ಇತ್ತೀಚೆಗೆ ಆಂದ್ರಪ್ರದೇಶದ ಹಿಂದೂಪುರದಿಂದ ಗಡಿ ಭಾಗದ ಗ್ರಾಮಗಳಾದ ಕಡಗತ್ತೂರು ಮೂಲಕ ವ್ಯಕ್ತಿಯೋರ್ವ ತರಕಾರಿ ಮಾರುವ ನೆಪದಲ್ಲಿ ದನದ ಮಾಂಸವನ್ನು ಜಿಲ್ಲಾ ಕೇಂದ್ರದತ್ತ ಸಾಗಿಸುತ್ತಿದ್ದು, ಇದನ್ನು ಕಂಡ ಚಂದನದೂರಿನ ಕಾರ್ಯಪಡೆಯ ಯುವಕರು ಕೂಡಲೇ ಆತನನ್ನು ತಡೆದು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಕೂಡಲೇ ಆ ವ್ಯಕ್ತಿಯನ್ನು ಯುವಕರು ಹಿಡಿದು ತಳಿಸಿದ್ದಾರೆ. ಬಳಿಕ ಸ್ಥಳೀಯ ಹಾಲಗಾನಹಳ್ಳಿ ಗ್ರಾಮ ಪಂಚಾಯಿತಿಯ ಸಿಬ್ಬಂದಿ, ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಹಾಗೂ ಸಿಬ್ಬಂದಿ ಸ್ಥಳಕ್ಕಾಗಮಿಸಿ ಆತನ ವಿರುದ್ದ ಕ್ರಮ ಕೈಗೊಂಡು ಗ್ರಾಮಾಂತರ ಠಾಣೆಯಲ್ಲಿ ಇರಿಸಿದ್ದರು. ಬಳಿಕ ಆರೋಗ್ಯ ಅಧಿಕಾರಿಗಳು ಆತನನ್ನು ತಪಾಸಣೆ ನಡೆಸಿದಾಗ ಕೊರೊನಾ ವೈರಸ್ ಪಾಸಿಟಿವ್ ದೃಢಪಟ್ಟಿದೆ.