‘4 ಎಕರೆ 5 ಗುಂಟೆ ಜಮೀನಿನಲ್ಲಿ ಅನುಮತಿ ಇಲ್ಲದೇ ಅಕ್ರಮವಾಗಿ ಗಣಿಗಾರಿಕೆ ನಡೆಸಲಾಗಿದೆ. 4 ಪ್ರದೇಶಗಳಲ್ಲಿ 51,460 ಟನ್ ಪ್ರಮಾಣದ ಭೂ ಅಗೆತ ಮಾಡಲಾಗಿದೆ. ಸ್ಥಳದಲ್ಲಿ 5,000 ಟನ್ ಕಟ್ಟಡ ಕಲ್ಲಿನ ದಾಸ್ತಾನು ಇದೆ. 25,876 ಟನ್ ಕಟ್ಟಡ ಕಲ್ಲು ಬೇರೆಡೆ ಸಾಗಿಸಲಾಗಿದೆ. ಇದರಿಂದಾಗಿ ಸರ್ಕಾರಕ್ಕೆ ₹25.35 ಲಕ್ಷ ನಷ್ಟವಾಗಿದೆ’ ಎಂದು ಪ್ರತಿಮಾ ಅವರು ವರದಿಯಲ್ಲಿ ಉಲ್ಲೇಖಿಸಿದ್ದರು.