ಭಾರಿ ಸ್ಫೋಟ ಮತ್ತು ಸದ್ದಿನ ಪಟಾಕಿ ಪ್ರದರ್ಶನ ವೇಳೆ ಸಿಡಿಮದ್ದೊಂದು ಹಾರಿ ಬಂದು ಈಕೆಯ ತಲೆಗೆ ಬಡಿಯಿತು. ತೀವ್ರ ರಕ್ತಸ್ರಾವದಿಂದ ಅವರು ಸ್ಥಳದಲ್ಲೇ ಕುಸಿದುಬಿದ್ದರು. ತಕ್ಷಣ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿ ಅಲ್ಲಿಂದ ತುಮಕೂರು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಮಾರ್ಗ ಮಧ್ಯೆ ಮೃತಪಟ್ಟರು.
ಇದೇ ಸಂದರ್ಭದಲ್ಲಿ ಸಿಡಿಮದ್ದು ಬಡಿದು ತಿಪಟೂರು ತಾಲ್ಲೂಕು ಮತ್ತಿಹಳ್ಳಿ ಗ್ರಾಮದ ಜಿತೇಂದ್ರ (19) ಎಂಬುವರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರನ್ನು ಬೆಂಗಳೂರು ನಿಮ್ಹಾನ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಗಣೇಶೋತ್ಸವ ಸಮಿತಿ, ಪಟಾಕಿ ತಯಾರಕರು ಹಾಗೂ ಪಟಾಕಿ ಸಿಡಿಸಿದವರ ವಿರುದ್ಧ ನಗರಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.