<p><strong>ಯಾದಗಿರಿ: </strong>ಕೋವಿಡ್ ಸೋಂಕಿನಿಂದ ಮೃತಪಟ್ಟತಾಲ್ಲೂಕಿನ ಹೊನಗೇರಾ ಗ್ರಾಮದ 45 ವರ್ಷದ ವ್ಯಕ್ತಿಯ ಶವವನ್ನು ಆಂಬುಲೆನ್ಸ್ನಿಂದಇಳಿಸಿದ ಆರೋಗ್ಯ ಇಲಾಖೆಯ ಸಿಬ್ಬಂದಿ, ಕಟ್ಟಿಗೆ ಕಟ್ಟಿ ಎಳೆದೊಯ್ದು ಗುಂಡಿಗೆ ಎಸೆದಿದ್ದಾರೆ.</p>.<p>ಮೊಬೈಲ್ನಲ್ಲಿ ಸೆರೆಯಾಗಿರುವ ಈ ದೃಶ್ಯ ಸಾಮಾಜಿಕ ತಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.</p>.<p>ಮೃತ ವ್ಯಕ್ತಿ ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ಭಾನುವಾರ ಮಗಳ ಮದುವೆ ಮಾಡಿದ್ದರು. ಮರುದಿನ ಸೋಮವಾರ ಉಸಿರಾಟದ ತೊಂದರೆಯಾಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದರು. ಈ ವೇಳೆ ಗಂಟಲು ದ್ರವ ತೆಗೆದುಕೊಂಡು ಪರೀಕ್ಷೆ ಮಾಡಿದಾಗ ಕೋವಿಡ್–19 ಸೋಂಕು ಇರುವುದು ಧೃಡಪಟ್ಟಿದೆ.</p>.<p><strong>ವಿಡಿಯೊದಲ್ಲಿ ಏನಿದೆ?:</strong></p>.<p>ಶವವನ್ನು ಆಂಬುಲೆನ್ಸ್ನಿಂದಕೆಳಗಿಳಿಸಿದ ನಂತರ ಒಂದು ಕಟ್ಟೆಗೆಗೆ ಕಟ್ಟಿ ಜಮೀನಲ್ಲಿ ತೋಡಿದ್ದ ಗುಂಡಿಯತ್ತ ಎಳೆದೊಯ್ದು, ಗುಂಡಿಯಲ್ಲಿ ಹಾಕುತ್ತಾರೆ. ನಂತರ ಜೆಸಿಬಿ ಮೂಲಕ ಮಣ್ಣು ಮುಚ್ಚುವ ದೃಶ್ಯವಿಡಿಯೊದಲ್ಲಿದೆ.</p>.<p>‘ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಸಲು ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದರಿಂದ ಕೆಲಕಾಲ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಶವ ಇರಿಸಲಾಗಿತ್ತು. ಮೃತನ ಸಹೋದರ ತಮ್ಮ ಜಮೀನಿನಲ್ಲಿ ಅಂತ್ಯಕ್ರಿಯೆ ಮಾಡುತ್ತೇನೆ ಎಂದು ಹೇಳಿದ ನಂತರ ಆರೋಗ್ಯ ಇಲಾಖೆ ಸಿಬ್ಬಂದಿ ಆಂಬುಲೆನ್ಸ್ನಲ್ಲಿ ಅಲ್ಲಿಗೆ ಶವ ಸಾಗಿಸಿದರು’ ಎಂದು ಮೂಲಗಳು ತಿಳಿಸಿವೆ.</p>.<p>ಆರೋಗ್ಯ ಇಲಾಖೆಯಿಂದ ಮಾಹಿತಿ ತರಿಸಿಕೊಳ್ಳುವುದಾಗಿಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ: </strong>ಕೋವಿಡ್ ಸೋಂಕಿನಿಂದ ಮೃತಪಟ್ಟತಾಲ್ಲೂಕಿನ ಹೊನಗೇರಾ ಗ್ರಾಮದ 45 ವರ್ಷದ ವ್ಯಕ್ತಿಯ ಶವವನ್ನು ಆಂಬುಲೆನ್ಸ್ನಿಂದಇಳಿಸಿದ ಆರೋಗ್ಯ ಇಲಾಖೆಯ ಸಿಬ್ಬಂದಿ, ಕಟ್ಟಿಗೆ ಕಟ್ಟಿ ಎಳೆದೊಯ್ದು ಗುಂಡಿಗೆ ಎಸೆದಿದ್ದಾರೆ.</p>.<p>ಮೊಬೈಲ್ನಲ್ಲಿ ಸೆರೆಯಾಗಿರುವ ಈ ದೃಶ್ಯ ಸಾಮಾಜಿಕ ತಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.</p>.<p>ಮೃತ ವ್ಯಕ್ತಿ ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ಭಾನುವಾರ ಮಗಳ ಮದುವೆ ಮಾಡಿದ್ದರು. ಮರುದಿನ ಸೋಮವಾರ ಉಸಿರಾಟದ ತೊಂದರೆಯಾಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದರು. ಈ ವೇಳೆ ಗಂಟಲು ದ್ರವ ತೆಗೆದುಕೊಂಡು ಪರೀಕ್ಷೆ ಮಾಡಿದಾಗ ಕೋವಿಡ್–19 ಸೋಂಕು ಇರುವುದು ಧೃಡಪಟ್ಟಿದೆ.</p>.<p><strong>ವಿಡಿಯೊದಲ್ಲಿ ಏನಿದೆ?:</strong></p>.<p>ಶವವನ್ನು ಆಂಬುಲೆನ್ಸ್ನಿಂದಕೆಳಗಿಳಿಸಿದ ನಂತರ ಒಂದು ಕಟ್ಟೆಗೆಗೆ ಕಟ್ಟಿ ಜಮೀನಲ್ಲಿ ತೋಡಿದ್ದ ಗುಂಡಿಯತ್ತ ಎಳೆದೊಯ್ದು, ಗುಂಡಿಯಲ್ಲಿ ಹಾಕುತ್ತಾರೆ. ನಂತರ ಜೆಸಿಬಿ ಮೂಲಕ ಮಣ್ಣು ಮುಚ್ಚುವ ದೃಶ್ಯವಿಡಿಯೊದಲ್ಲಿದೆ.</p>.<p>‘ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಸಲು ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದರಿಂದ ಕೆಲಕಾಲ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಶವ ಇರಿಸಲಾಗಿತ್ತು. ಮೃತನ ಸಹೋದರ ತಮ್ಮ ಜಮೀನಿನಲ್ಲಿ ಅಂತ್ಯಕ್ರಿಯೆ ಮಾಡುತ್ತೇನೆ ಎಂದು ಹೇಳಿದ ನಂತರ ಆರೋಗ್ಯ ಇಲಾಖೆ ಸಿಬ್ಬಂದಿ ಆಂಬುಲೆನ್ಸ್ನಲ್ಲಿ ಅಲ್ಲಿಗೆ ಶವ ಸಾಗಿಸಿದರು’ ಎಂದು ಮೂಲಗಳು ತಿಳಿಸಿವೆ.</p>.<p>ಆರೋಗ್ಯ ಇಲಾಖೆಯಿಂದ ಮಾಹಿತಿ ತರಿಸಿಕೊಳ್ಳುವುದಾಗಿಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>