<p><strong>ಬೆಂಗಳೂರು:</strong> ರಾಷ್ಟ್ರ ಧ್ವಜದ ಮಹತ್ವ ಮತ್ತು ಇತಿಹಾಸ ತಿಳಿಯದೇ ಕೇಸರಿ ಧ್ವಜವನ್ನೇ ರಾಷ್ಟ್ರಧ್ವಜ ಮಾಡಲು ಹೊರಟಿರುವ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಅವರ ಮೇಲೆ ಪೊಲೀಸರು ದೇಶದ್ರೋಹದಪ್ರಕರಣ ದಾಖಲಿಸಬೇಕು ಎಂದು ಕಾಂಗ್ರೆಸ್ ಮುಖಂಡ<br />ಎಚ್.ಸಿ. ಮಹದೇವಪ್ಪ ಆಗ್ರಹಿಸಿದ್ದಾರೆ.</p>.<p>‘ಮುಂದಿನ ಐವತ್ತು–ನೂರು ವರ್ಷಗಳಲ್ಲಿ ಕೇಸರಿ ಧ್ವಜ ರಾಷ್ಟ್ರ ಧ್ವಜವಾಗಬಹುದು’ ಎಂದು ಈಶ್ವರಪ್ಪ ಬುಧವಾರ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಮಹದೇವಪ್ಪ,ಸಂವಿಧಾನ ಬದ್ಧವಾದ ರಾಷ್ಟ್ರೀಯ ಚಿಹ್ನೆಗಳನ್ನು ಅಗೌರವದಿಂದ ಕಾಣುತ್ತಿರುವ<br />ಅವರ ವಿರುದ್ಧ ವಿಧಾನಸಭಾಅಧ್ಯಕ್ಷರು ಸದನದ ಒಳಗೆ ಕಠಿಣ ಕ್ರಮ ಜರುಗಿಸಲಿ ಎಂದು ಅವರು ಆಗ್ರಹಿಸಿದ್ದಾರೆ.</p>.<p>ಚುನಾವಣೆ ಹತ್ತಿರ ಬಂದರೆ ಬಿಜೆಪಿಗರಿಗೆ ದೇಶವೂ ಮುಖ್ಯವಲ್ಲ, ಜನರೂ ಮುಖ್ಯವಲ್ಲ ಎಂಬಂತಾಗಿದೆ. ಇವರೊಳಗೆ ಸದಾ ಒಬ್ಬ ದೇಶದ್ರೋಹಿ ಅಡಗಿರುತ್ತಾನೆ ಎನ್ನುವುದಕ್ಕೆ ಈಶ್ವರಪ್ಪನವರ ಈ ಮಾತುಗಳೇ ಸಾಕ್ಷಿಯಾಗಿವೆ.ಸಂವಿಧಾನಕ್ಕೆ ದುರುದ್ದೇಶ<br />ಪೂರ್ವಕವಾಗಿಯೇ ಅಗೌರವ ಸೂಚಿಸುವ ಇಂತಹ ವ್ಯಕ್ತಿಗಳು ಜನ ಪ್ರತಿನಿಧಿ ಸ್ಥಾನದಲ್ಲಿರುವುದು ನಮ್ಮ ಪ್ರಜಾಪ್ರಭುತ್ವದ ದುರ್ದೈವ ಎಂದು ಅವರು ಹೇಳಿದ್ದಾರೆ.</p>.<p>‘ನಮ್ಮ ಸ್ವತಂತ್ರ ದೇಶದ ಸಮಗ್ರತೆ ಮತ್ತು ಐಕ್ಯತೆಯ ಸಂಕೇತವಾಗಿರುವ ರಾಷ್ಟ್ರ ಧ್ವಜದ ಅವಹೇಳನ, ಅಗೌರವ ಮತ್ತು ಅಪ ನಂಬಿಕೆಯು ರಾಷ್ಟ್ರ ದ್ರೋಹ’ ಎಂದು ಅವರು ಪ್ರತಿಪಾದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಷ್ಟ್ರ ಧ್ವಜದ ಮಹತ್ವ ಮತ್ತು ಇತಿಹಾಸ ತಿಳಿಯದೇ ಕೇಸರಿ ಧ್ವಜವನ್ನೇ ರಾಷ್ಟ್ರಧ್ವಜ ಮಾಡಲು ಹೊರಟಿರುವ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಅವರ ಮೇಲೆ ಪೊಲೀಸರು ದೇಶದ್ರೋಹದಪ್ರಕರಣ ದಾಖಲಿಸಬೇಕು ಎಂದು ಕಾಂಗ್ರೆಸ್ ಮುಖಂಡ<br />ಎಚ್.ಸಿ. ಮಹದೇವಪ್ಪ ಆಗ್ರಹಿಸಿದ್ದಾರೆ.</p>.<p>‘ಮುಂದಿನ ಐವತ್ತು–ನೂರು ವರ್ಷಗಳಲ್ಲಿ ಕೇಸರಿ ಧ್ವಜ ರಾಷ್ಟ್ರ ಧ್ವಜವಾಗಬಹುದು’ ಎಂದು ಈಶ್ವರಪ್ಪ ಬುಧವಾರ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಮಹದೇವಪ್ಪ,ಸಂವಿಧಾನ ಬದ್ಧವಾದ ರಾಷ್ಟ್ರೀಯ ಚಿಹ್ನೆಗಳನ್ನು ಅಗೌರವದಿಂದ ಕಾಣುತ್ತಿರುವ<br />ಅವರ ವಿರುದ್ಧ ವಿಧಾನಸಭಾಅಧ್ಯಕ್ಷರು ಸದನದ ಒಳಗೆ ಕಠಿಣ ಕ್ರಮ ಜರುಗಿಸಲಿ ಎಂದು ಅವರು ಆಗ್ರಹಿಸಿದ್ದಾರೆ.</p>.<p>ಚುನಾವಣೆ ಹತ್ತಿರ ಬಂದರೆ ಬಿಜೆಪಿಗರಿಗೆ ದೇಶವೂ ಮುಖ್ಯವಲ್ಲ, ಜನರೂ ಮುಖ್ಯವಲ್ಲ ಎಂಬಂತಾಗಿದೆ. ಇವರೊಳಗೆ ಸದಾ ಒಬ್ಬ ದೇಶದ್ರೋಹಿ ಅಡಗಿರುತ್ತಾನೆ ಎನ್ನುವುದಕ್ಕೆ ಈಶ್ವರಪ್ಪನವರ ಈ ಮಾತುಗಳೇ ಸಾಕ್ಷಿಯಾಗಿವೆ.ಸಂವಿಧಾನಕ್ಕೆ ದುರುದ್ದೇಶ<br />ಪೂರ್ವಕವಾಗಿಯೇ ಅಗೌರವ ಸೂಚಿಸುವ ಇಂತಹ ವ್ಯಕ್ತಿಗಳು ಜನ ಪ್ರತಿನಿಧಿ ಸ್ಥಾನದಲ್ಲಿರುವುದು ನಮ್ಮ ಪ್ರಜಾಪ್ರಭುತ್ವದ ದುರ್ದೈವ ಎಂದು ಅವರು ಹೇಳಿದ್ದಾರೆ.</p>.<p>‘ನಮ್ಮ ಸ್ವತಂತ್ರ ದೇಶದ ಸಮಗ್ರತೆ ಮತ್ತು ಐಕ್ಯತೆಯ ಸಂಕೇತವಾಗಿರುವ ರಾಷ್ಟ್ರ ಧ್ವಜದ ಅವಹೇಳನ, ಅಗೌರವ ಮತ್ತು ಅಪ ನಂಬಿಕೆಯು ರಾಷ್ಟ್ರ ದ್ರೋಹ’ ಎಂದು ಅವರು ಪ್ರತಿಪಾದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>