<p><strong>ಹೆಸರು: </strong>ಡಾ. ಯತೀಂದ್ರ ಸಿದ್ದರಾಮಯ್ಯ</p><p><strong>ಕ್ಷೇತ್ರ: </strong>ವಿಧಾನ ಪರಿಷತ್</p><p><strong>ಜಾತಿ ಮತ್ತು ಒಳಜಾತಿ: </strong>ಕುರುಬ</p><p><strong>ವಿದ್ಯಾರ್ಹತೆ: </strong>ಎಂಬಿಬಿಎಸ್, ಎಂ.ಡಿ.</p><p><strong>ಎಷ್ಟು ಸಾರಿ ಆಯ್ಕೆ: 2</strong></p><p><strong> ಘೋಷಿತ ಆಸ್ತಿ : ₹31.88 ಕೋಟಿ</strong></p> <p>ತಂದೆ ಸಿದ್ದರಾಮಯ್ಯ ಅವರು ರಾಜಕೀಯದಲ್ಲಿ ಸಕ್ರಿಯವಾಗಿ, ಅಧಿಕಾರವನ್ನು ಅನುಭವಿಸಿ ಉತ್ತುಂಗದಲ್ಲಿದ್ದರೂ ವೈದ್ಯನಾಗಿ ತಮ್ಮ ಪಾಡಿಗೆ ತಮ್ಮ ಕೆಲಸದಲ್ಲಿ ತೊಡಗಿದ್ದವರು ಡಾ.ಯತೀಂದ್ರ ಸಿದ್ದರಾಮಯ್ಯ. ಆದರೆ, ಅಣ್ಣ ರಾಕೇಶ್ ಸಿದ್ದರಾಮಯ್ಯ ಅವರ ಅಕಾಲಿಕ ನಿಧನದ ನಂತರ ರಾಜಕೀಯ ಜೀವನಕ್ಕೆ ಪ್ರವೇಶಿಸಿದರು. ಅಲ್ಲಿಯವರೆಗೂ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದೇ ಅಪರೂಪ ಆಗಿತ್ತು.</p>.<p>2016ರ ಜುಲೈ 30ರಂದು ರಾಕೇಶ್ ಬೆಲ್ಜಿಯಂ ಪ್ರವಾಸದಲ್ಲಿದ್ದ ವೇಳೆ ಅನಾರೋಗ್ಯಕ್ಕೆ ಒಳಗಾಗಿ ಮೃತಪಟ್ಟರು. ಅದಾದ ನಂತರ, ಅಪ್ಪನಿಗೆ ನೆರವಾಗಲೆಂದು ರಾಜಕೀಯಕ್ಕೆ ಧುಮುಕಿದ ಯತೀಂದ್ರ ಅವರು ಬಳಿಕ ರಾಜಕಾರಣದಲ್ಲಿ ಸಕ್ರಿಯವಾಗಿದ್ದಾರೆ. ಮೊದಲ ಪ್ರಯತ್ನದಲ್ಲೇ ವಿಧಾನಸಭೆ ಪ್ರವೇಶಿಸಿದ ಹೆಗ್ಗಳಿಕೆ ಅವರದು.</p>.<p>ಮೈಸೂರಿನ ವರುಣ ವಿಧಾನಸಭಾ ಕ್ಷೇತ್ರದಿಂದ ಒಮ್ಮೆ ಶಾಸಕರಾಗಿದ್ದ ಅವರು, ಹಾಲಿ ವಿಧಾನಪರಿಷತ್ ಸದಸ್ಯರಾಗಿದ್ದಾರೆ. ತಂದೆ ನಂಬಿರುವ ಸಮಾಜವಾದಿ, ಸಮಾನತೆಯ ಸಿದ್ಧಾಂತದ ಹಾದಿಯಲ್ಲೇ ಸಾಗುತ್ತಿದ್ದಾರೆ.</p>.<p>2018ರ ಚುನಾವಣೆಯಲ್ಲಿ ಕ್ಷೇತ್ರವನ್ನು ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ ಬಿಟ್ಟು ಕೊಟ್ಟು ಚಾಮುಂಡೇಶ್ವರಿ ಹಾಗೂ ಬಾಗಲಕೋಟೆ ಜಿಲ್ಲೆಯ ಬಾದಾಮಿಯಿಂದ ಕಣಕ್ಕಿಳಿದಿದ್ದರು. ಚಾಮುಂಡೇಶ್ವರಿಯಲ್ಲಿ ಗೆಲುವು ಸಿಗಲಿಲ್ಲ. ಬಾದಾಮಿ ಜನರು ಸಿದ್ದರಾಮಯ್ಯ ಅವರ ಕೈಹಿಡಿದರು. 