<p><strong>ಸುವರ್ಣ ವಿಧಾನಸೌಧ (ಬೆಳಗಾವಿ):</strong> ಸೋಮವಾರ ಬೆಳಿಗ್ಗೆ 10.40ಕ್ಕೆ ಆರಂಭವಾದ ವಿಧಾನಸಭೆ ಕಲಾಪ ತಡರಾತ್ರಿ ತಡರಾತ್ರಿರವರೆಗೂ ನಡೆಯಿತು.</p><p>ರಾತ್ರಿ 1 ಗಂಟೆ ಬಳಿಕವೂ ಮುಂದುವರಿದಿತ್ತು.</p><p>ರಾತ್ರಿ 12.25ಕ್ಕೆ ತುಳು ಭಾಷೆಗೆ ಅಧಿಕೃತ ರಾಜ್ಯ ಭಾಷೆಯ ಸ್ಥಾನಮಾನ ಆರಂಭಿಸಿದ ಕಾಂಗ್ರೆಸ್ ಸದಸ್ಯ ಅಶೋಕ್ ರೈ, 'ಸೊಲ್ಮೆಲು' ಎಂದೇ ತುಳು ಭಾಷೆಯಲ್ಲಿ ಮಾತು ಆರಂಭಿಸಿದರು.</p><p>ಸಚಿವರಾದ ಕೃಷ್ಣ ಬೈರೇಗೌಡ, ಸತೀಶ ಜಾರಕಿಹೊಳಿ, ಕೆ.ಎನ್. ರಾಜಣ್ಣ, ಡಾ.ಎಂ.ಸಿ. ಸುಧಾಕರ್ ಸದನದಲ್ಲಿ ಹಾಜರಿದ್ದು, ಸದಸ್ಯರ ಪ್ರಶ್ನೆಗಳಿಗೆ ಉತ್ತರಿಸಿದರು.</p><p>ರಾತ್ರಿ 11 ಗಂಟೆಯಾಗುತ್ತಿದ್ದಂತೆ ಸಚಿವ ಕೃಷಬೈರೇಗೌಡ ಅವರು, 'ಸಭಾಧ್ಯಕ್ಷರೇ ಬೆಳಿಗ್ಗೆಯವರೆಗೂ ಕಲಾಪ ನಡೆಸೋಣ. ನಿಮ್ಮ ಅವಧಿಯಲ್ಲಿ ದಾಖಲೆ ನಿರ್ಮಾಣವಾಗಲಿ' ಎಂದರು.</p><p>'ನಾನು ಸಿದ್ದನಿದ್ದೇನೆ' ಎಂದು ನಗುತ್ತಲೇ ಹೇಳಿದ ಸಭಾಧ್ಯಕ್ಷ ಯು..ಟಿ. ಖಾದರ್ ಕಲಾಪ ಮುಂದುವರಿಸಿದರು.</p><p>ದೇವದುರ್ಗ ಶಾಸಕಿ ಕರೆಮ್ಮ ನಾಯಕ ಅವರು ಶಿಕ್ಷಕರ ಕೊರತೆ ಕುರಿತು 11.50ಕ್ಕೆ ಗಮನ ಸೆಳೆದರು. ತಮ್ಮ ಕ್ಷೇತ್ರಕ್ಕೆ ಹೆಚ್ಚಿನ ಶಿಕ್ಷಕರನ್ನು ಒದಗಿಸುವಂತೆ ಮನವಿ ಮಾಡಿದರು.</p><p>ನಂತರ ತೊಗರಿ ಬೆಳೆ ಹಾನಿ ಕುರಿತು ಗಮನ ಸೆಳೆದ ಕಾಂಗ್ರೆಸ್ ಸದಸ್ಯ ಯಶವಂತರಾಯಗೌಡ ಪಾಟೀಲ, ಬೆಳೆಹಾನಿಗೆ ಪರಿಹಾರ ನೀಡುವಂತೆ ಮನವಿ ಮಾಡಿದರು.</p><p>ಕೃಷ್ಣನಾಯ್ಕ, ನಾರಾ ಭರತ್ ರೆಡ್ಡಿ, ಶರಣಗೌಡ ಕಂದಕೂರ, ಎನ್.ಎಚ್. ಕೋನರಡ್ಡಿ ಸದನದಲ್ಲಿ ಹಾಜರಿದ್ದು ಪ್ರಶ್ನೆ ಕೇಳಿ, ಉತ್ತರ ಪಡೆದರು. ಕಾಂಗ್ರೆಸ್ ಸದಸ್ಯ ಎ.