ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಹಾಗೂ ಕರ್ನಾಟಕ ಲೋಕಾಯುಕ್ತ ಕಾಯ್ದೆ ಕುರಿತು ಲೋಕಾಯುಕ್ತದ ಪೊಲೀಸ್ ಅಧಿಕಾರಿಗಳಿಗಾಗಿ ಹಮ್ಮಿಕೊಂಡಿರುವ ಎರಡು ದಿನಗಳ ಕಾರ್ಯಾಗಾರವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದ ಅವರು, ‘ವರ್ಗಾವಣೆ, ಹೊರಗಿನವರ ಒತ್ತಡ, ಅಮಾನತಿನ ಭಯವಿಲ್ಲದೆ ಕೆಲಸ ಮಾಡಲು ಲೋಕಾಯುಕ್ತದಲ್ಲಿ ಅವಕಾಶವಿದೆ. ಇಲ್ಲಿಗೆ ಬಂದಿರುವ ಅಧಿಕಾರಿಗಳು ಭ್ರಷ್ಟಾಚಾರದ ವಿರುದ್ಧ ಸೈನಿಕರಂತೆ ಕೆಲಸ ಮಾಡಬೇಕು’ ಎಂದರು.