<p><strong>ಬೆಂಗಳೂರು:</strong> ‘ಹಿಜಾಬ್ ವಿಚಾರವಾಗಿ ತೀರ್ಪು ನೀಡಿರುವ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಮತ್ತು ಇಬ್ಬರುನ್ಯಾಯಮೂರ್ತಿಗಳಿಗೆ ತಮಿಳುನಾಡಿನಲ್ಲಿ ಕೊಲೆ ಬೆದರಿಕೆ ಹಾಕಿದ ವಿಷಯವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ನ್ಯಾಯಮೂರ್ತಿಗಳಿಗೆ ಈಗಿರುವ ಭದ್ರತೆಯ ಜೊತೆಗೆ ‘ವೈ’ ಕೆಟಗರಿ ಭದ್ರತೆ ನೀಡಲು ತೀರ್ಮಾನಿಸಲಾಗಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.</p>.<p>ಸುದ್ದಿಗಾರರ ಜೊತೆ ಭಾನುವಾರ ಮಾತನಾಡಿದ ಅವರು, ‘ಈ ರೀತಿಯ ಬೆದರಿಕೆಯ ಮೂಲಕ ಕೆಲವು ದೇಶದ್ರೋಹಿ ಶಕ್ತಿಗಳು ಈ ದೇಶದ ವ್ಯವ್ಯಸ್ಥೆಗೆ ಸವಾಲು ಹಾಕುವ ಪ್ರಯತ್ನ ಮಾಡಿವೆ. ಇಂತಹ ದೇಶದ್ರೋಹಿ ಶಕ್ತಿಗಳನ್ನು ಸಹಿಸುವುದಿಲ್ಲ’ ಎಂದರು.</p>.<p>‘ಕೊಲೆ ಬೆದರಿಕೆ ಬಗ್ಗೆ ತಮಿಳುನಾಡಿನಲ್ಲಿ ಪ್ರಕರಣ ದಾಖಲಾಗಿದೆ. ವಕೀಲರೊಬ್ಬರು ವಿಧಾನಸೌಧದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಬಗ್ಗೆ ಕೂಡಲೇ ತನಿಖೆ ನಡೆಸಲು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚಿಸಲಾಗಿದೆ. ತಮಿಳುನಾಡಿನಿಂದ ಆರೋಪಿಗಳನ್ನು ವಶಕ್ಕೆ ಪಡೆದು, ಕಠಿಣ ಕಾನೂನು ಕ್ರಮ ಕೈಗೊಳ್ಳಲು ಈಗಾಗಲೇ ಆದೇಶ ನೀಡಲಾಗಿದೆ’ ಎಂದು ಹೇಳಿದರು.</p>.<p>‘ನ್ಯಾಯಾಲಯದ ತೀರ್ಪನ್ನು ಎಲ್ಲರೂ ಒಪ್ಪಬೇಕಾಗುತ್ತದೆ. ಅರ್ಜಿದಾರರಿಗೆ ತೀರ್ಪು ಸಮಂಜಸ ಎನಿಸದಿದ್ದರೆ ಮೇಲ್ಮನವಿ ಸಲ್ಲಿಸಲು ಎಲ್ಲ ಅವಕಾಶಗಳಿವೆ. ಆದರೂ ವಿಚ್ಛಿದ್ರಕಾರಿ ಶಕ್ತಿಗಳು ಇಂಥ ಹೇಳಿಕೆಗಳನ್ನು ನೀಡುವ ಮೂಲಕ ಜನರನ್ನು ಪ್ರಚೋದಿಸಿ ವ್ಯವಸ್ಥೆಯ ವಿರುದ್ಧ ಎತ್ತಿಕಟ್ಟುತ್ತಿವೆ’ ಎಂದರು.</p>.<p><strong>ಜಾತ್ಯತೀತರು ಮೌನ ಮುರಿಯಬೇಕು:</strong> ‘ಈ ಪ್ರಕರಣದ ಬಗ್ಗೆ ಡೋಂಗಿ ಜಾತ್ಯತೀತರು ಮೌನ ವಹಿಸಿದ್ದಾರೆ. ಒಂದು ವರ್ಗದ ಜನರನ್ನು ಈ ರೀತಿ ಓಲೈಸುವುದು ಜಾತ್ಯತೀತತೆ ಅಲ್ಲ, ಕೋಮುವಾದ ಎಂದೆನಿಸುತ್ತದೆ. ಈ ಪ್ರಕರಣದ ಬಗ್ಗೆ ಎಲ್ಲರೂ ಒಗ್ಗಟ್ಟಾಗಿ ಕ್ರಮ ಕೈಗೊಂಡು ಈ ದೇಶದ ನ್ಯಾಯಾಂಗ ವ್ಯವಸ್ಥೆಯನ್ನು ಕಾಯ್ದುಕೊಳ್ಳಬೇಕಿದೆ. ಈ ರೀತಿಯ ಪ್ರಕರಣಗಳು ದೇಶದ ಪ್ರಜಾಪ್ರಭುತ್ವಕ್ಕೆ ಆತಂಕಕಾರಿ’ ಎಂದೂ ಹೇಳಿದರು.</p>.<p><strong>ಸರ್ಕಾರವೇ ವೆಚ್ಚ ಭರಿಸಲಿದೆ: </strong>‘ಪಾವಗಡದಲ್ಲಿ ಶುಕ್ರವಾರ ಸಂಭವಿಸಿದ ಬಸ್ ದುರಂತದಲ್ಲಿ ಗಾಯಗೊಂಡವರಿಗೆ ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇದ್ದರೆ ಬೆಂಗಳೂರಿಗೆ ಸ್ಥಳಾಂತರಿಸಲು ತಿಳಿಸಲಾಗಿದೆ. ಗಾಯಾಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಲಿದೆ’ ಎಂದು ಮುಖ್ಯಮಂತ್ರಿ ತಿಳಿಸಿದರು.</p>.<p><strong>ಇವನ್ನೂ ಓದಿ...</strong></p>.<p><a href="https://www.prajavani.net/india-news/student-moves-sc-against-karnataka-hc-verdict-upholding-hijab-ban-in-colleges-919603.html" itemprop="url">ಹಿಜಾಬ್ ವಿವಾದ: ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ </a></p>.<p><a href="https://www.prajavani.net/columns/anusandhaan-raveendra-bhatta/hindu-muslim-hijab-saffron-shawl-row-bjp-ks-eshwarappa-politicians-statements-analysis-914352.html" itemprop="url">ಅನುಸಂಧಾನ: ಮಂತ್ರಿಯೆಂಬುವ ಮೊರೆವ ಹುಲಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಹಿಜಾಬ್ ವಿಚಾರವಾಗಿ ತೀರ್ಪು ನೀಡಿರುವ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಮತ್ತು ಇಬ್ಬರುನ್ಯಾಯಮೂರ್ತಿಗಳಿಗೆ ತಮಿಳುನಾಡಿನಲ್ಲಿ ಕೊಲೆ ಬೆದರಿಕೆ ಹಾಕಿದ ವಿಷಯವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ನ್ಯಾಯಮೂರ್ತಿಗಳಿಗೆ ಈಗಿರುವ ಭದ್ರತೆಯ ಜೊತೆಗೆ ‘ವೈ’ ಕೆಟಗರಿ ಭದ್ರತೆ ನೀಡಲು ತೀರ್ಮಾನಿಸಲಾಗಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.</p>.<p>ಸುದ್ದಿಗಾರರ ಜೊತೆ ಭಾನುವಾರ ಮಾತನಾಡಿದ ಅವರು, ‘ಈ ರೀತಿಯ ಬೆದರಿಕೆಯ ಮೂಲಕ ಕೆಲವು ದೇಶದ್ರೋಹಿ ಶಕ್ತಿಗಳು ಈ ದೇಶದ ವ್ಯವ್ಯಸ್ಥೆಗೆ ಸವಾಲು ಹಾಕುವ ಪ್ರಯತ್ನ ಮಾಡಿವೆ. ಇಂತಹ ದೇಶದ್ರೋಹಿ ಶಕ್ತಿಗಳನ್ನು ಸಹಿಸುವುದಿಲ್ಲ’ ಎಂದರು.</p>.<p>‘ಕೊಲೆ ಬೆದರಿಕೆ ಬಗ್ಗೆ ತಮಿಳುನಾಡಿನಲ್ಲಿ ಪ್ರಕರಣ ದಾಖಲಾಗಿದೆ. ವಕೀಲರೊಬ್ಬರು ವಿಧಾನಸೌಧದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಬಗ್ಗೆ ಕೂಡಲೇ ತನಿಖೆ ನಡೆಸಲು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚಿಸಲಾಗಿದೆ. ತಮಿಳುನಾಡಿನಿಂದ ಆರೋಪಿಗಳನ್ನು ವಶಕ್ಕೆ ಪಡೆದು, ಕಠಿಣ ಕಾನೂನು ಕ್ರಮ ಕೈಗೊಳ್ಳಲು ಈಗಾಗಲೇ ಆದೇಶ ನೀಡಲಾಗಿದೆ’ ಎಂದು ಹೇಳಿದರು.