<p><strong>ಬೆಳಗಾವಿ (ಸುವರ್ಣ ವಿಧಾನಸೌಧ):</strong> ‘ಕಿರು ಹಣಕಾಸು (ಮೈಕ್ರೋ ಫೈನಾನ್ಸ್) ಸಂಸ್ಥೆಗಳು ಸಾಲ ನೀಡಿ, ಹೆಚ್ಚಿನ ಬಡ್ಡಿ, ಶುಲ್ಕ ಸಂಗ್ರಹಿಸುವುದನ್ನು ಹಾಗೂ ಸಾಲಗಾರರಿಗೆ ಕಿರುಕುಳ ನೀಡುವುದನ್ನು ತಡೆಯಲು ಪ್ರತ್ಯೇಕ ಮಸೂದೆ ರೂಪಿಸಲಾಗುವುದು’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಧಾನಸಭೆಯಲ್ಲಿ ಭರವಸೆ ನೀಡಿದರು.</p>.<p>ಅತಿ ಹೆಚ್ಚಿನ ಬಡ್ಡಿ ನೀಡುವ ಆಮಿಷವೊಡ್ಡಿ, ಠೇವಣಿ ಸಂಗ್ರಹಿಸಿ, ವಂಚಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ಇದ್ದ ತೊಡಕುಗಳನ್ನು ನಿವಾರಿಸಲು ರೂಪಿಸಿರುವ ‘ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ) ಮಸೂದೆ–2024’ಕ್ಕೆ ವಿಧಾನಸಭೆ ಸೋಮವಾರ ಅಂಗೀಕಾರ ನೀಡಿತು.</p>.<p>ಮಸೂದೆ ಕುರಿತ ಚರ್ಚೆಯಲ್ಲಿ ಭಾಗವಹಿಸಿದ ಕಾಂಗ್ರೆಸ್ನ ಪಿ.ಎಂ. ನರೇಂದ್ರಸ್ವಾಮಿ, ‘ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಜನರನ್ನು ಶೋಷಣೆ ಮಾಡುತ್ತಿವೆ. ಅವುಗಳ ನಿಯಂತ್ರಣವೂ ಆಗಬೇಕು’ ಎಂದು ಆಗ್ರಹಿಸಿದರು. ‘ಶೇಕಡ 40ರಷ್ಟು ಬಡ್ಡಿ ಸಂಗ್ರಹಿಸುತ್ತಿದ್ದಾರೆ’ ಎಂದು ಕಾಂಗ್ರೆಸ್ನ ಕೆ.ಎಂ. ಶಿವಲಿಂಗೇಗೌಡ ದೂರಿದರು.</p>.<p><strong>ಜಿಎಸ್ಟಿ ಮಸೂದೆಗೂ ಒಪ್ಪಿಗೆ:</strong> ರಾಜ್ಯ ಸರ್ಕಾರ ಮತ್ತು ತೆರಿಗಾರರ ಮಧ್ಯೆ ಇರುವ 80,000 ಪ್ರಕರಣಗಳನ್ನು ಒಂದು ಬಾರಿ ತೀರುವಳಿ ಯೋಜನೆಯಡಿ ಇತ್ಯರ್ಥಪಡಿಸಲು ಅವಕಾಶ ಕಲ್ಪಿಸುವ ‘ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ಎರಡನೇ ತಿದ್ದುಪಡಿ) ಮಸೂದೆ–2024’ಕ್ಕೆ ಸದನ ಒಪ್ಪಿಗೆ ನೀಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ (ಸುವರ್ಣ ವಿಧಾನಸೌಧ):</strong> ‘ಕಿರು ಹಣಕಾಸು (ಮೈಕ್ರೋ ಫೈನಾನ್ಸ್) ಸಂಸ್ಥೆಗಳು ಸಾಲ ನೀಡಿ, ಹೆಚ್ಚಿನ ಬಡ್ಡಿ, ಶುಲ್ಕ ಸಂಗ್ರಹಿಸುವುದನ್ನು ಹಾಗೂ ಸಾಲಗಾರರಿಗೆ ಕಿರುಕುಳ ನೀಡುವುದನ್ನು ತಡೆಯಲು ಪ್ರತ್ಯೇಕ ಮಸೂದೆ ರೂಪಿಸಲಾಗುವುದು’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಧಾನಸಭೆಯಲ್ಲಿ ಭರವಸೆ ನೀಡಿದರು.</p>.<p>ಅತಿ ಹೆಚ್ಚಿನ ಬಡ್ಡಿ ನೀಡುವ ಆಮಿಷವೊಡ್ಡಿ, ಠೇವಣಿ ಸಂಗ್ರಹಿಸಿ, ವಂಚಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ಇದ್ದ ತೊಡಕುಗಳನ್ನು ನಿವಾರಿಸಲು ರೂಪಿಸಿರುವ ‘ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ) ಮಸೂದೆ–2024’ಕ್ಕೆ ವಿಧಾನಸಭೆ ಸೋಮವಾರ ಅಂಗೀಕಾರ ನೀಡಿತು.</p>.<p>ಮಸೂದೆ ಕುರಿತ ಚರ್ಚೆಯಲ್ಲಿ ಭಾಗವಹಿಸಿದ ಕಾಂಗ್ರೆಸ್ನ ಪಿ.ಎಂ. ನರೇಂದ್ರಸ್ವಾಮಿ, ‘ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಜನರನ್ನು ಶೋಷಣೆ ಮಾಡುತ್ತಿವೆ. ಅವುಗಳ ನಿಯಂತ್ರಣವೂ ಆಗಬೇಕು’ ಎಂದು ಆಗ್ರಹಿಸಿದರು. ‘ಶೇಕಡ 40ರಷ್ಟು ಬಡ್ಡಿ ಸಂಗ್ರಹಿಸುತ್ತಿದ್ದಾರೆ’ ಎಂದು ಕಾಂಗ್ರೆಸ್ನ ಕೆ.ಎಂ. ಶಿವಲಿಂಗೇಗೌಡ ದೂರಿದರು.</p>.<p><strong>ಜಿಎಸ್ಟಿ ಮಸೂದೆಗೂ ಒಪ್ಪಿಗೆ:</strong> ರಾಜ್ಯ ಸರ್ಕಾರ ಮತ್ತು ತೆರಿಗಾರರ ಮಧ್ಯೆ ಇರುವ 80,000 ಪ್ರಕರಣಗಳನ್ನು ಒಂದು ಬಾರಿ ತೀರುವಳಿ ಯೋಜನೆಯಡಿ ಇತ್ಯರ್ಥಪಡಿಸಲು ಅವಕಾಶ ಕಲ್ಪಿಸುವ ‘ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ಎರಡನೇ ತಿದ್ದುಪಡಿ) ಮಸೂದೆ–2024’ಕ್ಕೆ ಸದನ ಒಪ್ಪಿಗೆ ನೀಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>