<p><strong>ಬೆಂಗಳೂರು</strong>: ತಮ್ಮ ಮಗ ಎಂಎಲ್ಸಿ ಯತೀಂದ್ರ ಜೊತೆ ಸಿದ್ದರಾಮಯ್ಯನವರು ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ್ದರಲ್ಲಿ ತಪ್ಪೇನಿದೆ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.</p><p>ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಕೇಂದ್ರ ನಾಯಕರನ್ನು ಭೇಟಿಯಾಗುವುದು ಸಾಮಾನ್ಯ ಎಂದಿದ್ದಾರೆ.</p><p>ಈ ಕುರಿತಂತೆ ಎಎನ್ಐ ಜೊತೆ ಮಾತನಾಡಿದ ಖರ್ಗೆ, ಯತೀಂದ್ರ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿಯನ್ನು ಭೇಟಿಯಾದ ಬಗ್ಗೆ ಎದ್ದಿರುವ ಊಹಾಪೋಹಗಳನ್ನು ಅಲ್ಲಗಳೆದಿದ್ದಾರೆ. ಸರ್ಕಾರ ರಚನೆ ಮತ್ತು ಸಂಪುಟದ ಬಗ್ಗೆ ಹೈಕಮಾಂಡ್ ಕೈಗೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ ಎಂದಿದ್ದಾರೆ.</p><p>ಯತೀಂದ್ರಗೆ ಸಂಪುಟದಲ್ಲಿ ಅವಕಾಶ ಸಿಗುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ನಾಯಕಿ ಬಿಲ್ಕಿಸ್ ಬಾನು ನೀಡಿದ್ದ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪಕ್ಷದ ಹೈಕಮಾಂಡ್ ಅದನ್ನು ನಿರ್ಧರಿಸಲಿದೆ ಎಂದಿದ್ದಾರೆ.</p><p>ಯತೀಂದ್ರ ಸಂಪುಟ ಸೇರ್ಪಡೆ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ. ಯುವಕರ ಬೇಡಿಕೆ ಕೂಡ ಅದೇ ಆಗಿದೆ. ಹೈಮಾಂಡ್ ನಿರ್ಧರಿಸಿದರೆ ಅವರು ಸಂಪುಟ ಸೇರುತ್ತಾರೆ ಎಂದಿದ್ದಾರೆ.</p><p>ಶುಕ್ರವಾರ ಮಗ ಯತೀಂದ್ರನ ಜೊತೆ ದೆಹಲಿಗೆ ತೆರಳಿದ್ದ ಸಿದ್ದರಾಮಯ್ಯ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೇಟಿ ಮಾಡಿದ್ದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ತಮ್ಮ ಮಗ ಎಂಎಲ್ಸಿ ಯತೀಂದ್ರ ಜೊತೆ ಸಿದ್ದರಾಮಯ್ಯನವರು ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ್ದರಲ್ಲಿ ತಪ್ಪೇನಿದೆ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.</p><p>ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಕೇಂದ್ರ ನಾಯಕರನ್ನು ಭೇಟಿಯಾಗುವುದು ಸಾಮಾನ್ಯ ಎಂದಿದ್ದಾರೆ.</p><p>ಈ ಕುರಿತಂತೆ ಎಎನ್ಐ ಜೊತೆ ಮಾತನಾಡಿದ ಖರ್ಗೆ, ಯತೀಂದ್ರ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿಯನ್ನು ಭೇಟಿಯಾದ ಬಗ್ಗೆ ಎದ್ದಿರುವ ಊಹಾಪೋಹಗಳನ್ನು ಅಲ್ಲಗಳೆದಿದ್ದಾರೆ. ಸರ್ಕಾರ ರಚನೆ ಮತ್ತು ಸಂಪುಟದ ಬಗ್ಗೆ ಹೈಕಮಾಂಡ್ ಕೈಗೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ ಎಂದಿದ್ದಾರೆ.</p><p>ಯತೀಂದ್ರಗೆ ಸಂಪುಟದಲ್ಲಿ ಅವಕಾಶ ಸಿಗುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ನಾಯಕಿ ಬಿಲ್ಕಿಸ್ ಬಾನು ನೀಡಿದ್ದ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪಕ್ಷದ ಹೈಕಮಾಂಡ್ ಅದನ್ನು ನಿರ್ಧರಿಸಲಿದೆ ಎಂದಿದ್ದಾರೆ.</p><p>ಯತೀಂದ್ರ ಸಂಪುಟ ಸೇರ್ಪಡೆ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ. ಯುವಕರ ಬೇಡಿಕೆ ಕೂಡ ಅದೇ ಆಗಿದೆ. ಹೈಮಾಂಡ್ ನಿರ್ಧರಿಸಿದರೆ ಅವರು ಸಂಪುಟ ಸೇರುತ್ತಾರೆ ಎಂದಿದ್ದಾರೆ.</p><p>ಶುಕ್ರವಾರ ಮಗ ಯತೀಂದ್ರನ ಜೊತೆ ದೆಹಲಿಗೆ ತೆರಳಿದ್ದ ಸಿದ್ದರಾಮಯ್ಯ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೇಟಿ ಮಾಡಿದ್ದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>