ಕಲ್ಯಾಣರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷ ಹಾಗೂ ಶಾಸಕ ಜನಾರ್ದನ ರೆಡ್ಡಿ ಅವರೂ ಸದ್ಯದಲ್ಲೇ ಬಿಜೆಪಿಗೆ ವಾಪಸಾಗಲಿದ್ದಾರೆ ಎಂಬ ಚರ್ಚೆ ಪಕ್ಷದಲ್ಲಿ ಆರಂಭವಾಗಿದೆ. ‘ಬಿಜೆಪಿ ಸೇರ್ಪಡೆಗೆ ರೆಡ್ಡಿ ಉತ್ಸುಕರಾಗಿದ್ದಾರೆ. ಅವರನ್ನು ಶೀಘ್ರದಲ್ಲಿ ಪಕ್ಷಕ್ಕೆ ಸೇರಿಸಿಕೊಳ್ಳಬೇಕು. ಇದರಿಂದ ಬಳ್ಳಾರಿ, ಕೊಪ್ಪಳ ಮತ್ತಿತರ ಕ್ಷೇತ್ರಗಳಲ್ಲಿ ಪಕ್ಷಕ್ಕೆ ಅನುಕೂಲವಾಗಲಿದೆ’ ಎಂದು ಶ್ರೀರಾಮುಲು ಅವರು ವರಿಷ್ಠರ ಗಮನಕ್ಕೆ ತಂದರು.