<p>ಯಾದಗಿರಿ: ‘ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜಕೀಯದಲ್ಲಿ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ಮೇ 9ರಂದು ನಡೆಯುವ ‘ಬಿಎಸ್ವೈ ಅಭಿಮಾನೋತ್ಸವ’ ಕಾರ್ಯಕ್ರಮಕ್ಕೆ ಯಾದಗಿರಿ ಮತಕ್ಷೇತ್ರದಿಂದ ಸಾವಿರಾರು ಅಭಿಮಾನಿಗಳು ತೆರಳುವರು’ ಎಂದು ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಡಾ.ಶರಣಭೂಪಾಲ ರೆಡ್ಡಿ ತಿಳಿಸಿದರು.</p>.<p>‘ಜನರ ದಶಕಗಳ ಬೇಡಿಕೆಯನ್ನು ಅರಿತ ಯಡಿಯೂರಪ್ಪ ಅವರು 2009ರಲ್ಲಿ ಕಲಬುರಗಿ ಜಿಲ್ಲೆಯಿಂದ ಯಾದಗಿರಿಯನ್ನು ವಿಭಜಿಸಿ ರಾಜ್ಯದ 30ನೇ ಜಿಲ್ಲೆಯನ್ನಾಗಿ ಮಾಡಿದರು’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>‘ಸೈಕಲ್ ಏರಿ ಹಳ್ಳಿ-ಹಳ್ಳಿಗಳನ್ನು ಸುತ್ತಿ ಪಕ್ಷವನ್ನು ಕಟ್ಟಿ ಬೆಳೆಸಿದ ಯಡಿಯೂರಪ್ಪ ಅವರು ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಕಲ್ಪಿಸಿದವರು. ಪ್ರತ್ಯೇಕ ಕೃಷಿ ಬಜೆಟ್ ಮಂಡಿಸಿ, ರೈತಬಂಧುವಾದರು. ರೈತರಿಗೆ ಆರ್ಥಿಕ ಶಕ್ತಿ ತುಂಬಲು ಅವರ ಸಾಲ ಮನ್ನಾ ಮಾಡಿದರು’ ಎಂದರು.</p>.<p>‘ಯಾದಗಿರಿ ಜಿಲ್ಲಾ ಕೇಂದ್ರದ ಸಂಕೀರ್ಣಗಳು ಮತ್ತು ಶೈಕ್ಷಣಿಕ ಸಂಸ್ಥೆಗಳ ಸ್ಥಾಪನೆಗೆ ಹೆಚ್ಚಿನ ಒತ್ತು ನೀಡಿದರು. ಯಾದಗಿರಿ ಅಪಾರ ಕೊಡುಗೆ ನೀಡಿದ್ದು, ನಗರದ ಯಾವುದಾದರು ಒಂದು ರಸ್ತೆ, ವೃತ್ತಕ್ಕೆ ಯಡಿಯೂರಪ್ಪ ಅವರ ಹೆಸರು ಇರಿಸಬೇಕು’ ಎಂದು ಹೇಳಿದರು.</p>.<p>ಮುಖಂಡರಾದ ಭೀಮಣ್ಣಗೌಡ ಕ್ಯಾತನಾಳ, ಶರಣಭೂಪಾಲರೆಡ್ಡಿ ಗುರುಸುಣಗಿ, ಹಣಮಂತ ಇಟಗಿ, ವೀಣಾ ಮೋದಿ, ಸುನಿತಾ ಚವ್ಹಾಣ್, ಭೀಮರೆಡ್ಡಿಗೌಡ ಚಟ್ನಳ್ಳಿ, ಮಲ್ಲನಗೌಡ ಬಿಳ್ಹಾರ, ಶಿವರಾಜ ಪಾಟೀಲ, ಉದಯ ರಾಯಕೋಟಿ, ವಿರೂಪಾಕ್ಷಯ್ಯ ಸ್ವಾಮಿ ಹೆಡಗಿಮದ್ರಾ, ಚಂದ್ರಶೇಖರ್ ಕಡೆಸೂರ್, ಮಲ್ಲು ಕೋಲಿವಾಡ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-30-2048120944</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಾದಗಿರಿ: ‘ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜಕೀಯದಲ್ಲಿ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ಮೇ 9ರಂದು ನಡೆಯುವ ‘ಬಿಎಸ್ವೈ ಅಭಿಮಾನೋತ್ಸವ’ ಕಾರ್ಯಕ್ರಮಕ್ಕೆ ಯಾದಗಿರಿ ಮತಕ್ಷೇತ್ರದಿಂದ ಸಾವಿರಾರು ಅಭಿಮಾನಿಗಳು ತೆರಳುವರು’ ಎಂದು ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಡಾ.ಶರಣಭೂಪಾಲ ರೆಡ್ಡಿ ತಿಳಿಸಿದರು.</p>.<p>‘ಜನರ ದಶಕಗಳ ಬೇಡಿಕೆಯನ್ನು ಅರಿತ ಯಡಿಯೂರಪ್ಪ ಅವರು 2009ರಲ್ಲಿ ಕಲಬುರಗಿ ಜಿಲ್ಲೆಯಿಂದ ಯಾದಗಿರಿಯನ್ನು ವಿಭಜಿಸಿ ರಾಜ್ಯದ 30ನೇ ಜಿಲ್ಲೆಯನ್ನಾಗಿ ಮಾಡಿದರು’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>‘ಸೈಕಲ್ ಏರಿ ಹಳ್ಳಿ-ಹಳ್ಳಿಗಳನ್ನು ಸುತ್ತಿ ಪಕ್ಷವನ್ನು ಕಟ್ಟಿ ಬೆಳೆಸಿದ ಯಡಿಯೂರಪ್ಪ ಅವರು ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಕಲ್ಪಿಸಿದವರು. ಪ್ರತ್ಯೇಕ ಕೃಷಿ ಬಜೆಟ್ ಮಂಡಿಸಿ, ರೈತಬಂಧುವಾದರು. ರೈತರಿಗೆ ಆರ್ಥಿಕ ಶಕ್ತಿ ತುಂಬಲು ಅವರ ಸಾಲ ಮನ್ನಾ ಮಾಡಿದರು’ ಎಂದರು.</p>.<p>‘ಯಾದಗಿರಿ ಜಿಲ್ಲಾ ಕೇಂದ್ರದ ಸಂಕೀರ್ಣಗಳು ಮತ್ತು ಶೈಕ್ಷಣಿಕ ಸಂಸ್ಥೆಗಳ ಸ್ಥಾಪನೆಗೆ ಹೆಚ್ಚಿನ ಒತ್ತು ನೀಡಿದರು. ಯಾದಗಿರಿ ಅಪಾರ ಕೊಡುಗೆ ನೀಡಿದ್ದು, ನಗರದ ಯಾವುದಾದರು ಒಂದು ರಸ್ತೆ, ವೃತ್ತಕ್ಕೆ ಯಡಿಯೂರಪ್ಪ ಅವರ ಹೆಸರು ಇರಿಸಬೇಕು’ ಎಂದು ಹೇಳಿದರು.</p>.<p>ಮುಖಂಡರಾದ ಭೀಮಣ್ಣಗೌಡ ಕ್ಯಾತನಾಳ, ಶರಣಭೂಪಾಲರೆಡ್ಡಿ ಗುರುಸುಣಗಿ, ಹಣಮಂತ ಇಟಗಿ, ವೀಣಾ ಮೋದಿ, ಸುನಿತಾ ಚವ್ಹಾಣ್, ಭೀಮರೆಡ್ಡಿಗೌಡ ಚಟ್ನಳ್ಳಿ, ಮಲ್ಲನಗೌಡ ಬಿಳ್ಹಾರ, ಶಿವರಾಜ ಪಾಟೀಲ, ಉದಯ ರಾಯಕೋಟಿ, ವಿರೂಪಾಕ್ಷಯ್ಯ ಸ್ವಾಮಿ ಹೆಡಗಿಮದ್ರಾ, ಚಂದ್ರಶೇಖರ್ ಕಡೆಸೂರ್, ಮಲ್ಲು ಕೋಲಿವಾಡ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-30-2048120944</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>