‘ಶೋಭಾ ಬಗ್ಗೆ ಏಕೆ ಮಾತನಾಡುತ್ತಿಲ್ಲ?’
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ವಿ. ರಾಜೀವ್ ಗೌಡ ಮಾತನಾಡಿ, ‘15ನೇ ಹಣಕಾಸು ಆಯೋಗದ ಪ್ರಕಾರ ರಾಜ್ಯಕ್ಕೆ ಬಿಡುಗಡೆ ಮಾಡಬೇಕಿದ್ದ ₹ 5,495 ಕೋಟಿ ವಿಶೇಷ ಅನುದಾನವನ್ನು ಯಾಕೆ ಬಿಡುಗಡೆ ಮಾಡಿಲ್ಲ. 15ನೇ ಹಣಕಾಸು ಆಯೋಗದಲ್ಲಿ ಪೆರಿಫೆರಲ್ ರಿಂಗ್ ರಸ್ತೆಗೆ ನಿಗದಿಯಾಗಿದ್ದ ₹ 3 ಸಾವಿರವನ್ನು ತಡೆಹಿಡಿದಿದ್ದು ಏಕೆ. ಬಹಿರಂಗ ಚರ್ಚೆಗೆ ಕರೆದರೂ ಹಣಕಾಸು ಸಚಿವರು ಬರುತ್ತಿಲ್ಲವೇಕೆ. ಕಾಂಗ್ರೆಸ್ ಅಭ್ಯರ್ಥಿಗಳ ವಿರುದ್ಧ ಜಾರಿ ನಿರ್ದೇಶನಾಲಯ ಇಡಿ, ಐಟಿ, ಸಿಬಿಐ ದಾಳಿ ನಡೆಸುತಿರುವ ಕೇಂದ್ರ ಸರ್ಕಾರ ಸಚಿವೆ ಶೋಭಾ ಬಗ್ಗೆ ಏಕೆ ಮಾತನಾಡುತ್ತಿಲ್ಲ’ ಎಂದು ಪ್ರಧಾನಿಯನ್ನು ಪ್ರಶ್ನಿಸಿದರು.