ಚುನಾವಣಾ ಫಲಿತಾಂಶದ ಕುರಿತು ಹೇಳಿಕೆ ಮೂಲಕ ಪ್ರತಿಕ್ರಿಯಿಸಿರುವ ಅವರು, ‘ನಾವು ಬಿಜೆಪಿ ಸರ್ಕಾರದ ವಿರುದ್ಧ ಸುಖಾಸುಮ್ಮನೆ ಶೇಕಡ 40ರಷ್ಟು ಕಮಿಷನ್ ಆರೋಪ ಮಾಡಿರಲಿಲ್ಲ. ಗುತ್ತಿಗೆದಾರರ ಜತೆ ಚರ್ಚಿಸಿ, ಅವರ ಸಂಕಷ್ಟ ಅರಿತ ಬಳಿಕವೇ ದೂರು ನೀಡಿದ್ದೆವು. ಪ್ರಧಾನಿ ನರೇಂದ್ರ ಮೋದಿ ಅವರಿಗೂ ಪತ್ರ ಬರೆದಿದ್ದೆವು. ಅವರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿ, ಭ್ರಷ್ಟಾಚಾರ ನಿಯಂತ್ರಿಸಿದ್ದರೆ ಈ ಪರಿಯ ಆಡಳಿತ ವಿರೋಧಿ ಅಲೆಯನ್ನು ಅನುಭವಿಸುವ ಪರಿಸ್ಥಿತಿ ಎದುರಾಗುತ್ತಿರಲಿಲ್ಲ’ ಎಂದು ಹೇಳಿದ್ದಾರೆ.