ವಿಡಿಯೊ ಮಾಡದಿರಲು ಸೂಚನೆ: ಈ ಘಟನೆಯನ್ನು ಯುವಕನೊಬ್ಬ ಮೊಬೈಲ್ನಲ್ಲಿ ಚಿತ್ರೀಕರಿಸುತ್ತಿದ್ದರು. ಇದನ್ನು ನೋಡಿದ ಅನಂತಕುಮಾರ್ ಅವರು, ಚಿತ್ರೀಕರಿಸದಂತೆ ತಾಕೀತು ಮಾಡಿದರು. ಮೊಬೈಲ್ ಕಸಿದುಕೊಳ್ಳಲು ಮುಂದಾದರು. ಆಗ ಸ್ಥಳೀಯರು ತೀವ್ರವಾಗಿ ಪ್ರತಿಭಟಿಸಿದರು. ಇದರಿಂದ ಬೇಸರಗೊಂಡ ಅವರು, ಅಲ್ಲಿಂದ ಹೊರಟುಹೋದರು. ಅವರ ಜೊತೆ ಶಾಸಕ ಮಹಾಂತೇಶ ದೊಡ್ಡಗೌಡರ ಹೆಜ್ಜೆಹಾಕಿದರು.