</p>.<p>‘ನ್ಯಾಯಾಲಯದ ತೀರ್ಪನ್ನು ಎಲ್ಲರೂ ಒಪ್ಪಬೇಕಾಗುತ್ತದೆ. ಅರ್ಜಿದಾರರಿಗೆ ತೀರ್ಪು ಸಮಂಜಸ ಎನಿಸದಿದ್ದರೆ ಮೇಲ್ಮನವಿ ಸಲ್ಲಿಸಲು ಎಲ್ಲ ಅವಕಾಶಗಳಿವೆ. ಆದರೂ ವಿಚ್ಛಿದ್ರಕಾರಿ ಶಕ್ತಿಗಳು ಇಂಥ ಹೇಳಿಕೆಗಳನ್ನು ನೀಡುವ ಮೂಲಕ ಜನರನ್ನು ಪ್ರಚೋದಿಸಿ ವ್ಯವಸ್ಥೆಯ ವಿರುದ್ಧ ಎತ್ತಿಕಟ್ಟುತ್ತಿವೆ’ ಎಂದರು.</p>.<p><strong>ಜಾತ್ಯತೀತರು ಮೌನ ಮುರಿಯಬೇಕು:</strong> ‘ಈ ಪ್ರಕರಣದ ಬಗ್ಗೆ ಡೋಂಗಿ ಜಾತ್ಯತೀತರು ಮೌನ ವಹಿಸಿದ್ದಾರೆ. ಒಂದು ವರ್ಗದ ಜನರನ್ನು ಈ ರೀತಿ ಓಲೈಸುವುದು ಜಾತ್ಯತೀತತೆ ಅಲ್ಲ, ಕೋಮುವಾದ ಎಂದೆನಿಸುತ್ತದೆ. ಈ ಪ್ರಕರಣದ ಬಗ್ಗೆ ಎಲ್ಲರೂ ಒಗ್ಗಟ್ಟಾಗಿ ಕ್ರಮ ಕೈಗೊಂಡು ಈ ದೇಶದ ನ್ಯಾಯಾಂಗ ವ್ಯವಸ್ಥೆಯನ್ನು ಕಾಯ್ದುಕೊಳ್ಳಬೇಕಿದೆ. ಈ ರೀತಿಯ ಪ್ರಕರಣಗಳು ದೇಶದ ಪ್ರಜಾಪ್ರಭುತ್ವಕ್ಕೆ ಆತಂಕಕಾರಿ’ ಎಂದೂ ಹೇಳಿದರು.</p>.<p><strong>ಸರ್ಕಾರವೇ ವೆಚ್ಚ ಭರಿಸಲಿದೆ: </strong>‘ಪಾವಗಡದಲ್ಲಿ ಶುಕ್ರವಾರ ಸಂಭವಿಸಿದ ಬಸ್ ದುರಂತದಲ್ಲಿ ಗಾಯಗೊಂಡವರಿಗೆ ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇದ್ದರೆ ಬೆಂಗಳೂರಿಗೆ ಸ್ಥಳಾಂತರಿಸಲು ತಿಳಿಸಲಾಗಿದೆ. ಗಾಯಾಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಲಿದೆ’ ಎಂದು ಮುಖ್ಯಮಂತ್ರಿ ತಿಳಿಸಿದರು.</p>.<p><strong>ಇವನ್ನೂ ಓದಿ...</strong></p>.<p><a href="https://www.prajavani.net/india-news/student-moves-sc-against-karnataka-hc-verdict-upholding-hijab-ban-in-colleges-919603.html" itemprop="url">ಹಿಜಾಬ್ ವಿವಾದ: ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ </a></p>.<p><a href="https://www.prajavani.net/columns/anusandhaan-raveendra-bhatta/hindu-muslim-hijab-saffron-shawl-row-bjp-ks-eshwarappa-politicians-statements-analysis-914352.html" itemprop="url">ಅನುಸಂಧಾನ: ಮಂತ್ರಿಯೆಂಬುವ ಮೊರೆವ ಹುಲಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>