ಇಲಾಖೆಯ ಜಂಟಿ ನಿರ್ದೇಶಕ ಡಾ. ಕಿರಣ್ ಕುಮಾರ್, ‘ಯುವಜನರು ಚಿಕ್ಕ ವಯಸ್ಸಿನಲ್ಲಿ ತಂಬಾಕು ವ್ಯಸನಿಗಳಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ತಂಬಾಕು ಚಟಕ್ಕೆ ಸಿಲುಕಿದ ನಂತರ ಶೇ 6ರಷ್ಟು ಜನ ಮಾತ್ರ ತಂಬಾಕು ಬಳಕೆಯಿಂದ ಹೊರಬರುತ್ತಿದ್ದಾರೆ. ಉಳಿದವರನ್ನು ಈ ಚಟದಿಂದ ಹೊರ ತರುವುದು ಕಷ್ಟವಾಗಿದೆ. ಇಲಾಖೆಯು ರಾಜ್ಯದಲ್ಲಿ ಜಾಗೃತಿ ಕಾರ್ಯಕ್ರಮಗಳ ಮೂಲಕ ತಂಬಾಕು ಮುಕ್ತ ಗ್ರಾಮಗಳನ್ನು ನಿರ್ಮಿಸುತ್ತಿದ್ದು, ಈ ಗ್ರಾಮಗಳ ಸಂಖ್ಯೆ 25ಕ್ಕೆ ಏರಿಕೆಯಾಗಿದೆ’ ಎಂದು ಹೇಳಿದರು.