2018ರಲ್ಲಿ ಡಾ.ಯತೀಂದ್ರ ಅವರು ಮೊದಲ ಪ್ರಯತ್ನದಲ್ಲೇ ಬಿಜೆಪಿಯ ತೋಟದಪ್ಪ ಬಸವರಾಜು ಅವರನ್ನು ಸೋಲಿಸಿದ್ದರು. 2023ರ ಚುನಾವಣೆಯಲ್ಲಿ ಯತೀಂದ್ರ ಅವರು ತಂದೆಗೆ ಕ್ಷೇತ್ರ ಬಿಟ್ಟುಕೊಟ್ಟು, ಅವರ ಪರವಾಗಿ ಪ್ರಚಾರ ಮಾಡಿದರು. ಸಿದ್ದರಾಮಯ್ಯ ಅವರು ಗೆಲುವು ಸಾಧಿಸಿ 2ನೇ ಬಾರಿಗೆ ಮುಖ್ಯಮಂತ್ರಿಯೂ ಆದರು.</p>.<p>ಮಗ ಕ್ಷೇತ್ರದಲ್ಲಿ ಸಂಚರಿಸಲು ಅನುಕೂಲ ಆಗಲೆಂದು, ಸಿದ್ದರಾಮಯ್ಯ ಅವರು ಯತೀಂದ್ರ ಅವರನ್ನು ವರುಣ ವಿಧಾನಸಭಾ ಕ್ಷೇತ್ರದ ಆಶ್ರಯ ಸಮಿತಿ ಅಧ್ಯಕ್ಷ ಹಾಗೂ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಸದಸ್ಯರನ್ನಾಗಿಸಿ, ಅವರಿಗೆ ಅಧಿಕಾರ ಸಿಗುವಂತೆ ನೋಡಿಕೊಂಡಿದ್ದರು. ಬಳಿಕ, ಯತೀಂದ್ರ ಅವರನ್ನು ವಿಧಾನಸಭೆಯಿಂದ ನಡೆದ ಚುನಾವಣೆಯಲ್ಲಿ ಮೇಲ್ಮನೆಗೆ (ವಿಧಾನಪರಿಷತ್) ಕಳುಹಿಸುವಲ್ಲಿ ಯಶಸ್ವಿಯೂ ಆದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೆಸರು: </strong>ಡಾ. ಯತೀಂದ್ರ ಸಿದ್ದರಾಮಯ್ಯ</p><p><strong>ಕ್ಷೇತ್ರ: </strong>ವಿಧಾನ ಪರಿಷತ್</p><p><strong>ಜಾತಿ ಮತ್ತು ಒಳಜಾತಿ: </strong>ಕುರುಬ</p><p><strong>ವಿದ್ಯಾರ್ಹತೆ: </strong>ಎಂಬಿಬಿಎಸ್, ಎಂ.ಡಿ.</p><p><strong>ಎಷ್ಟು ಸಾರಿ ಆಯ್ಕೆ: 2</strong></p><p><strong> ಘೋಷಿತ ಆಸ್ತಿ : ₹31.88 ಕೋಟಿ</strong></p> <p>ತಂದೆ ಸಿದ್ದರಾಮಯ್ಯ ಅವರು ರಾಜಕೀಯದಲ್ಲಿ ಸಕ್ರಿಯವಾಗಿ, ಅಧಿಕಾರವನ್ನು ಅನುಭವಿಸಿ ಉತ್ತುಂಗದಲ್ಲಿದ್ದರೂ ವೈದ್ಯನಾಗಿ ತಮ್ಮ ಪಾಡಿಗೆ ತಮ್ಮ ಕೆಲಸದಲ್ಲಿ ತೊಡಗಿದ್ದವರು ಡಾ.ಯತೀಂದ್ರ ಸಿದ್ದರಾಮಯ್ಯ. ಆದರೆ, ಅಣ್ಣ ರಾಕೇಶ್ ಸಿದ್ದರಾಮಯ್ಯ ಅವರ ಅಕಾಲಿಕ ನಿಧನದ ನಂತರ ರಾಜಕೀಯ ಜೀವನಕ್ಕೆ ಪ್ರವೇಶಿಸಿದರು. ಅಲ್ಲಿಯವರೆಗೂ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದೇ ಅಪರೂಪ ಆಗಿತ್ತು.</p>.