<p><strong>ಬೆಂಗಳೂರು:</strong> ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಿ, 175ಕ್ಕೂ ಹೆಚ್ಚು ವಲಸೆ ಕಾರ್ಮಿಕರಿಗೆ ವಿಮಾನದ ಟಿಕೆಟ್ ವ್ಯವಸ್ಥೆ ಮಾಡುವ ಮೂಲಕ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ (ಎನ್ಎಲ್ಎಸ್) ವಿದ್ಯಾರ್ಥಿಗಳು ಮಾನವೀಯತೆ ಮೆರೆದಿದ್ದಾರೆ.</p>.<p>ಮುಂಬೈನಿಂದ ತವರು ರಾಜ್ಯ ಜಾರ್ಖಂಡ್ನ ರಾಂಚಿಗೆ ತೆರಳಲು ವಲಸೆ ಕಾರ್ಮಿಕರಿಗೆ ಎನ್ಎಲ್ಎಸ್ನ 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೆರವು ನೀಡಿದ್ದಾರೆ. ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ವಿಮಾನ ನಿಲ್ದಾಣದಿಂದ ಗುರುವಾರ ಬೆಳಿಗ್ಗೆ 6ಕ್ಕೆ ಏರ್ಏಷ್ಯಾ ವಿಮಾನ ಏರಿದ ಈ ಕಾರ್ಮಿಕರು, ಬೆಳಿಗ್ಗೆ 8.25ಕ್ಕೆ ರಾಂಚಿಯ ಬಿರ್ಸಾ ಮುಂಡಾ ವಿಮಾನ ನಿಲ್ದಾಣದಲ್ಲಿ ಇಳಿದಿದ್ದಾರೆ.</p>.<p>ಮೊದಲ ಬಾರಿಗೆ ವಿಮಾನವೇರಿದ್ದ ಕಾರ್ಮಿಕರಿಗೆ, ರಾಂಚಿಯಲ್ಲಿ ಇಳಿಯುತ್ತಿದ್ದಂತೆ ಖಾಸಗಿ ಬಸ್ಗಳ ವ್ಯವಸ್ಥೆಯನ್ನೂ ವಿದ್ಯಾರ್ಥಿಗಳು ಮಾಡಿದ್ದರು. ಎಲ್ಲರನ್ನೂ ಕ್ವಾರಂಟೈನ್ ಕೇಂದ್ರಗಳಲ್ಲಿ ಇಡಲಾಗಿದೆ.</p>.<p>‘ಕಟ್ಟಡ ಕಾರ್ಮಿಕರು, ಬಡಗಿಗಳು, ಟ್ಯಾಕ್ಸಿ ಚಾಲಕರು ಹಾಗೂ ಮನೆಗೆಲಸ ಮಾಡುವವರು ಈ ತಂಡದಲ್ಲಿದ್ದರು. ದುಡ್ಡಿಲ್ಲದ ಕಾರಣ ತವರು ರಾಜ್ಯಕ್ಕೆ ಮರಳಲೂ ಪರದಾಡುತ್ತಿದ್ದರು. ಅವರ ಕಷ್ಟ ನೋಡಲಾಗದೆ ಟಿಕೆಟ್ ವ್ಯವಸ್ಥೆ ಮಾಡಿದೆವು’ ಎಂದು ಟಿಕೆಟ್ ವ್ಯವಸ್ಥೆ ಮಾಡಿದವರಲ್ಲಿ ಒಬ್ಬರಾದ ಶೈಲ್ ತ್ರೆಹಾನ್ ಹೇಳಿದರು.</p>.<p>‘ವಲಸೆ ಕಾರ್ಮಿಕರು ಪಡುತ್ತಿರುವ ಕಷ್ಟ ನಿತ್ಯ ನೋಡುತ್ತಿದ್ದೇವೆ. ಈ ಕಾರ್ಮಿಕರ ಸಂಕಷ್ಟವನ್ನೂ ಮಾಧ್ಯಮಗಳಲ್ಲಿ ನೋಡಿದೆವು. ವಿದ್ಯಾರ್ಥಿಗಳಾದ ನಾವು ಈ ಸಂದರ್ಭದಲ್ಲಿ ಸಮಾಜಕ್ಕೆ ಏನಾದರೂ ನೆರವು ನೀಡಬೇಕು ಎಂದು ನಿರ್ಧರಿಸಿದ್ದೆವು. ಸಾರ್ವಜನಿಕರಿಂದ ದೇಣಿಗೆ (ಕ್ರೌಡ್ ಫಂಡಿಂಗ್) ಸಂಗ್ರಹಿಸಿ ಟಿಕೆಟ್ ವ್ಯವಸ್ಥೆ ಮಾಡಿದೆವು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಿ, 175ಕ್ಕೂ ಹೆಚ್ಚು ವಲಸೆ ಕಾರ್ಮಿಕರಿಗೆ ವಿಮಾನದ ಟಿಕೆಟ್ ವ್ಯವಸ್ಥೆ ಮಾಡುವ ಮೂಲಕ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ (ಎನ್ಎಲ್ಎಸ್) ವಿದ್ಯಾರ್ಥಿಗಳು ಮಾನವೀಯತೆ ಮೆರೆದಿದ್ದಾರೆ.</p>.<p>ಮುಂಬೈನಿಂದ ತವರು ರಾಜ್ಯ ಜಾರ್ಖಂಡ್ನ ರಾಂಚಿಗೆ ತೆರಳಲು ವಲಸೆ ಕಾರ್ಮಿಕರಿಗೆ ಎನ್ಎಲ್ಎಸ್ನ 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೆರವು ನೀಡಿದ್ದಾರೆ. ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ವಿಮಾನ ನಿಲ್ದಾಣದಿಂದ ಗುರುವಾರ ಬೆಳಿಗ್ಗೆ 6ಕ್ಕೆ ಏರ್ಏಷ್ಯಾ ವಿಮಾನ ಏರಿದ ಈ ಕಾರ್ಮಿಕರು, ಬೆಳಿಗ್ಗೆ 8.25ಕ್ಕೆ ರಾಂಚಿಯ ಬಿರ್ಸಾ ಮುಂಡಾ ವಿಮಾನ ನಿಲ್ದಾಣದಲ್ಲಿ ಇಳಿದಿದ್ದಾರೆ.</p>.<p>ಮೊದಲ ಬಾರಿಗೆ ವಿಮಾನವೇರಿದ್ದ ಕಾರ್ಮಿಕರಿಗೆ, ರಾಂಚಿಯಲ್ಲಿ ಇಳಿಯುತ್ತಿದ್ದಂತೆ ಖಾಸಗಿ ಬಸ್ಗಳ ವ್ಯವಸ್ಥೆಯನ್ನೂ ವಿದ್ಯಾರ್ಥಿಗಳು ಮಾಡಿದ್ದರು. ಎಲ್ಲರನ್ನೂ ಕ್ವಾರಂಟೈನ್ ಕೇಂದ್ರಗಳಲ್ಲಿ ಇಡಲಾಗಿದೆ.</p>.<p>‘ಕಟ್ಟಡ ಕಾರ್ಮಿಕರು, ಬಡಗಿಗಳು, ಟ್ಯಾಕ್ಸಿ ಚಾಲಕರು ಹಾಗೂ ಮನೆಗೆಲಸ ಮಾಡುವವರು ಈ ತಂಡದಲ್ಲಿದ್ದರು. ದುಡ್ಡಿಲ್ಲದ ಕಾರಣ ತವರು ರಾಜ್ಯಕ್ಕೆ ಮರಳಲೂ ಪರದಾಡುತ್ತಿದ್ದರು. ಅವರ ಕಷ್ಟ ನೋಡಲಾಗದೆ ಟಿಕೆಟ್ ವ್ಯವಸ್ಥೆ ಮಾಡಿದೆವು’ ಎಂದು ಟಿಕೆಟ್ ವ್ಯವಸ್ಥೆ ಮಾಡಿದವರಲ್ಲಿ ಒಬ್ಬರಾದ ಶೈಲ್ ತ್ರೆಹಾನ್ ಹೇಳಿದರು.</p>.<p>‘ವಲಸೆ ಕಾರ್ಮಿಕರು ಪಡುತ್ತಿರುವ ಕಷ್ಟ ನಿತ್ಯ ನೋಡುತ್ತಿದ್ದೇವೆ. ಈ ಕಾರ್ಮಿಕರ ಸಂಕಷ್ಟವನ್ನೂ ಮಾಧ್ಯಮಗಳಲ್ಲಿ ನೋಡಿದೆವು. ವಿದ್ಯಾರ್ಥಿಗಳಾದ ನಾವು ಈ ಸಂದರ್ಭದಲ್ಲಿ ಸಮಾಜಕ್ಕೆ ಏನಾದರೂ ನೆರವು ನೀಡಬೇಕು ಎಂದು ನಿರ್ಧರಿಸಿದ್ದೆವು. ಸಾರ್ವಜನಿಕರಿಂದ ದೇಣಿಗೆ (ಕ್ರೌಡ್ ಫಂಡಿಂಗ್) ಸಂಗ್ರಹಿಸಿ ಟಿಕೆಟ್ ವ್ಯವಸ್ಥೆ ಮಾಡಿದೆವು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>