<p><strong>ಚಾಮರಾಜನಗರ:</strong> ಲೋಕಸಭಾ ಚುನಾವಣೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ಅವರು ಮೈಸೂರು ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ರೇಷ್ಮೆ ಮತ್ತು ಪಶು ಸಂಗೋಪನೆ ಹಾಗೂ <strong>ಚಾಮರಾಜನಗರ</strong> ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಹೇಳಿದರು.</p><p>ನಗರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನನಗೆ ಗೊತ್ತಿರುವ ಮಾಹಿತಿ ಪ್ರಕಾರ ಯತೀಂದ್ರ ಸ್ಪರ್ಧಿಸುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಇದನ್ನೇ ಹೇಳಿದ್ದಾರೆ ಎಂದರು.</p><p>ಆದರೆ ಬಿಜೆಪಿಯರು ಪದೇ ಪದೇ ಯತೀಂದ್ರ ಹೆಸರು ಪ್ರಸ್ತಾಪಿಸುತ್ತಿದ್ದಾರಲ್ಲ ಎಂದು ಕೇಳಿದ್ದಕ್ಕೆ, ‘ಬಿಜೆಪಿಯರಿಗೆ ಅದು ಚಟ’ ಎಂದು ಹೇಳಿದರು.</p>.<p><strong>ಅನಂತಕುಮಾರ ಹೆಗಡೆ ಸಂಸ್ಕಾರ ಇಲ್ಲದ ಮನುಷ್ಯ</strong></p><p>ಲೋಕಸಭಾ ಚುನಾವಣೆಯಲ್ಲಿ ಸಚಿವರು ಸ್ಪರ್ಧಿಸುವ ಕುರಿತಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ನನಗೆ ಈ ಬಗ್ಗೆ ಗೊತ್ತಿಲ್ಲ. ನಾನು ಸ್ಪರ್ಧಿಸುವುದಿಲ್ಲ. ಕಳೆದ ವಿಧಾನಸಭಾ ಚುನಾವಣೆಯೇ ನನ್ನ ಕೊನೆಯ ಚುನಾವಣೆ. ವಯಸ್ಸು ಬೇರೆ ಆಗಿದೆ. ಇನ್ನು ಮುಂದೆ ಸ್ಪರ್ಧಿಸುವುದಿಲ್ಲ’ ಎಂದರು.</p><p>ಉತ್ತರ ಕನ್ನಡ ಸಂಸದ ಅವರು ಮುಖ್ಯಮಂತ್ರಿ ಬಗ್ಗೆ ಅನಂತಕುಮಾರ ಹೆಗಡೆ ಅವರ ಹೇಳಿಕೆಗೆ ಬಗ್ಗೆ ಪ್ರತಿಕ್ರಿಯಿಸಿದ ಕೆ.ವೆಂಕಟೇಶ್, ‘ಆತ ಸಂಸ್ಕಾರ ಇಲ್ಲದ ಮನುಷ್ಯ. ನಾವು ಏನು ಹೇಳುವುದು’ ಎಂದು ಪ್ರಶ್ನಿಸಿದರು.</p>. ಪ್ರಚೋದನಕಾರಿ ಭಾಷಣ: ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಪ್ರಕರಣ ದಾಖಲು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಲೋಕಸಭಾ ಚುನಾವಣೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ಅವರು ಮೈಸೂರು ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ರೇಷ್ಮೆ ಮತ್ತು ಪಶು ಸಂಗೋಪನೆ ಹಾಗೂ <strong>ಚಾಮರಾಜನಗರ</strong> ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಹೇಳಿದರು.</p><p>ನಗರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನನಗೆ ಗೊತ್ತಿರುವ ಮಾಹಿತಿ ಪ್ರಕಾರ ಯತೀಂದ್ರ ಸ್ಪರ್ಧಿಸುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಇದನ್ನೇ ಹೇಳಿದ್ದಾರೆ ಎಂದರು.</p><p>ಆದರೆ ಬಿಜೆಪಿಯರು ಪದೇ ಪದೇ ಯತೀಂದ್ರ ಹೆಸರು ಪ್ರಸ್ತಾಪಿಸುತ್ತಿದ್ದಾರಲ್ಲ ಎಂದು ಕೇಳಿದ್ದಕ್ಕೆ, ‘ಬಿಜೆಪಿಯರಿಗೆ ಅದು ಚಟ’ ಎಂದು ಹೇಳಿದರು.</p>.<p><strong>ಅನಂತಕುಮಾರ ಹೆಗಡೆ ಸಂಸ್ಕಾರ ಇಲ್ಲದ ಮನುಷ್ಯ</strong></p><p>ಲೋಕಸಭಾ ಚುನಾವಣೆಯಲ್ಲಿ ಸಚಿವರು ಸ್ಪರ್ಧಿಸುವ ಕುರಿತಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ನನಗೆ ಈ ಬಗ್ಗೆ ಗೊತ್ತಿಲ್ಲ. ನಾನು ಸ್ಪರ್ಧಿಸುವುದಿಲ್ಲ. ಕಳೆದ ವಿಧಾನಸಭಾ ಚುನಾವಣೆಯೇ ನನ್ನ ಕೊನೆಯ ಚುನಾವಣೆ. ವಯಸ್ಸು ಬೇರೆ ಆಗಿದೆ. ಇನ್ನು ಮುಂದೆ ಸ್ಪರ್ಧಿಸುವುದಿಲ್ಲ’ ಎಂದರು.</p><p>ಉತ್ತರ ಕನ್ನಡ ಸಂಸದ ಅವರು ಮುಖ್ಯಮಂತ್ರಿ ಬಗ್ಗೆ ಅನಂತಕುಮಾರ ಹೆಗಡೆ ಅವರ ಹೇಳಿಕೆಗೆ ಬಗ್ಗೆ ಪ್ರತಿಕ್ರಿಯಿಸಿದ ಕೆ.ವೆಂಕಟೇಶ್, ‘ಆತ ಸಂಸ್ಕಾರ ಇಲ್ಲದ ಮನುಷ್ಯ. ನಾವು ಏನು ಹೇಳುವುದು’ ಎಂದು ಪ್ರಶ್ನಿಸಿದರು.</p>. ಪ್ರಚೋದನಕಾರಿ ಭಾಷಣ: ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಪ್ರಕರಣ ದಾಖಲು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>