<p>2016ರ ಜುಲೈ 30ರಂದು ರಾಕೇಶ್ ಬೆಲ್ಜಿಯಂ ಪ್ರವಾಸದಲ್ಲಿದ್ದ ವೇಳೆ ಅನಾರೋಗ್ಯಕ್ಕೆ ಒಳಗಾಗಿ ಮೃತಪಟ್ಟರು. ಅದಾದ ನಂತರ, ಅಪ್ಪನಿಗೆ ನೆರವಾಗಲೆಂದು ರಾಜಕೀಯಕ್ಕೆ ಧುಮುಕಿದ ಯತೀಂದ್ರ ಅವರು ಬಳಿಕ ರಾಜಕಾರಣದಲ್ಲಿ ಸಕ್ರಿಯವಾಗಿದ್ದಾರೆ. ಮೊದಲ ಪ್ರಯತ್ನದಲ್ಲೇ ವಿಧಾನಸಭೆ ಪ್ರವೇಶಿಸಿದ ಹೆಗ್ಗಳಿಕೆ ಅವರದು.</p>.<p>ಮೈಸೂರಿನ ವರುಣ ವಿಧಾನಸಭಾ ಕ್ಷೇತ್ರದಿಂದ ಒಮ್ಮೆ ಶಾಸಕರಾಗಿದ್ದ ಅವರು, ಹಾಲಿ ವಿಧಾನಪರಿಷತ್ ಸದಸ್ಯರಾಗಿದ್ದಾರೆ. ತಂದೆ ನಂಬಿರುವ ಸಮಾಜವಾದಿ, ಸಮಾನತೆಯ ಸಿದ್ಧಾಂತದ ಹಾದಿಯಲ್ಲೇ ಸಾಗುತ್ತಿದ್ದಾರೆ.</p>.<p>2018ರ ಚುನಾವಣೆಯಲ್ಲಿ ಕ್ಷೇತ್ರವನ್ನು ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ ಬಿಟ್ಟು ಕೊಟ್ಟು ಚಾಮುಂಡೇಶ್ವರಿ ಹಾಗೂ ಬಾಗಲಕೋಟೆ ಜಿಲ್ಲೆಯ ಬಾದಾಮಿಯಿಂದ ಕಣಕ್ಕಿಳಿದಿದ್ದರು. ಚಾಮುಂಡೇಶ್ವರಿಯಲ್ಲಿ ಗೆಲುವು ಸಿಗಲಿಲ್ಲ. ಬಾದಾಮಿ ಜನರು ಸಿದ್ದರಾಮಯ್ಯ ಅವರ ಕೈಹಿಡಿದರು. 2018ರಲ್ಲಿ ಡಾ.ಯತೀಂದ್ರ ಅವರು ಮೊದಲ ಪ್ರಯತ್ನದಲ್ಲೇ ಬಿಜೆಪಿಯ ತೋಟದಪ್ಪ ಬಸವರಾಜು ಅವರನ್ನು ಸೋಲಿಸಿದ್ದರು. 2023ರ ಚುನಾವಣೆಯಲ್ಲಿ ಯತೀಂದ್ರ ಅವರು ತಂದೆಗೆ ಕ್ಷೇತ್ರ ಬಿಟ್ಟುಕೊಟ್ಟು, ಅವರ ಪರವಾಗಿ ಪ್ರಚಾರ ಮಾಡಿದರು. ಸಿದ್ದರಾಮಯ್ಯ ಅವರು ಗೆಲುವು ಸಾಧಿಸಿ 2ನೇ ಬಾರಿಗೆ ಮುಖ್ಯಮಂತ್ರಿಯೂ ಆದರು.</p>.<p>ಮಗ ಕ್ಷೇತ್ರದಲ್ಲಿ ಸಂಚರಿಸಲು ಅನುಕೂಲ ಆಗಲೆಂದು, ಸಿದ್ದರಾಮಯ್ಯ ಅವರು ಯತೀಂದ್ರ ಅವರನ್ನು ವರುಣ ವಿಧಾನಸಭಾ ಕ್ಷೇತ್ರದ ಆಶ್ರಯ ಸಮಿತಿ ಅಧ್ಯಕ್ಷ ಹಾಗೂ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಸದಸ್ಯರನ್ನಾಗಿಸಿ, ಅವರಿಗೆ ಅಧಿಕಾರ ಸಿಗುವಂತೆ ನೋಡಿಕೊಂಡಿದ್ದರು. ಬಳಿಕ, ಯತೀಂದ್ರ ಅವರನ್ನು ವಿಧಾನಸಭೆಯಿಂದ ನಡೆದ ಚುನಾವಣೆಯಲ್ಲಿ ಮೇಲ್ಮನೆಗೆ (ವಿಧಾನಪರಿಷತ್) ಕಳುಹಿಸುವಲ್ಲಿ ಯಶಸ್ವಿಯೂ ಆದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>