ಆರ್. ಕೃಷ್ಣಮೂರ್ತಿ ಅವರು ತಡರಾತ್ರಿ 1 ಗಂಟೆಗೆ ಗಮನ ಸೆಳೆಯುವ ಸೂಚನೆ ಮಂಡಿಸಿ ಉತ್ತರ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುವರ್ಣ ವಿಧಾನಸೌಧ (ಬೆಳಗಾವಿ):</strong> ಸೋಮವಾರ ಬೆಳಿಗ್ಗೆ 10.40ಕ್ಕೆ ಆರಂಭವಾದ ವಿಧಾನಸಭೆ ಕಲಾಪ ತಡರಾತ್ರಿ ತಡರಾತ್ರಿರವರೆಗೂ ನಡೆಯಿತು.</p><p>ರಾತ್ರಿ 1 ಗಂಟೆ ಬಳಿಕವೂ ಮುಂದುವರಿದಿತ್ತು.</p><p>ರಾತ್ರಿ 12.25ಕ್ಕೆ ತುಳು ಭಾಷೆಗೆ ಅಧಿಕೃತ ರಾಜ್ಯ ಭಾಷೆಯ ಸ್ಥಾನಮಾನ ಆರಂಭಿಸಿದ ಕಾಂಗ್ರೆಸ್ ಸದಸ್ಯ ಅಶೋಕ್ ರೈ, 'ಸೊಲ್ಮೆಲು' ಎಂದೇ ತುಳು ಭಾಷೆಯಲ್ಲಿ ಮಾತು ಆರಂಭಿಸಿದರು.</p><p>ಸಚಿವರಾದ ಕೃಷ್ಣ ಬೈರೇಗೌಡ, ಸತೀಶ ಜಾರಕಿಹೊಳಿ, ಕೆ.ಎನ್. ರಾಜಣ್ಣ, ಡಾ.ಎಂ.ಸಿ. ಸುಧಾಕರ್ ಸದನದಲ್ಲಿ ಹಾಜರಿದ್ದು, ಸದಸ್ಯರ ಪ್ರಶ್ನೆಗಳಿಗೆ ಉತ್ತರಿಸಿದರು.</p><p>ರಾತ್ರಿ 11 ಗಂಟೆಯಾಗುತ್ತಿದ್ದಂತೆ ಸಚಿವ ಕೃಷಬೈರೇಗೌಡ ಅವರು, 'ಸಭಾಧ್ಯಕ್ಷರೇ ಬೆಳಿಗ್ಗೆಯವರೆಗೂ ಕಲಾಪ ನಡೆಸೋಣ. ನಿಮ್ಮ ಅವಧಿಯಲ್ಲಿ ದಾಖಲೆ ನಿರ್ಮಾಣವಾಗಲಿ' ಎಂದರು.</p><p>'ನಾನು ಸಿದ್ದನಿದ್ದೇನೆ' ಎಂದು ನಗುತ್ತಲೇ ಹೇಳಿದ ಸಭಾಧ್ಯಕ್ಷ ಯು..ಟಿ. ಖಾದರ್ ಕಲಾಪ ಮುಂದುವರಿಸಿದರು.</p><p>ದೇವದುರ್ಗ ಶಾಸಕಿ ಕರೆಮ್ಮ ನಾಯಕ ಅವರು ಶಿಕ್ಷಕರ ಕೊರತೆ ಕುರಿತು 11.50ಕ್ಕೆ ಗಮನ ಸೆಳೆದರು. ತಮ್ಮ ಕ್ಷೇತ್ರಕ್ಕೆ ಹೆಚ್ಚಿನ ಶಿಕ್ಷಕರನ್ನು ಒದಗಿಸುವಂತೆ ಮನವಿ ಮಾಡಿದರು.</p><p>ನಂತರ ತೊಗರಿ ಬೆಳೆ ಹಾನಿ ಕುರಿತು ಗಮನ ಸೆಳೆದ ಕಾಂಗ್ರೆಸ್ ಸದಸ್ಯ ಯಶವಂತರಾಯಗೌಡ ಪಾಟೀಲ, ಬೆಳೆಹಾನಿಗೆ ಪರಿಹಾರ ನೀಡುವಂತೆ ಮನವಿ ಮಾಡಿದರು.</p><p>ಕೃಷ್ಣನಾಯ್ಕ, ನಾರಾ ಭರತ್ ರೆಡ್ಡಿ, ಶರಣಗೌಡ ಕಂದಕೂರ, ಎನ್.ಎಚ್. ಕೋನರಡ್ಡಿ ಸದನದಲ್ಲಿ ಹಾಜರಿದ್ದು ಪ್ರಶ್ನೆ ಕೇಳಿ, ಉತ್ತರ ಪಡೆದರು. ಕಾಂಗ್ರೆಸ್ ಸದಸ್ಯ ಎ.ಆರ್. ಕೃಷ್ಣಮೂರ್ತಿ ಅವರು ತಡರಾತ್ರಿ 1 ಗಂಟೆಗೆ ಗಮನ ಸೆಳೆಯುವ ಸೂಚನೆ ಮಂಡಿಸಿ ಉತ್ತರ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>