಹಾಗಾಗಿ ಅವರು ಈಗ ಪಿಂಚಣಿಯಿಂದ ವಂಚಿತರಾಗಿದ್ದಾರೆ’ ಎಂದು ಸದಸ್ಯ ಕೆ.ಟಿ.ಶ್ರೀಕಂಠೇಗೌಡ ತಿಳಿಸಿದರು.