<p><strong>ಬೆಂಗಳೂರು: </strong>ಅನಧಿಕೃತ ಸ್ಥಳಗಳಲ್ಲಿ ನಿಲುಗಡೆ ಮಾಡುವ ವಾಹನಗಳನ್ನು ಟೋಯಿಂಗ್ ವ್ಯವಸ್ಥೆಯಲ್ಲಿನ ಲೋಪಗಳನ್ನು ಸರಿಪಡಿಸಿ, ಸುಧಾರಣೆ ತರಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.</p>.<p>ಸುದ್ದಿಗಾರರ ಜತೆ ಭಾನುವಾರ ಮಾತನಾಡಿದ ಅವರು, 'ಹಿಂದೆ ಪೊಲೀಸ್ ಇಲಾಖೆಯೇ ಟೋಯಿಂಗ್ ಕೆಲಸವನ್ನು ನಿರ್ವಹಿಸುತ್ತಿತ್ತು. ಈಗ ಖಾಸಗಿಯವರಿಗೆ ಗುತ್ತಿಗೆಗೆ ನೀಡಲಾಗಿದೆ. ಇತ್ತೀಚೆಗೆ ನಡೆಯುತ್ತಿರುವ ಬೆಳವಣಿಗೆಗಳಿಂದ ಟೋಯಿಂಗ್ ವ್ಯವಸ್ಥೆ ಕುರಿತು ಪುನರ್ ಪರಿಶೀಲನೆ ಅಗತ್ಯ ಎಂಬ ತೀರ್ಮಾನಕ್ಕೆ ಬರಲಾಗಿದೆ' ಎಂದರು.</p>.<p>ಇದನ್ನೂ ಓದಿ:<a href="https://www.prajavani.net/karnataka-news/gandhis-ideology-is-the-pillar-of-democracy-says-karnataka-cm-basavaraj-bommai-906503.html" itemprop="url">ಗಾಂಧಿಯ ಸಿದ್ಧಾಂತ ಪ್ರಜಾತಂತ್ರದ ಆಧಾರಸ್ತಂಭ: ಬಸವರಾಜ ಬೊಮ್ಮಾಯಿ </a></p>.<p>ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮ ಅಗತ್ಯ. ಆದರೆ, ಕಾನೂನು ಜಾರಿಯ ಹೆಸರಿನಲ್ಲಿ ಅತಿರೇಕದ ವರ್ತನೆಗಳನ್ನೂ ಸಹಿಸಲಾಗದು. ಜನಸ್ನೇಹಿಯಾದ ವ್ಯವಸ್ಥೆಯನ್ನು ರೂಪಿಸುವ ಕುರಿತು ಯೋಚಿಸಲಾಗುತ್ತಿದೆ ಎಂದು ಹೇಳಿದರು.</p>.<p>ಟೋಯಿಂಗ್ ವ್ಯವಸ್ಥೆಯ ಸುಧಾರಣೆಗೆ ಸಂಬಂಧಿಸಿದಂತೆ ಸೋಮವಾರ ಉನ್ನತ ಮಟ್ಟದ ಸಭೆ ನಡೆಸಲಾಗುವುದು. ರಾಜ್ಯ ಪೊಲೀಸ್ ಮಹಾನಿರ್ದೇಶಕರು, ಬೆಂಗಳೂರು ನಗರ ಪೊಲೀಸ್ ಕಮಿಷನರ್, ಹೆಚ್ಚುವರಿ ಪೊಲೀಸ್ ಕಮಿಷನರ್ ಸೇರಿದಂತೆ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಲಾಗುವುದು ಎಂದರು.</p>.<p><strong>ಶಾಸಕರು, ಸಂಸದರ ಜತೆ ಚರ್ಚೆ:</strong><br />ಮೈಸೂರಿನಲ್ಲಿ ಸಂಸದ ಪ್ರತಾಪ ಸಿಂಹ ಮತ್ತು ಬಿಜೆಪಿ ಶಾಸಕರ ನಡುವಿನ ಭಿನ್ನಾಭಿಪ್ರಾಯದ ಕುರಿತು ಪ್ರತಿಕ್ರಿಯಿಸಿದ ಬೊಮ್ಮಾಯಿ, 'ಮೈಸೂರಿನಲ್ಲಿ ಅಭಿವೃದ್ಧಿ ವಿಚಾರದಲ್ಲಿ ಪೈಪೋಟಿ ನಡೆಯುತ್ತಿದೆ. ಸಂಸದರು ಮತ್ತು ಶಾಸಕರ ಜತೆ ಚರ್ಚಿಸಿ ಸಮಸ್ಯೆ ಪರಿಹರಿಸುತ್ತೇನೆ' ಎಂದರು.</p>.<p><strong>ಸ್ವಾರ್ಥ ಸಾಧನೆಗೆ ಆದ್ಯತೆ:</strong><br />ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಾಭಿಪ್ರಾಯಗಳ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, 'ಅದು ಆ ಪಕ್ಷದ ಆಂತರಿಕ ವಿಚಾರ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಭಿನ್ನಾಭಿಪ್ರಾಯ ಇರುವುದು ಎಲ್ಲರಿಗೂ ಗೊತ್ತು. ಕಾಂಗ್ರೆಸ್ ಪಕ್ಷಕ್ಕೆ ಯಾರೇ ನಾಯಕರಿದ್ದರೂ ಜನಹಿತಕ್ಕಿಂತ ಸ್ವಾರ್ಥ ಸಾಧನೆಗೆ ಆದ್ಯತೆ ನೀಡುವುದೇ ಹೆಚ್ಚು' ಎಂದು ಹೇಳಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಅನಧಿಕೃತ ಸ್ಥಳಗಳಲ್ಲಿ ನಿಲುಗಡೆ ಮಾಡುವ ವಾಹನಗಳನ್ನು ಟೋಯಿಂಗ್ ವ್ಯವಸ್ಥೆಯಲ್ಲಿನ ಲೋಪಗಳನ್ನು ಸರಿಪಡಿಸಿ, ಸುಧಾರಣೆ ತರಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.