ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಆದೇಶದ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ದೀಪಕ್ ಸಿ.ಎನ್., ‘ನಮ್ಮ ಪಕ್ಷದ ಸದಸ್ಯರು ರಾಜ್ಯದ ಮೂಲೆ ಮೂಲೆಯಲ್ಲಿ ಸರ್ಕಾರಿ ಕಚೇರಿಗಳಲ್ಲಿನ ಭ್ರಷ್ಟಾಚಾರವನ್ನು ಬಯಲಿಗೆಳೆದು ವಿಡಿಯೊ ಚಿತ್ರೀಕರಿಸುತ್ತಿದ್ದರು. ಸಾಮಾಜಿಕ ಮಾಧ್ಯಮಗಳಲ್ಲಿ ನೇರಪ್ರಸಾರವನ್ನೂ ಮಾಡುತ್ತಿದ್ದರು. ಇದರಿಂದ ಬೆದರಿದ ಸರ್ಕಾರ ಈ ಆದೇಶ ಹೊರಡಿಸಿದೆ’ ಎಂದು ಹೇಳಿದ್ದಾರೆ.