ಉತ್ತರ ಕರ್ನಾಟಕದ ಅಭಿವೃದ್ಧಿ, ನೀರಾವರಿ ಯೋಜನೆಗಳ ಕುರಿತು ಸದನದಲ್ಲಿ ವಿಸ್ತೃತ ಚರ್ಚೆಯಾಗಬೇಕು. ಸರ್ಕಾರ ರೈತರ ಸಾಲ ಮನ್ನಾ ಮಾಡದೇ ಕಾಲಹರಣ ಮಾಡುತ್ತಿದೆ. ರೈತರ ಆತ್ಮಹತ್ಯೆ ಪ್ರಕರಣ ಮುಂದುವರಿದಿವೆ. ರಾಷ್ಟ್ರೀಕೃತ ಬ್ಯಾಂಕ್ಗಳು ಋಣಮುಕ್ತ ಪತ್ರ ನೀಡಲು ಹಿಂದೇಟು ಹಾಕುತ್ತಿವೆ. ಇಂತಹ ವಿಚಾರಗಳ ಬಗ್ಗೆ ಮುಖ್ಯಮಂತ್ರಿ ಗಮನ ಹರಿಸಬೇಕು ಎಂದು ಆಗ್ರಹಿಸಿದರು.