</p>.<p>ಸುದ್ದಿಗಾರರ ಜತೆ ಭಾನುವಾರ ಮಾತನಾಡಿದ ಅವರು, 'ಹಿಂದೆ ಪೊಲೀಸ್ ಇಲಾಖೆಯೇ ಟೋಯಿಂಗ್ ಕೆಲಸವನ್ನು ನಿರ್ವಹಿಸುತ್ತಿತ್ತು. ಈಗ ಖಾಸಗಿಯವರಿಗೆ ಗುತ್ತಿಗೆಗೆ ನೀಡಲಾಗಿದೆ. ಇತ್ತೀಚೆಗೆ ನಡೆಯುತ್ತಿರುವ ಬೆಳವಣಿಗೆಗಳಿಂದ ಟೋಯಿಂಗ್ ವ್ಯವಸ್ಥೆ ಕುರಿತು ಪುನರ್ ಪರಿಶೀಲನೆ ಅಗತ್ಯ ಎಂಬ ತೀರ್ಮಾನಕ್ಕೆ ಬರಲಾಗಿದೆ' ಎಂದರು.</p>.<p>ಇದನ್ನೂ ಓದಿ:<a href="https://www.prajavani.net/karnataka-news/gandhis-ideology-is-the-pillar-of-democracy-says-karnataka-cm-basavaraj-bommai-906503.html" itemprop="url">ಗಾಂಧಿಯ ಸಿದ್ಧಾಂತ ಪ್ರಜಾತಂತ್ರದ ಆಧಾರಸ್ತಂಭ: ಬಸವರಾಜ ಬೊಮ್ಮಾಯಿ </a></p>.<p>ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮ ಅಗತ್ಯ. ಆದರೆ, ಕಾನೂನು ಜಾರಿಯ ಹೆಸರಿನಲ್ಲಿ ಅತಿರೇಕದ ವರ್ತನೆಗಳನ್ನೂ ಸಹಿಸಲಾಗದು. ಜನಸ್ನೇಹಿಯಾದ ವ್ಯವಸ್ಥೆಯನ್ನು ರೂಪಿಸುವ ಕುರಿತು ಯೋಚಿಸಲಾಗುತ್ತಿದೆ ಎಂದು ಹೇಳಿದರು.</p>.<p>ಟೋಯಿಂಗ್ ವ್ಯವಸ್ಥೆಯ ಸುಧಾರಣೆಗೆ ಸಂಬಂಧಿಸಿದಂತೆ ಸೋಮವಾರ ಉನ್ನತ ಮಟ್ಟದ ಸಭೆ ನಡೆಸಲಾಗುವುದು. ರಾಜ್ಯ ಪೊಲೀಸ್ ಮಹಾನಿರ್ದೇಶಕರು, ಬೆಂಗಳೂರು ನಗರ ಪೊಲೀಸ್ ಕಮಿಷನರ್, ಹೆಚ್ಚುವರಿ ಪೊಲೀಸ್ ಕಮಿಷನರ್ ಸೇರಿದಂತೆ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಲಾಗುವುದು ಎಂದರು.</p>.<p><strong>ಶಾಸಕರು, ಸಂಸದರ ಜತೆ ಚರ್ಚೆ:</strong><br />ಮೈಸೂರಿನಲ್ಲಿ ಸಂಸದ ಪ್ರತಾಪ ಸಿಂಹ ಮತ್ತು ಬಿಜೆಪಿ ಶಾಸಕರ ನಡುವಿನ ಭಿನ್ನಾಭಿಪ್ರಾಯದ ಕುರಿತು ಪ್ರತಿಕ್ರಿಯಿಸಿದ ಬೊಮ್ಮಾಯಿ, 'ಮೈಸೂರಿನಲ್ಲಿ ಅಭಿವೃದ್ಧಿ ವಿಚಾರದಲ್ಲಿ ಪೈಪೋಟಿ ನಡೆಯುತ್ತಿದೆ. ಸಂಸದರು ಮತ್ತು ಶಾಸಕರ ಜತೆ ಚರ್ಚಿಸಿ ಸಮಸ್ಯೆ ಪರಿಹರಿಸುತ್ತೇನೆ' ಎಂದರು.</p>.<p><strong>ಸ್ವಾರ್ಥ ಸಾಧನೆಗೆ ಆದ್ಯತೆ:</strong><br />ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಾಭಿಪ್ರಾಯಗಳ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, 'ಅದು ಆ ಪಕ್ಷದ ಆಂತರಿಕ ವಿಚಾರ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಭಿನ್ನಾಭಿಪ್ರಾಯ ಇರುವುದು ಎಲ್ಲರಿಗೂ ಗೊತ್ತು. ಕಾಂಗ್ರೆಸ್ ಪಕ್ಷಕ್ಕೆ ಯಾರೇ ನಾಯಕರಿದ್ದರೂ ಜನಹಿತಕ್ಕಿಂತ ಸ್ವಾರ್ಥ ಸಾಧನೆಗೆ ಆದ್ಯತೆ ನೀಡುವುದೇ ಹೆಚ್ಚು' ಎಂದು ಹೇಳಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>